ಟೋಲ್ ದರ ಏರಿಕೆ: ಉತ್ತರ ಕೇಳಿ ನೈಸ್ ಕಂಪನಿಗೆ ನೋಟಿಸ್
ಬೆಂಗಳೂರು, ಜುಲೈ 11: ಟೋಲ್ ಸರ ಏರಿಸಿದ್ದ ನೈಸ್ ಕಂಪನಿಗೀಗ ಸಂಕಷ್ಟ ಎದುರಾಗಿದೆ. ಟೋಲ್ ದರ ಏರಿಕೆಯನ್ನು 7 ದಿನದೊಳಗೆ ಹಿಂತೆಗೆದುಕೊಳ್ಳದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿ ಲೋಕೋಪಯೋಗಿ ಇಲಾಖೆ ಕೊನೆಗೂ ನೈಸ್ ಸಂಸ್ಥೆಗೆ ನೋಟಿಸ್ ಜಾರಿಗೊಳಿಸಿದೆ.
ಜುಲೈ 1 ರಿಂದ 'ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್' (ನೈಸ್) ಕಂಪನಿ ಶೇ. 33 ರಷ್ಟು ಟೋಲ್ ದರ ಏರಿಕೆ ಮಾಡಿತ್ತು. ಇದು ಸಾರ್ವಜನಿಕರಿಗೆ ವಿಪರೀತ ಹೊರೆಯಾಗಿತ್ತು. ಮತ್ತು ವ್ಯಾಪಕ ಆಕ್ರೋಶಕ್ಕೂ ಗುರಿಯಾಗಿತ್ತು.

"ಫ್ರೇಮ್ ವರ್ಕ್ ಅಗ್ರಿಮೆಂಟ್ ಜಾರಿಗೊಳಿಸದೇ ನೈಸ್ ಕಂಪನಿ ಕರ್ತವ್ಯ ಲೋಪ ಎಸಗಿದೆ. ಈ ಕುರಿತು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಆದರೆ ಅದಿನ್ನೂ ಇತ್ಯರ್ಥ ಆಗಿಲ್ಲ. ಹೀಗಿದ್ದೂ ಟೋಲ್ ದರ ಹೆಚ್ಚಿಸಿರುವುದು ಅಕ್ರಮ. ಕೂಡಲೇ ಈ ನಿರ್ಧಾರ ಹಿಂಪಡೆಯಿರಿ," ಎಂದು ಕಂಪನಿಗೆ ಸ್ಪಷ್ಟವಾಗಿ ನೋಟಿಸ್ ನಲ್ಲಿ ಹೇಳಲಾಗಿದೆ.
ಫ್ರೇಮ್ ವರ್ಕ್ ಅಗ್ರಿಮೆಂಟ್ ನಂತೆ ಪೆರಿಫರಲ್ ಮತ್ತು ಲಿಂಕ್ ರಸ್ತೆಯನ್ನು 2012 ರ ಮಾರ್ಚ್ 29 ರೊಳಗೆ ಕಾಂಕ್ರೀಟ್ ರಸ್ತೆಯನ್ನಾಗಿ ಪರಿವರ್ತಿಸಬೇಕಿತ್ತು. ಆದರೆ ಡಾಂಬರ್ ರಸ್ತೆಯನ್ನು ಕಾಂಕ್ರೀಟ್ ರಸ್ತೆಯನ್ನಾಗಿ ಪರಿವರ್ತಿಸಿಲ್ಲ. ಈ ಸಂಬಂಧ ಲೋಕೋಪಯೋಗಿ ಇಲಾಖೆ ಫೆಬ್ರುವರಿ 5, 2016ರಂದು ಕಂಪನಿಗೆ ನೋಟಿಸ್ ನೀಡಿದೆ.
'ಇದನ್ನು ಪ್ರಶ್ನಿಸಿ ಕಂಪೆನಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಟೋಲ್ ದರ ಹೆಚ್ಚಳಕ್ಕೆ ಅವಕಾಶವಿಲ್ಲ. ದರ ಪರಿಷ್ಕರಣೆ ಮತ್ತು ಏರಿಕೆ ರಾಜ್ಯ ಸರ್ಕಾರದ ಅಧಿಸೂಚನೆ ಮೂಲಕವೇ ಆಗಬೇಕು. ಆಗ ಮಾತ್ರ ಅದಕ್ಕೆ ಮಾನ್ಯತೆ' ಎಂದು ನೋಟಿಸ್ ನಲ್ಲಿ ಸ್ಪಷ್ಟಪಡಿಸಲಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications