ಪ್ರತಿಷ್ಠಿತ ಕ್ಷೇತ್ರ : ಬೆಂಗಳೂರು ಉತ್ತರ ಯಾರ ಮಡಿಲಿಗೆ?
ಬೆಂಗಳೂರು, ಏ. 7 : ಮಾಜಿ ಸಿಎಂ ಡಿವಿ ಸದಾನಂದ ಗೌಡರು ಲೋಕಸಭೆ ಚುನಾವಣೆ ಕಣಕ್ಕೆ ಧುಮುಕಿರುವುದರಿಂದ ಬೆಂಗಳೂರು ಉತ್ತರ ಕ್ಷೇತ್ರ ಜನರಲ್ಲಿ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಕ್ಷೇತ್ರದಲ್ಲಿ ಆಂತರಿಕ ಚುನಾವಣೆ ನಡೆಸುವ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಬಿಜೆಪಿಗೆ ಸೆಡ್ಡು ಹೊಡೆಯಲು ಸಜ್ಜಾಗಿದೆ. ಜೆಡಿಎಸ್ ಮಾಜಿ ಪೊಲೀಸ್ ಅಧಿಕಾರಿಯನ್ನು ಕಣಕ್ಕಿಳಿಸಿ ಚುನಾವಣೆಗೆ ಖಾಕಿ ಖದರ್ ತುಂಬಿದೆ.
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಡಿವಿ ಸದಾನಂದ ಗೌಡ, ಕಾಂಗ್ರೆಸ್ ಪಕ್ಷದಿಂದ ಸಿ.ನಾರಾಯಣಸ್ವಾಮಿ, ಜೆಡಿಎಸ್ ಪಕ್ಷದಿಂದ ಮಾಜಿ ಪೊಲೀಸ್ ಅಧಿಕಾರಿ ಅಬ್ದುಲ್ ಅಜೀಂ, ಆಮ್ ಆದ್ಮಿ ಪಕ್ಷದಿಂದ ಬಾಬು ಮ್ಯಾಥ್ಯೂ ಕಣದಲ್ಲಿದ್ದಾರೆ. ಎಲ್ಲಾ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದು, ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ ಎಂಬುದು ಸದ್ಯದ ಅಭಿಪ್ರಾಯ.

ಉತ್ತರ ಕ್ಷೇತ್ರದ ಟಿಕೆಟ್ ಪಡೆಯಲು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಪೈಪೋಟಿ ನಡೆದಿತ್ತು. ಕಾಂಗ್ರೆಸ್ ಅಂತಿಮವಾಗಿ ಆಂತರಿಕ ಚುನಾವಣೆ ನಡೆಸಿ ಸಿ.ನಾರಾಯಣಸ್ವಾಮಿ ಅವರನ್ನು ಅಭ್ಯರ್ಥಿ ಎಂದು ಘೋಷಿಸಿತು. ಆರ್.ಅಶೋಕ್, ಶೋಭಾ ಕರಂದ್ಲಾಜೆ ಮತ್ತು ಡಿವಿ ಸದಾನಂದ ಗೌಡರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಪ್ರಯತ್ನ ನಡೆಸಿದ್ದರು. ಅಂತಿಮವಾಗಿ ಗೌಡರು ಕಣಕ್ಕಿಳಿಸಿದ್ದಾರೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಕೊನೆ ಕ್ಷಣದವರೆಗೂ ಉತ್ತರದ ಅಭ್ಯರ್ಥಿ ಬಗ್ಗೆ ಮೌನ ವಹಿಸಿದ್ದ ಜೆಡಿಎಸ್ ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಉಳಿದಿರುವಾಗ ಮಾಜಿ ಪೊಲೀಸ್ ಅಧಿಕಾರಿ ಅಬ್ದುಲ್ ಅಜೀಂ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿತು. ಆಮ್ ಆದ್ಮಿ ಪಕ್ಷ ಕಾನೂನಿನ ಪ್ರೊಫೆಸರ್ ಆಗಿ ವಿವಿಧ ವಿವಿಗಳಲ್ಲಿ ಉನ್ನತ ಹುದ್ದೆ ಅಲಂಕರಿಸಿರುವ ಬಾಬು ಮ್ಯಾಥ್ಯೂ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ.
ಡಿವಿ ಸದಾನಂದ ಗೌಡ
ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಪಡೆಯಲು ಡಿವಿ ಸದಾನಂದ ಗೌಡ, ಆರ್.ಅಶೋಕ್ ಮತ್ತು ಶೋಭಾ ಕರಂದ್ಲಾಜೆ ಅವರ ನಡುವೆ ಸ್ಪರ್ಧೆ ಉಂಟಾಗಿತ್ತು. ಕೊನೆಗೆ ಶೋಭಾ ಕರಂದ್ಲಾಜೆ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ತೆರಳಿದರೆ, ಆರ್.ಅಶೋಕ್ ಸ್ಪರ್ಧೆಯಿಂದ ಹಿಂದೆ ಸರಿದರು. ಇದರಿಂದಾಗಿ ಕ್ಷೇತ್ರದ ಟಿಕೆಟ್ ಸದಾನಂದ ಗೌಡರಿಗೆ ಸಿಕ್ಕಿತ್ತು. [ಸದಾನಂದ ಗೌಡರ ಸಂದರ್ಶನ ಓದಿ]
ಮೋದಿ ಅಲೆ ಮತ್ತು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಆರ್.ಅಶೋಕ್ ಅವರಿಗಿರುವ ಹಿಡಿತ ಸದಾನಂದ ಗೌಡರ ಬೆಂಬಲಕ್ಕಿದೆ. ಮುಖ್ಯಮಂತ್ರಿ ಆದ ಅವಧಿಯಲ್ಲಿ ಅವರು ಮಾಡಿದ ಕಾರ್ಯಗಳು ಸೇರಿದರೆ, ಸದಾನಂದ ಗೌಡರ ಗೆಲುವು ನಿಶ್ಚಿತ. ಸದಾನಂದ ಗೌಡರಿಗೆ ಗೆಲುವು ಎಂಬ ಮಾತುಗಳು ಈಗಾಗಲೇ ಕ್ಷೇತ್ರದಲ್ಲಿ ಕೇಳಿಬರುತ್ತಿವೆ.
ಸಿ.ನಾರಾಯಣ ಸ್ವಾಮಿ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ 1996ರಲ್ಲಿ ನಾರಾಯಣಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ಸಂಸತ್ತಿಗೆ ಆಯ್ಕೆಯಾಗಿದ್ದರು. ಜೆಡಿಎಸ್ ನಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ ಅವರು ಸಿದ್ದರಾಮಯ್ಯ ಜೆಡಿಎಸ್ ನಲ್ಲಿದ್ದಾಗ ಅವರ ಪರಮಾಪ್ತಗಿದ್ದರು. ದೇವನಹಳ್ಳಿಯವರಾದ ನಾರಾಯಣಸ್ವಾಮಿ ಸದ್ಯ ಕಾಂಗ್ರೆಸ್ ಪಕ್ಷದಲ್ಲಿದ್ದು, ಉತ್ತರದಿಂದ ಸ್ಪರ್ಧೆಗೆ ಇಳಿದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲೂ ಉತ್ತರ ಕ್ಷೇತ್ರದ ಟಿಕೆಟ್ ಗಾಗಿ ಪೈಪೋಟಿ ಏರ್ಪಟ್ಟಿತ್ತು. ಪಕ್ಷದ ನಾಯಕರಾದ ಬಿ.ಎಲ್.ಶಂಕರ್, ಸಿ.ನಾರಾಯಣಸ್ವಾಮಿ, ನೆಲ ನರೇಂದ್ರ ಬಾಬು, ಸಚಿವ ಕೃಷ್ಣ ಭೈರೇಗೌಡ ಹೆಸರು ಸಹ ಕೇಳಿಬಂದಿತ್ತು. ಕೊನೆಗೆ ಆಂತರಿಕ ಚುನಾವಣೆ ಮೊರೆ ಹೋದ ಪಕ್ಷ ಯಶಸ್ವಿಯಾಗಿ ಚುನಾವಣೆ ನಡೆಸಿತು. ಸಿ.ನಾರಾಯಣಸ್ವಾಮಿ ಆಂತರಿಕ ಚುನಾವಣೆಯಲ್ಲಿ ಜಯಗಳಿಸಿ ಟಿಕೆಟ್ ಪಡೆದಿದ್ದಾರೆ. ಸಿದ್ದರಾಮಯ್ಯ ಪರಮಾಪ್ತರಾಗಿರುವ ನಾರಾಯಣ ಸ್ವಾಮಿ ಗೆಲುವಿನ ಉತ್ಸಾಹದಲ್ಲಿದ್ದಾರೆ.
ಅಬ್ದುಲ್ ಅಜೀಂ
ನಿವೃತ್ತ ಪೊಲೀಸ್ ಅಧಿಕಾರಿ ಅಬ್ದುಲ್ ಅಜೀಂ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ. ಸ್ವತಃ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಬ್ದುಲ್ ಅಜೀಂ ಅವರಿಗೆ ಬಿಫಾರಂ ನೀಡಿ ಕಣಕ್ಕಿಳಿಸಿದ್ದಾರೆ. ಕೊನೆ ಕ್ಷಣದವರೆಗೂ ಅಭ್ಯರ್ಥಿ ಹುಡುಕಾಟದಲ್ಲಿದ್ದ ಜೆಡಿಎಸ್ ನಾಮಪತ್ರ ಸಲ್ಲಿಕೆಗೆ ಒಂದು ದಿನ ಮುಂಚಿತವಾಗಿ ಅಜೀಂ ಹೆಸರನ್ನು ಘೋಷಿಸಿತು. ದೇವೇಗೌಡರು ಅಜೀಂ ಪರ ಪ್ರಚಾರ ನಡೆಸುತ್ತಿದ್ದು, ಅವರು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಾಬು ಮ್ಯಾಥ್ಯೂ
ಆಮ್ ಆದ್ಮಿ ಪಕ್ಷ ಸಹ ಉತ್ತರ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಪ್ರೊ. ಬಾಬು ಮ್ಯಾಥ್ಯೂ ಕ್ಷೇತ್ರದ ಅಭ್ಯರ್ಥಿ. ಕಾನೂನಿನ ಪ್ರೊಫೆಸರ್ ಆಗಿ ವಿವಿಧ ವಿವಿಗಳಲ್ಲಿ ಉನ್ನತ ಹುದ್ದೆ ಅಲಂಕರಿಸಿರುವ ಬಾಬು ಮ್ಯಾಥ್ಯೂ ಅವರು ನೆಹರೂ ಅವರ ಚಿಂತನೆಯನ್ನು ಅಳವಡಿಸಿಕೊಂಡವರು. ಕಾರ್ಮಿಕರ ಒಕ್ಕೂಟದ ಉಪಾಧ್ಯಕ್ಷರಾಗಿದ್ದವರು. ಕಾರ್ಮಿಕರ ಹಕ್ಕು, ಕಾನೂನು, ಮಕ್ಕಳ ಹಕ್ಕು, ಮಾನವ ಹಕ್ಕು ಈ ಬಗ್ಗೆ ಆಳವಾದ ಜ್ಞಾನವುಳ್ಳವರು. ಇವರು ಉತ್ತರದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications