Breaking: ವರುಣಾರ್ಭಟ: ಸಂಕಷ್ಟಕ್ಕೊಳಗಾದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು, ಜುಲೈ 15: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅತಿವೃಷ್ಠಿಯಿಂದ ಹಾನಿಗೊಳಗಾದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಶುಕ್ರವಾರ (ಜುಲೈ 15) ಮಧ್ಯಾಹ್ನ 1:30 ಕ್ಕೆ ದೇವನಹಳ್ಳಿಯಿಂದ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದೆ. ಭಾರಿ ಮಳೆಹಾನಿಗೆ ಒಳಗಾಗಿರುವ ಇಪ್ಪತೊಂದು ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಹಾಸನ, ಬೀದರ, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟ, ವಿಜಯಪುರ, ರಾಯಚೂರು, ವಿಜಯನಗರ, ಚಾಮರಾಜನಗರ, ಮಂಡ್ಯ, ಬಳ್ಳಾರಿ ಜಿಲ್ಲೆಯ ಅಧಿಕಾರಿಗಳಿಂದ ಸಿಎಂ ಮಾಹಿತಿ ಪಡೆಯಲಿದ್ದಾರೆ.

Today CM Basavaraj Bommai Meeting With Officials Over Rain Effect

ಸಭೆಯಲ್ಲಿ ಈ ಜಿಲ್ಲೆಗಳ ಜಿಲ್ಲಾಧಿಕಾರಿ, ಸಿಎಒ, ಎಸ್ಪಿಗಳಿಂದ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತು ಹಾನಿಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸಿಎಂ ಜೊತೆಗೆ ಸಂಬಂಧಿಸಿದ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಇನ್ನು, "ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾಗಿರುವ ಕಾರವಾರ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗೆ ಮುಂದಿನ ವಾರ ಪ್ರವಾಸ ಕೈಗೊಳ್ಳುವುದಾಗಿ" ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜುಲೈ 13 ರಂದು ಉಡುಪಿಯಲ್ಲಿ ತಿಳಿಸಿದ್ದರು.

Recommended Video

      England ವಿರುದ್ಧ ಹೀನಾಯವಾಗಿ ಸೋತ್ಮೇಲೆ ಟೀಂ‌ ಇಂಡಿಯಾಗೇ ಬಿಗ್ ಶಾಕ್ *Cricket | OneIndia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+