ವಿಧಾನಸಭಾ ಉಪ ಚುನಾವಣೆ: ಇಂದು ನಾಮಪತ್ರಗಳ ಪರಿಶೀಲನೆ!
ಬೆಂಗಳೂರು, ಅ. 11: ರಾಜ್ಯದಲ್ಲಿ ಉಪ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ವಿಜಯಪುರ ಜಿಲ್ಲೆ ಸಿಂದಗಿ ಹಾಗೂ ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಹಾನಗಲ್ ಕ್ಷೇತ್ರದಲ್ಲಿ ದಾಖಲೆ ಸಂಖ್ಯೆಯಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅ. 30 ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅ. 8 ಕೊನೆಯ ದಿನವಾಗಿತ್ತು.
ಇಂದು ಅಕ್ಟೋಬರ್ 11 ರಂದು ಎಲ್ಲ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮೂರು ಪ್ರಮುಖ ಪಕ್ಷಗಳ ಜೊತೆಗೆ ಇತರ ರಾಜಕೀಯ ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮೂರು ರಾಜಕೀಯ ಪಕ್ಷಗಳಿಗೆ ಇದು ಪ್ರತಿಷ್ಠೆಯ ಉಪ ಚುನಾವಣೆಯಾಗಿದೆ. ಹೀಗಾಗಿ ಚುನಾವಣಾ ಕಣದಲ್ಲಿ ಹೆಚ್ಚು ಅಭ್ಯಥಿಗಳು ಇದ್ದಷ್ಟು ರಾಜಕೀಯ ನಾಯಕರಿಗೆ ಆತಂಕ ಹೆಚ್ಚು. ಹೀಗಾಗಿ ಇಂದು ನಡೆಯಲಿರುವ ನಾಮಪತ್ರ ಪರಿಶೀಲನೆ ಮೇಲೆ ಎಲ್ಲ ರಾಜಕೀಯ ಪಕ್ಷಗಳ ನಾಯಕರ ಗಮನವಿದೆ.

ನಾಮಪತ್ರಗಳು "ಸಿಂಧು'ವಾಗುವುದು ಹೇಗೆ?
ವಿಧಾನಸಭೆ ಉಪ ಚುನಾವಣೆಗೆ ಸ್ಪರ್ಧೆ ಬಯಸಿ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರವನ್ನು ಇಂದು ಸೋಮವಾರ ಪರಿಶೀಲನೆ ಮಾಡಲಾಗುತ್ತಿದೆ. ಪ್ರಮುಖವಾಗಿ ಅಭ್ಯರ್ಥಿಗಳು ಸಲ್ಲಿಸಿರುವ ದಾಖಲೆಗಳನ್ನು ಚುನಾವಣಾಧಿಕಾರಿಗಳು ಪರಿಶೀಲನೆ ಮಾಡಲಿದ್ದಾರೆ. ನಾಮಪತ್ರದೊಂದಿಗೆ ಅಭ್ಯರ್ಥಿಯು ಕ್ರಿಮಿನಲ್ ಅಪರಾಧದಲ್ಲಿ ಜೈಲುವಾಸ ಅನುಭವಿಸಿದ ಬಗ್ಗೆ, ಸ್ಪರ್ಧಿ ಹಾಗೂ ಆತನ ಕುಟುಂಬ ಜೊತೆಗೆ ಅಭ್ಯರ್ಥಿಯ ಅವಲಂಬಿತರು ಹೊಂದಿರುವ ಆಸ್ತಿ ವಿವರ, ಸರ್ಕಾರದಕ್ಕೆ ಸಲ್ಲಿಸಬೇಕಾದ ಸಾಲದ (ಇದ್ದಲ್ಲಿ) ಮೊತ್ತ ಹಾಗೂ ರಾಜಕೀಯ ಪಕ್ಷಗಳ ಬಿ ಪಾರಂ ಲಗತ್ತಿಸಿದರಬೇಕು. ಈ ದಾಖಲೆಗಳು ಇಲ್ಲದ ಅಥವಾ ತಪ್ಪಾಗಿರುವ ನಾಮಪತ್ರಗಳು ಅಸಿಂಧು ಆಗುತ್ತವೆ. ಈ ಪರಿಶೀಲನೆ ಇಂದು ನಡೆಯಲಿದೆ.

ಒಟ್ಟು ಅಭ್ಯರ್ಥಿಗಳು ಹಾಗೂ ಒಟ್ಟು ನಾಮಪತ್ರಗಳು!
ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಳೆದ ಶುಕ್ರವಾರ (ಅ.8) ಕೊನೆಯ ದಿನವಾಗಿತ್ತು. ಹೀಗಾಗಿ ಮೂರು ಪಕ್ಷಗಳ ಅಭ್ಯರ್ಥಿಗಳೂ ಸೇರಿದಂತೆ ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಒಬ್ಬ ಅಭ್ಯರ್ಥಿಯು ಒಂದಕ್ಕಿಂತ ಹೆಚ್ಚು ನಾಮಪತ್ರವ ಸಲ್ಲಿಸಲು ಅವಕಾಶವಿದೆ. ಸಲ್ಲಿಸಿದ ನಾಮಪತ್ರಗಳಲ್ಲಿ ಸರಿಯಾಗಿರುವ ನಾಮಪತ್ರವನ್ನು ಸಿಂಧು ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈಗ ಚುನಾವಣೆ ನಡೆಯಲಿರುವ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ 37 ಅಭ್ಯರ್ಥಿಗಳು ಒಟ್ಟು 57 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಉಪ ಚುನಾವಣೆಯಲ್ಲಿ ಸಿಂದಗಿಯಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರು, ಕಾಂಗ್ರೆೆಸ್ ಪಕ್ಷದಿಂದ ಅಶೋಕ ಮನಗೂಳಿ, ಜೆಡಿಎಸ್ ಪಕ್ಷದಿಂದ ನಾಜಿಯಾ ಶಕೀಲ್ ಅಂಗಡಿ ಸೇರಿದಂತೆ ಒಟ್ಟು ಎಂಟು ಅಭ್ಯರ್ಥಿಗಳಿಂದ 12 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ, ರಾಷ್ಟ್ರೀಯ ಸಮಾಜ ಪಕ್ಷದಿಂದ ತಲಾ ಒಂದು ಹಾಗೂ ಪಕ್ಷೇತರರಿಂದ ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ.

ಹಾನಗಲ್ ಕ್ಷೇತ್ರದಲ್ಲಿ ಕಣದಲ್ಲಿ ಉಳಿಯುತ್ತಾರಾ ಎಲ್ಲ ಅಭ್ಯರ್ಥಿಗಳು?
ಅದೇ ರೀತಿ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿಯ ಶಿವರಾಜ್ ಸಜ್ಜನ್, ಕಾಂಗ್ರೆೆಸ್ ಪಕ್ಷದಿಂದ ಶ್ರೀನಿವಾಸ್ ಮಾನೆ, ಜೆಡಿಎಸ್ ಪಕ್ಷದಿಂದ ನಿಯಾಜ್ ಶೇಕ್ ಸೇರಿದಂತೆ ಒಟ್ಟು 29 ಅಭ್ಯರ್ಥಿಗಳಿಂದ 45 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ 2, ಲೋಕಶಕ್ತಿ 3, ಕನ್ನಡ ದೇಶದ ಪಕ್ಷ 1, ರೈತ ಭಾರತ ಪಕ್ಷ 1 ಹಾಗೂ ಪಕ್ಷೇತರರಿಂದ 28 ನಾಮಪತ್ರಗಳು ಸಲ್ಲಿಕೆಯಾಗಿವೆ.
Recommended Video

ನಾಮಪತ್ರ ವಾಪಾಸ್ ಪಡೆಯಲು ಕೊನೆ ದಿನ!
ಇಂದು ಎಲ್ಲ ಅಭ್ಯರ್ಥಿಗಳ ನಾಮಪತ್ರವನ್ನು ಪರಿಶೀಲನೆ ಮಾಡಲಾಗುತ್ತದೆ. ಬಳಿಕ ಸಿಂಧುವಾದ ನಾಮಪತ್ರಗಖ ಕುರಿತು ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಸಂಜೆ ಮಾಹಿತಿ ನೀಡುತ್ತಾರೆ. ಜೊತೆಗೆ ನಾಮಪತ್ರ ವಾಪಾಸ್ ಪಡೆಯಲು ಇದೇ ಅಕ್ಟೋಬರ್ 13 ಕೊನೆಯ ದಿನವಾಗಿದೆ. ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಇಚ್ಛಿಸದ ಅಭ್ಯರ್ಥಿಯು ಅ. 13ರೊಳಗೆ ನಾಮಪತ್ರ ವಾಪಾಸ್ ಪಡೆಯಲು ಅವಕಾಶವಿದೆ. ಅಕ್ಟೋಬರ್ 30 ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಡೆದು ಫಲಿತಾಂಶ ಬರಲಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications