ರಾಜ್ಯಪಾಲರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಕಾಂಗ್ರೆಸ್
ನವದೆಹಲಿ, ಮೇ 17: ಸರಕಾರ ರಚಿಸಲು ಅಗತ್ಯ ಸಂಖ್ಯಾ ಬಲವಿದ್ದರೂ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟವನ್ನು ಸರಕಾರ ರಚನೆಗೆ ಆಹ್ವಾನಿಸದೇ, ಅತೀ ದೊಡ್ಡ ಪಕ್ಷ ಬಿಜೆಪಿಯನ್ನು ಸರಕಾರ ರಚನೆಗೆ ಆಹ್ವಾನಿಸಿರುವ ರಾಜ್ಯಪಾಲರ ನಿರ್ಧಾರ ಖಂಡಿಸಿ ದೇಶದಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್ ಕರೆ ನೀಡಿದೆ.
ಎಲ್ಲಾ ರಾಜ್ಯ ಕೇಂದ್ರಗಳು, ಜಿಲ್ಲಾ ಕೇಂದ್ರಗಳು, ತಾಲೂಕು ಕೇಂದ್ರಗಳಲ್ಲಿ ನಾಳೆ ಅಂದರೆ ಶುಕ್ರವಾರ ಪ್ರತಿಭಟನೆ ನಡೆಸುವಂತೆ ಎಐಸಿಸಿ ಪ್ರಧಾನಿ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಪತ್ರ ಬರೆದಿದ್ದಾರೆ.
ಯಡಿಯೂರಪ್ಪ ಪ್ರಮಾಣ ವಚನ, ಜೆಡಿಎಸ್ನಿಂದ ಪ್ರತಿಭಟನೆ
ಎಲ್ಲಾ ಪದಾಧಿಕಾರಿಗಳಿಗೆ ಈ ಪತ್ರವನ್ನು ಬರೆದಿದ್ದು ರಾಜ್ಯಪಾಲರ ನಿರ್ಧಾರ ಖಂಡಿಸಿ ಧರಣಿ ನಡೆಸಿ, ಈ ಸಂದರ್ಭದಲ್ಲಿ ಆಕರ್ಷಕ ಘೋಷಣೆಗಳನ್ನು ಕೂಗಿ, ವಿನೂತನ ಪ್ರತಿಭಟನೆಗಳನ್ನು ನಡೆಸಿ ಗಮನ ಸೆಳೆಯಿರಿ ಎಂದು ಅವರು ಕರೆ ನೀಡಿದ್ದಾರೆ.
ಜೊತೆಗೆ ರಾಜ್ಯಪಾಲರ ಅನ್ಯಾಯದ ವಿರುದ್ಧ ಪತ್ರಿಕಾಗೋಷ್ಠಿಗಳನ್ನು ನಡೆಸಿ, ಮನವಿ ಪತ್ರಗಳನ್ನು ನೀಡುವುದಲ್ಲದೆ ಜನರಿಗೆ ಇದನ್ನು ಮನವರಿಕೆ ಮಾಡಿ ಎಂದೂ ಅವರು ಹೇಳಿದ್ದಾರೆ.
All India Congress Committee General Secy Ashok Gehlot issues letter requesting all Pradesh Congress Committees, leaders & workers to organise state-wide dharnas at state capitals&dist HQs tomorrow to protest against K'taka Guv for inviting BS Yedurappa for making govt in K'taka. pic.twitter.com/5dCrttZZyp
— ANI (@ANI) May 17, 2018
ಅವರ ಈ ಮನವಿಯ ಬೆನ್ನಿಗೆ ದೇಶದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೀದಿಗೆ ಇಳಿಯಲು ಸಜ್ಜಾಗಿದ್ದಾರೆ. ಈಗಾಗಲೇ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಆರಂಭವಾಗಿವೆ. ಮುಂಬೈ, ಜೈಪುರ, ಲಕ್ನೋದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಶುಕ್ರವಾರ ದೇಶದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದು, ಆರ್.ಜೆ.ಡಿ ಕಾರ್ಯಕರ್ತರು ಕೂಡ ಬಿಹಾರದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.