ಹಬ್ಬಗಳ ಹೊತ್ತಲ್ಲೇ ದಿಢೀರ್ ಬೆಲೆ ಏರಿಕೆ ಶಾಕ್ ಕೊಟ್ಟ ತರಕಾರಿ, ಯಾವುದು ಗೊತ್ತಾ?
ಈಗಾಗಲೇ ದುಬಾರಿ ದುನಿಯಾದಿಂದ ಕಂಗಾಲಾಗಿರುವ ಜನರಿಗೆ ಇದೀಗ ತರಕಾರಿಗಳು ಬೆಲೆ ಏರಿಕೆ ಶಾಕ್ ನೀಡಲು ಹೊರಟಿವೆ. ಕಳೆದ ವಾರ ಕಡಿಮೆ ಇದ್ದ ಟೊಮೆಟೋ ಬೆಲೆಯು ಇದ್ದಕ್ಕಿದ್ದಂತೆ ದುಪ್ಪಟ್ಟಾಗಿದೆ ಎಂದು ವರದಿಯಾಗಿದೆ. ವಾರದ ಹಿಂದೆ ಒಂದು ಕೆ.ಜಿ.ಟೊಮೆಟೋ ದರವು ಕೇವಲ 30ರಿಂದ 40 ರೂಪಾಯಿ ಮಾತ್ರವಿತ್ತು. ಈಗ ದಿಢೀರನೇ ಬೆಲೆ ಏರಿದ್ದು, ಕೆ.ಜಿಗೆ 80 ರೂಪಾಯಿವರೆಗೆ ದಾಟಿದೆ ಎಂದು ವರದಿಯಾಗಿದೆ.
ನಷ್ಟದಿಂದ ತತ್ತರಿಸಿದ್ದ ಟೊಮೆಟೋ ಬೆಳೆಗಾರರು ಫುಲ್ ಖುಷಿಯಾಗಿದ್ದಾರೆ. ಟೊಮೆಟೋ ಬೆಳೆಗೆ ರೋಗ ಹಾಗೂ ಇನ್ನಿತರ ಕಾರಣಗಳಿಂದ ರೈತರು ಭಾರಿ ನಷ್ಟ ಅನುಭವಿಸಿದ್ದರು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿಯೂ ಬೆಳೆ ಹಾನಿಯಾಗಿ ಇಳುವರಿ ತಗ್ಗಿದೆ. ಮತ್ತೊಂದೆಡೆ ಸಾಲು ಸಾಲು ಹಬ್ಬಗಳು ಬರುತ್ತಿರುವುದರಿಂದ ಕರ್ನಾಟಕ ಮಾತ್ರವಲ್ಲದೆ ಬೇರೆ ರಾಜ್ಯಗಳಿಂದ ಕೂಡ ಟೊಮೇಟೋಗೆ ಡಿಮ್ಯಾಂಡ್ ಹೆಚ್ಚಾಗಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ತೆಲಂಗಾಣ, ಒಡಿಶಾ ಸೇರಿದಂತೆ ಹಲವು ರಾಜ್ಯಗಳಿಂದ ಕರ್ನಾಟಕದ ಟೊಮೇಟೋಗೆ ಡಿಮ್ಯಾಂಡ್ ಹೆಚ್ಚಾಗಿದೆಯಂತೆ. ಭಾರಿ ಬೇಡಿಕೆ ಹೆಚ್ಚಾದ ಕಾರಣ ಸದ್ಯಕ್ಕೆ ಕೋಲಾರದಿಂದ ಬಾಂಗ್ಲಾದೇಶಕ್ಕೆ ಟೊಮೆಟೋ ರಫ್ತು ನಿಲ್ಲಿಸಲಾಗಿದೆ.
ಕೇವಲ ನಾಲ್ಕು ದಿನಗಳಲ್ಲಿ ಟೊಮೆಟೋ ಬೆಲೆ ನಿರಂತರವಾಗಿ ಏರಿಕೆ ಕಂಡಿದ್ದು, ಕೋಲಾರದ ಟೊಮೆಟೋಗೆ ಇನ್ನಿಲ್ಲದ ಡಿಮ್ಯಾಂಡ್ ಸೃಷ್ಟಿಯಾಗಿದೆ. ಚಿನ್ನದ ನಾಡು ಕೋಲಾರದಲ್ಲಿ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆ ಇದ್ದು, ಇಲ್ಲಿಗೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳೆದ ಟೊಮೆಟೋ ಮಾರಾಟಕ್ಕೆ ಬರುತ್ತದೆ.

ಕೋಲಾರ ಜಿಲ್ಲೆಯು ಆಂಧ್ರಪ್ರದೇಶ, ತಮಿಳುನಾಡು ಜಿಲ್ಲೆಗಳಿಗೆ ಹೊಂದಿಕೊಂಡಂತೆ ಇರುವುದರಿಂದ ಅಲ್ಲಿಂದಲೂ ಪ್ರತಿನಿತ್ಯ ಬಂದು ಟೊಮೆಟೋ ಖರೀದಿಸುವವರು ಹೆಚ್ಚಾಗಿದ್ದಾರೆ. ಇಲ್ಲಿಂದ ಬರೋಬ್ಬರಿ ಇಪ್ಪತ್ತಕ್ಕೂ ಹೆಚ್ಚು ರಾಜ್ಯಗಳಿಗೆ ಟೊಮೆಟೋ ಪೂರೈಕೆಯಾಗುತ್ತಿದೆ. ಹಾಗಾಗಿ ಟೊಮೆಟೋ ಬೆಳೆಗಾರರಿಗೆ ಸದ್ಯ ನಿಜವಾದ ಹಬ್ಬ ಬಂದಂತಾಗಿದೆ.
ಇಳುವರಿ ತಗ್ಗಿರುವುದರಿಂದ ಮಾರುಕಟ್ಟೆಗಳಿಗೆ ಬರುತ್ತಿರುವ ಟೊಮೆಟೋ ಪ್ರಮಾಣವು ಇಳಿಮುಖವಾಗುತ್ತಿದೆ. ಈ ಕಾರಣದಿಂದಲೇ ಬೆಲೆಯೂ ದಿಢೀರ್ ಏರಿಕೆ ಕಂಡಿದೆ. ಸದ್ಯ ದಸರಾ, ದೀಪಾವಳಿ ಹಬ್ಬಗಳು ಸಾಲಿನಲ್ಲಿರುವುದರಿಂದ ಟೊಮೆಟೋ ಬೆಲೆ ಮತ್ತಷ್ಟು ಏರಬಹುದು ಎಂದು ವ್ಯಾಪಾರಿಗಳು ಅಂದಾಜಿಸಿದ್ದಾರೆ.
ರೈತರು ಈ ಸಲ ನಾಟಿ ಮಾಡಿರುವ ಟೊಮೆಟೋ ಬೆಳೆಯಲ್ಲಿ ಶೇ 50ರಷ್ಟು ಹಾನಿಗೆ ಒಳಗಾಗಿದೆ. ವಿವಿಧ ರೋಗಗಳಿಂದಲೂ ಟೊಮೆಟೊ ಗಿಡಗಳು ತೋಟದಲ್ಲೇ ನಶಿಸಿವೆ. ಮತ್ತೊಂದೆಡೆ ನರ್ಸರಿಯವರು ಕಳಪೆ ಟೊಮೆಟೋ ಸಸಿಗಳನ್ನು ವಿತರಣೆ ಮಾಡಿರುವ ಆರೋಪಗಳೂ ಕೇಳಿಬಂದಿವೆ. ಇತ್ತೀಚೆಗೆ ಹವಾಮಾನ ವೈಪರೀತ್ಯದಿಂದ ಮಳೆ ಕೂಡ ಅಬ್ಬರಿಸಿದೆ. ಈ ಎಲ್ಲ ಕಾರಣಗಳಿಂದ ಟೊಮೆಟೋ ಗುಣಮಟ್ಟದ ಇಳುವರಿ ಸುಮಾರು ಅರ್ಧದಷ್ಟು ತಗ್ಗಿದೆ. ಹಾಗಾಗಿ ಸಾಮಾನ್ಯವಾಗಿಯೇ ಬೆಲೆ ಏರಿಕೆ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ.
ಒಂದೆಡೆ ರೈತರಿಗೆ ಉತ್ತಮ ಬೆಲೆ ಸಿಕ್ಕಿದ್ದರೂ ತೋಟದಲ್ಲಿ ಬೆಲೆ ಇಲ್ಲವಾಗಿದೆ. ಇತ್ತ ಗ್ರಾಹಕರಿಗಂತೂ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಮಧ್ಯದಲ್ಲಿರುವ ವ್ಯಾಪಾರಿಗಳು ಮಾತ್ರ ಕೈತುಂಬಾ ಹಣ ನೋಡಲಿದ್ದಾರೆ ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳುತ್ತಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications