ಬೆಂಗಳೂರು: ಈ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರ ಹೆಚ್ಚಳ: 2025 ರವರೆಗೂ ಇದೇ ದರ.!
ಬೆಂಗಳೂರು, ಮಾರ್ಚ್, 28: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಸೇರಿದಂತೆ ಈ ಹೆದ್ದಾರಿಗಳ ಟೋಲ್ ಶುಲ್ಕ ಏಪ್ರಿಲ್ 1ರಿಂದ ಹೆಚ್ಚಳ ಆಗುತ್ತದೆ ಎನ್ನುವ ಮಾಹಿತಿ ಲಭ್ಯವಾಹಿದೆ. ಹಾಗಾದರೆ ಯಾವೆಲ್ಲ ಹೆದ್ದಾರಿಗಳ ಟೋಲ್ ಶುಲ್ಕ ಹೆಚ್ಚಳ ಮಾಡಲಾಗುತ್ತಿದೆ ಹಾಗೂ ಎಷ್ಟು ನಿಗದಿ ಮಾಡಲಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಏಪ್ರಿಲ್ 1ರಿಂದ ವಾಹನ ಸವಾರರು ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರು-ಹೈದರಾಬಾದ್ ಹೆದ್ದಾರಿ ಮತ್ತು ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್ನ ಹೊಸಕೋಟೆ-ದೇವನಹಳ್ಳಿ ವಿಭಾಗವನ್ನು ಬಳಕೆ ಹೆಚ್ಚಿನ ಟೋಲ್ ಶುಲ್ಕವನ್ನು ಪಾವತಿಸ ಮಾಡಬೇಕಾಗುತ್ತದೆ.

ಸಗಟು ಬೆಲೆ ಸೂಚ್ಯಂಕ ಪ್ರಕಾರ ಟೋಲ್ ಶುಲ್ಕ ಶೇಕಡಾ 3ರಿಂದ 14ರಷ್ಟು ಹೆಚ್ಚಳ ಆಗಿದೆ. ಈ ಶುಲ್ಕ 2025ರ ಮಾರ್ಚ್ 31ರವರೆಗೂ ಜಾರಿಯಲ್ಲಿರುತ್ತದೆ. ಆದರೆ ಬೆಂಗಳೂರು-ಮೈಸೂರು ಹೆದ್ದಾರಿ ಮತ್ತು ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಟೋಲ್ ಶುಲ್ಕವನ್ನು ಶೇಕಡಾ 3ರಷ್ಟು ಹೆಚ್ಚಳ ಮಾಡಲಾಗಿದೆ. ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್ನ ಹೊಸಕೋಟೆ-ದೇವನಹಳ್ಳಿ ವಿಭಾಗದಲ್ಲಿ ಸಂವಾರ ಮಾಡುವ ವಾಹನಗಳು ಶೇಕಡಾ 14ರಷ್ಟು ಹೆಚ್ಚು ಪಾವತಿ ಮಾಡಬೇಕಾಗುತ್ತದೆ.
2023ರ ನವೆಂಬರ್ 17ರಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ STRRನ 39.6 ಕಿಲೋ ಮೀಟರ್ ದೊಡ್ಡಬಳ್ಳಾಪುರ-ಹೊಸಕೋಟೆ ವಿಭಾಗಕ್ಕೆ ಟೋಲ್ ಸಂಗ್ರಹಿಸಲು ಆರಂಭಿಸಿದ ಕೇವಲ 6 ತಿಂಗಳೊಳಗೆ ಶುಲ್ಕ ಹೆಚ್ಚಳ ಮಾಡಲಾಗಿದೆ. ಇದಕ್ಕೆ ವಾಹನ ಸವಾರರು ಹಾಗೂ ಸಾರ್ವಜನಿಕರು ಕೆಂಡಕಾರುತ್ತಿದ್ದಾರೆ.
ಸ್ಯಾಟಲೈಟ್ ಟೌನ್ ರಿಂಗ್ ರೋಡ್ನ ದಾಬಾಸ್ ಪೇಟೆ-ದೊಡ್ಡಬಳ್ಳಾಪುರ ವಿಭಾಗದಲ್ಲಿ ಟೋಲ್ ಶುಲ್ಕವನ್ನು ಏಪ್ರಿಲ್ನಲ್ಲಿ ಆರಂಭಿಸಲಾಗುತ್ತದೆ ಎಂದು ತಿಳಿದುಬಂದಿದೆ. ಮಾರ್ಚ್ 11ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 80 ಕಿಲೋ ಮೀಟರ್ ವ್ಯಾಪ್ತಿಯ STRRನ ಎರಡು ವಿಸ್ತರಣೆಗಳನ್ನು ಉದ್ಘಾಟನೆ ಮಾಡಿದ್ದರು.
ದಾಬಾಸ್ ಪೇಟೆ-ದೊಡ್ಡಬಳ್ಳಾಪುರ ಮಾರ್ಗವು ಸಾರ್ವಜನಿಕರಿಗೆ ಮುಕ್ತ ಆಗಿದ್ದು, ಟೋಲ್ ಸಂಗ್ರಹಿಸಲು ಗುತ್ತಿಗೆದಾರರ ಆಯ್ಕೆಗೆ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ











Click it and Unblock the Notifications