ಕರ್ನಾಟಕದಲ್ಲಿ ಎರಡು ಟೋಲ್ಗಳಲ್ಲಿ ನಿಯಮಬಾಹಿರವಾಗಿ 75.95 ಕೋಟಿ ರೂಪಾಯಿ ಸಂಗ್ರಹ: ಸಿಎಜಿ ವರದಿ
ಕರ್ನಾಟಕದಲ್ಲಿ ಹಾದು ಹೋಗಿರುವ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇರುವ ಎರಡು ಟೋಲ್ ಪ್ಲಾಜಾಗಳಲ್ಲಿ ನಿಯಮಗಳನ್ನು ಗಾಳಿಗೆ ತೂರಿ 75.95 ಕೋಟಿ ಸಂಗ್ರಹ ಮಾಡಲಾಗಿದೆ ಎಂದು ಮಹಾಲೇಖಪಾಲರ (ಸಿಎಜಿ) ವರದಿಯಲ್ಲಿ ತಿಳಿಸಿದೆ.
ನಿಯಮ ಮೀರಿ ಟೋಲ್ ಸಂಗ್ರಹ ಮಾಡುತ್ತಿರುವ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೀಡಿರುವ ಉತ್ತರಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸಿಎಜಿ ವರದಿಯಲ್ಲಿ ತಿಳಿಸಿದೆ.

'ದಕ್ಷಿಣ ಭಾರತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಘಟಕಗಳ ನಿರ್ವಹಣೆ' ಬಗ್ಗೆ ಸಿಎಜಿ ಸಿದ್ದಪಡಿಸಿರುವ ವರದಿಯಲ್ಲಿ ಇದನ್ನು ಉಲ್ಲೇಖಿಸಲಾಗಿದೆ. ದಕ್ಷಿಣ ಭಾರತದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಒಟ್ಟು 151 ಟೋಲ್ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ಅವರುಗಳಲ್ಲಿ 41 ಘಟಕಗಳನ್ನು ಪರಿಶೋಧನೆಗೆ ಆಯ್ಕೆ ಮಾಡಿಕೊಳ್ಳಲಾಗಿತ್ತು.
2017-18ನೇ ಸಾಲಿನಿಂದ 2022ರ ಜನವರಿವರೆಗೆ ಸಂಗ್ರಹಿಸಿದ ಟೋಲ್ ಬಗ್ಗೆ ಪರಿಶೋಧನೆ ನಡೆಸಲಾಗಿದೆ. 41 ಟೋಲಗಳ ಪೈಕಿ ಮೂರು ಟೋಲ್ಗಳಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದ್ದು, ನಿಯಮ ಬಾಹಿರವಾಗಿ 124.18 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ.
ಈ ಮೂರು ಹೆದ್ದಾರಿಗಳಲ್ಲಿ ಎರಡು ಹೆದ್ದಾರಿಗಳು ಕರ್ನಾಟಕದಲ್ಲಿವೆ ಎನ್ನುವುದು ಗಮನಾರ್ಹ ಸಂಗತಿ. ಇನ್ನೊಂದು ಟೋಲ್ ಘಟಕ ಆಂಧ್ರಪ್ರದೇಶದಲ್ಲಿದೆ.
ನಿಯಮಗಳು ಹೇಳುವುದೇನು?
ನಾಲ್ಕು ಪಥಗಳ ರಾಷ್ಟ್ರೀಯ ಹೆದ್ದಾರಿಗಳನ್ನು ಆರು ಪಥಗಳಿಗೆ ಮೇಲ್ದರ್ಜೆಗೆ ಏರಿಸಿದ ಸಂದರ್ಭದಲ್ಲಿ ಟೋಲ್ ಶುಲ್ಕವನ್ನು ಕಡಿಮೆ ಮಾಡಬೇಕಾಗುತ್ತದೆ. ಮಾತ್ರವಲ್ಲದೆ, ಕೊಟ್ಟ ಗಡುವಿನಲ್ಲಿ ಕೆಲಸ ಹೆದ್ದಾರಿ ನಿರ್ಮಾಣ ಕಾರ್ಯ ಪೂರ್ಣವಾಗಲದೇ ಇದ್ದರೆ, ಕಾಮಗಾರಿ ಮುಗಿಯಬೇಕಾಗಿದ್ದ ದಿನಾಂಕದಿಂದ ಕಾಮಗಾರಿ ಪೂರ್ಣವಾಗುವವರೆಗೆ ಟೋಲ್ ಶುಲ್ಕ ವಿಧಿಸುವಂತಿಲ್ಲ ಎಂದು ಹೆದ್ದಾರಿ ಬಳಕೆದಾರರ ಶುಲ್ಕ ನಿಯಮ -2008 ಹೇಳಿದೆ.
ರಾಜ್ಯದ ಹೆಬ್ಬಾಳು, ಚಳಗೇರಿ, ಆಂಧ್ರಪ್ರದೇಶದ ನಾಥವಲಕ ಟೋಲ್ ಘಟಕಗಳಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲೇ ಶುಲ್ಕ ಸಂಗ್ರಹಿಸಲಾಗಿದ್ದು, ಸಿಎಜಿ ಇದನ್ನು ಅಕ್ರಮ ಎಂದು ಹೇಳಿದೆ.
ದಕ್ಷಿಣ ಭಾರತದಲ್ಲಿ ಒಟ್ಟು 154 ಕೋಟಿ ಸಂಗ್ರಹ
ನಾಥವಲಸ ಟೋಲ್ ಕೇಂದ್ರದ ಶುಲ್ಕವನ್ನು ಸೇರಿಸಿದರೆ ದಕ್ಷಿಣ ಭಾರತದಲ್ಲೇ ನಿಯಮಬಾಹಿರವಾಗಿ 154 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ ಎಂದು ಸಿಎಜಿ ವರದಿಯಲ್ಲಿ ತಿಳಿಸಿದೆ.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ












Click it and Unblock the Notifications