ಬಸ್ಗಳ ಮೇಲಿನ ತಂಬಾಕು ಜಾಹೀರಾತು ತೆರವಿಗೆ ಗಡುವು: ಫೆ.18ರೊಳಗೆ ವರದಿ ಸಲ್ಲಿಕೆಗೆ KSRTC ಸೂಚನೆ
ಬೆಂಗಳೂರು: ಕರ್ನಾಟಕ ಸಾರಿಗೆ ನಿಗಮದ ಬಸ್ಗಳ ಹೊರಭಾಗದ ಮೇಲೆ ಪಾನ್ ಮಸಾಲಾ ಹಾಗೂ ಇತರ ತಂಬಾಕು ಉತ್ಪನ್ನಗಳ ಪ್ರಚಾರ ಕುರಿತು ಜಾಹೀರಾತು ಅಳವಡಿಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕೆಲವೆಡೆ ಕಾಲೇಜು ಯುವಕರು, ಸಾರ್ವಜನಿಕರು ಬಸ್ ಮೇಲಿನ ಜಾಹೀರಾತು ಕಿತ್ತು ಕಿಡಿ ಕಾರಿದ್ದು. ಈ ಆಕ್ಷೇಪ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬಸ್ಗಳು ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನ ಪ್ರಚೋದಿಸುವಂತಹ ಜಾಹೀರಾತುಗಳಿಗೆ ನಿರ್ಬಂಧಿಸಿ, ತೆರವಿಗೆ ಆದೇಶಿಸಿದ್ದಾರೆ. ಇದರನ್ವಯ ಎರಡು ವಾರದಲ್ಲಿ ತೆರವು ಮಾಡಿ ವರದಿ ಸಲ್ಲಿಸುವಂತೆ KSRTC ಸೂಚನೆ ನೀಡಿದೆ. ಅಧಿಕಾರಿಗಳು ಯಾವೆಲ್ಲ ಕ್ರಮ ಕೈಗೊಳ್ಳಲಿದ್ದಾರೆ?
ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ ಸಂಸ್ಥೆಯ ಬಸ್ಸುಗಳು/ಬಸ್ ನಿಲ್ದಾಣಗಳಲ್ಲಿ ತುಂಬಾಕು ಉತ್ಪನ್ನಗಳು ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹಿರಾತುಗಳನ್ನು ಪ್ರಚಾರ ಮಾಡಬಾರದು. ಸಾಕಷ್ಟು ಉತ್ಪನ್ನಗಳು ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಬಸ್ಸುಗಳಲ್ಲಿ /ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದರೆ, ಅವುಗಳಿಗೆ ನಿರ್ದಿಷ್ಟ ಸಮಯ ನಿಗದಿಪಡಿಸಿ, ನಿಗದಿತ ಸಮಯದೊಳಗೆ ತೆರವುಗೊಳಿಸುವಂತೆ ಸಚವರು ನಿರ್ದೇಶಿಸಿದ್ದಾರೆ.

ಅಧಿಕಾರಿಗಳು ಯಾವೆಲ್ಲ ಕ್ರಮ ಕೈಗೊಳ್ಳಬೇಕು?
ನಿಗಮದ ಬಸ್ಸುಗಳ ಮೇಲೆ ಅಳವಡಿಸುತ್ತಿರುವ ಜಾಹೀರಾತುಗಳು ಹಾಗೂ ನಿಗಮದ ಬಸ್ ನಿಲ್ದಾಣದ ಜಾಹೀರಾತು ಹೋರ್ಡಿಂಗ್ಸ್ ಮತ್ತು ಗ್ಲೋಸೈನ್ ಫಲಕಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ಪ್ರಚಾರ ಮಾಡದಂತೆ ಕ್ರಮ ವಹಿಸುವುದು. ಇನ್ನು ಮುಂದೆ ಈ ತರಹದ ಜಾಹೀರಾತುಗಳನ್ನು ಅಳವಡಿಸಬಾರದು/ಪ್ರದರ್ಶಿಸದಂತೆ ನೋಡಿಕೊಳ್ಳಬೇಕು.
ಸಾಕಷ್ಟು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ಹಲವಾರು ಜಾಹೀರಾತು ಬಸ್ಸುಗಳಲ್ಲಿ ಅಥವಾ ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾಗಿದೆ. ಮುಂದಿನ 15 ದಿನಗಳಲ್ಲಿ (ದಿನಾಂಕ 15.02.2026) ಈ ಬಗ್ಗೆ ಸಂಬಂಧಪಟ್ಟವರಿಗೆ ಸೂಚಿಸುವುದು ಹಾಗೂ ಈ ಬಗ್ಗೆ ಅನುಸರಣಾ ಕ್ರಮ ಕೈಗೊಳ್ಳಬೇಕಿದೆ.
ಫೆಬ್ರವರಿ 18 ರಂದು ವರದಿ ಸಲ್ಲಿಕೆ
ವಿಭಾಗಗಳ ನಿರ್ಮಾಣ ಬಸ್ ನಿಲ್ದಾಣದ ಜಾಹೀರಾತು ಹೋರ್ಡಿಂಗ್ಸ್ ಮತ್ತು ಗ್ಲೋಸೈನ್ ಫಲಕಗಳನ್ನು ಅಳವಡಿಸಲು ಆಯ್ಕೆಯಾಗಿದೆ ಪರವಾನಗಿದಾರರಿಗೆ ತುಂಬಾ ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ಪ್ರಚಾರ ಮಾಡದಂತೆ ನೋಟಿಸ್ ಜಾರಿ ಮಾಡುವುದು. ಸದರಿ ವಿಷಯದಲ್ಲಿ ಅಗತ್ಯ ಕ್ರಮ ವಹಿಸುವುದು. ಈ ಎಲ್ಲ ಕ್ರಮ ಕೈಗೊಂಡಿದ್ದರ ಕುರಿತು, ಸಚಿವರ ಆದೇಶ ಪಾಲನೆ ಬಗ್ಗೆ ಕಚೇರಿಗೆ ಮುಂದಿನ ತಿಂಗಳು ಫೆಬ್ರವರಿ 18 ರಂದು ಅನುಸರಣಾ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications