ಚಂದ್ರಗ್ರಹಣ, ಡಿಕೆಶಿ ವಿಚಾರಣೆ ಮತ್ತು ಇತರ ಸುದ್ದಿಗಳು
ಸೋಮವಾರ (ಆಗಸ್ಟ್ 7) ಗಮನ ಸೆಳೆದ ಸುದ್ದಿಗಳು. ಡಿಕೆಶಿವಕುಮಾರ್ ವಿಚಾರಣೆ, ಚಂದ್ರಗ್ರಹಣ, ರಾಘವೇಂದ್ರ ಸ್ವಾಮಿಗಳ ಆರಾಧನೆ, ಆಗಸ್ಟ್ 22ಕ್ಕೆ ಬ್ಯಾಂಕ್ ನೌಕರರ ಮುಷ್ಕರ - ಹೆಚ್ಚು ಗಮನ ಸೆಳೆದ ಸುದ್ದಿಗಳು.
ಬೆಂಗಳೂರು, ಆಗಸ್ಟ್ 8: ಸೋಮವಾರದ (ಆಗಸ್ಟ್ 7) ಸುದ್ದಿಗಳಲ್ಲಿ ಜನರ ಗಮನವನ್ನು ಬಹುವಾಗಿ ಸೆಳೆದ ಸುದ್ದಿಗಳೆಂದರೆ, ಅದು ಚಂದ್ರಗ್ರಹಣ, ಆದಾಯ ತೆರಿಗೆ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ವಿಚಾರಣೆ, ಇದರ ಜತೆಗೆ ಮಂತ್ರಾಲಯದಲ್ಲಿ ರಾಘವೇಂದ್ರ ಶ್ರೀಗಳ ಆರಾಧನೆ ಇತ್ಯಾದಿ. ಇವು ಬಿಟ್ಟರೆ, ಆಗಸ್ಟ್ 22ರಂದು ಬ್ಯಾಂಕ್ ನೌಕರರ ಮುಷ್ಕರ, ಗುಜರಾತ್ ರಾಜ್ಯಸಭಾ ಚುನಾವಣೆಗೆ ಸಂಬಂಧಪಟ್ಟ ವಿಚಾರಗಳು ಓದುಗರ ಆಸಕ್ತಿ ಕೆರಳಿಸಿದ್ದವು. ಆ ಎಲ್ಲಾ ಸುದ್ದಿಗಳಲ್ಲಿ ಟಾಪ್ 10 ಸುದ್ದಿಗಳ ಹೂರಣವನ್ನು ಸಂಕ್ಷಿಪ್ತವಾಗಿ ನಿಮಗೆ ನೀಡುವ ಪ್ರಯತ್ನ ಇಲ್ಲಿದೆ.
1. ವರ್ಷದ ಮೊದಲ ಭಾಗಶಃ ಚಂದ್ರಗ್ರಹಣ: ತಿಳಿಯಬೇಕಾದ 5 ಸಂಗತಿ
ಈ ವರ್ಷದ ಮೊದಲ ಭಾಗಶಃ ಚಂದ್ರಗ್ರಹಣ ಆಗಸ್ಟ್ 7ರ ಮಧ್ಯರಾತ್ರಿ ಸಂಭವಿಸಿದೆ. ರಾತ್ರಿ 10:52 ಕ್ಕೆ ಗ್ರಹಣ ಆರಂಭವಾಗಿ, 12:48 ರವರೆಗೆ ಗ್ರಹಣ ಕಾಣಿಸಿಕೊಂಡಿತ್ತು. ಆದರೆ, ಭಾರತದ ಬಹುತೇಕ ಭಾಗಗಳಲ್ಲಿ ಇದು ಸರಿಯಾಗಿ ಗೋಚರಿಸಲಿಲ್ಲ. ಇದಕ್ಕೆ ಕಾರಣ, ಮಳೆ ಹಾಗೂ ಆಗಸದಲ್ಲಿ ಕವಿದ ಮೋಡಗಳು.

2. ತೆರಿಗೆ ಇಲಾಖೆ ಕಚೇರಿಗೆ ವಿಚಾರಣೆಗಾಗಿ ಬಂದ ಇಂಧನ ಸಚಿವ ಡಿಕೆ ಶಿವಕುಮಾರ್
ಇತ್ತೀಚೆಗೆ, ಆದಾಯ ತೆರಿಗೆ ಇಲಾಖೆಯ ದಾಳಿಗೆ ಒಳಪಟ್ಟಿದ್ದ ಇಂಧನ ಸಚಿವ ಡಿಕೆ ಶಿವಕುಮಾರ್ ಅವರು, ಸೋಮವಾರ ಆದಾಯ ತೆರಿಗೆ ಇಲಾಖೆಗೆ ವಿಚಾರಣೆಗಾಗಿ ಆಗಮಿಸಿದ್ದರು. ಇದೇ ವೇಳೆ ಡಿಕೆಶಿ ಅವರ ಆಪ್ತರೂ ಆದ ಜ್ಯೋತಿಷಿ ದ್ವಾರಕಾನಾಥ್, ಡಿಕೆಶಿ ಸಹೋದರ ಡಿಕೆ ಸುರೇಶ್ ಕೂಡಾ ಇಲಾಖೆ ಕಚೇರಿಗೆ ಆಗಮಿಸಿ ಈ ವಿಚಾರಣೆ ಎದುರಿಸಬೇಕಾಯಿತು.

3. ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ರಾಯರ ಆರಾಧನೆ
ರಾಘವೇಂದ್ರ ಸ್ವಾಮಿಗಳ 346ನೇ ಆರಾಧನೆ ಮಹೋತ್ಸವಕ್ಕೆ ಮಂತ್ರಾಲಯವು ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ. ದೇವಸ್ಥಾನವೂ ಒಳಗೊಂಡಂತೆ ಮುಖ್ಯ ಬೀದಿಯ ಹಲವು ಕಟ್ಟಡಗಳಿಗೆ ವಿದ್ಯುತ್ ಅಲಂಕಾರ ಮಾಡಲಾಗಿದೆ. ಆಗಸ್ಟ್ ಎಂಟರಿಂದ ಹತ್ತನೇ ತಾರೀಕಿನವರೆಗೆ ಆರಾಧನೆ ನಡೆಯುತ್ತದೆ. ಈ ಮೂರೂ ದಿನ ರಾಯರ ಮಠದ ಪೀಠಾಧಿಪತಿಗಳಾದ ಸುಬುಧೇಂದ್ರ ತೀರ್ಥರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
4. ಗುಜರಾತ್ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಗೆ ಸವಾಲು
ಗುಜರಾತ್ ನ ರಾಜ್ಯಸಭಾ ಚುನಾವಣೆಯು ಕರ್ನಾಟಕದ ಗಮನವನ್ನು ಬಹುತೇಕವಾಗಿ ಸೆಳೆದಿದೆ. ಈ ಚುನಾವಣೆಯ ಹಿನ್ನೆಲೆಯಲ್ಲಿ, ಬಿಜೆಪಿಯ ಕುದುರೆ ವ್ಯಾಪಾರಕ್ಕೆ ಹೆದರಿ, ಅಲ್ಲಿನ 44 ಕಾಂಗ್ರೆಸ್ ಶಾಸಕರು, ಬೆಂಗಳೂರಿನ ಈಗಲ್ಟನ್ ರೆಸಾರ್ಟ್ ಗೆ ಪಲಾಯನ ಮಾಡಿದ್ದು ಈಗ ಹಳೇ ವಿಚಾರ. ಈಗ ತಮ್ಮ ಸ್ವಸ್ಥಾನಕ್ಕೆ ಮರಳಿರುವ ಕಾಂಗ್ರೆಸ್ ಶಾಸಕರು ತಮ್ಮ ನಾಯಕ ಅಹ್ಮದ್ ಪಟೇಲ್ ಅವರನ್ನು ಗೆಲ್ಲಿಸಿಕೊಳ್ಳುತ್ತಾರೆಯೇ ಎಂಬುದು ಕುತೂಹಲದ ಸಂಗತಿ.
5. ಆಗಸ್ಟ್ 22ರಿಂದ ಬ್ಯಾಂಕ್ ನೌಕರರ ಮುಷ್ಕರ
ಇತರೆ ಕೆಲವು ಔದ್ಯೋಗಿಕ ವಲಯಗಳಿಗೆ ಹೋಲಿಸಿದರೆ, ವೇತನ, ರಜೆಗಳು, ದುಡಿಮೆಯ ಅವಧಿ ಸೇರಿದಂತೆ ಅನೇಕ ಸವಲತ್ತುಗಳಿದ್ದರೂ, ವರ್ಷಕ್ಕೆರಡು ಬಾರಿ ವೇತನ ಪರಿಷ್ಕರಣೆ ಮುಂತಾದ ಹಲವಾರು ಬೇಡಿಕೆಗಳನ್ನಿಟ್ಟುಕೊಂಡು ಮುಷ್ಕರಕ್ಕಿಳಿಯುವ ಬ್ಯಾಂಕ್ ನೌಕರರು ಈ ಬಾರಿ ಮತ್ತೆ ಧರಣಿಗೆ ಕೂಡಲು ನಿರ್ಧರಿಸಿದ್ದಾರೆ. ಇಡೀ ಬ್ಯಾಂಕಿಂಗ್ ವಲಯವೇ ಮುಷ್ಕರದಲ್ಲಿ ಪಾಲ್ಗೊಳ್ಳಲಿದೆ ಎಂದು ಹೇಳಲಾಗಿದೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications