Get Updates
Get notified of breaking news, exclusive insights, and must-see stories!

ಬಂಜಾರ, ಭೋವಿಗಳಂತಹ ಸ್ಪೃಶ್ಯ ದಲಿತರನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡಲ್ಲ

ಬೆಂಗಳೂರು, ಏಪ್ರಿಲ್‌ 5: ಬಂಜಾರರು ಮತ್ತು ಭೋವಿಗಳಂತಹ ಸ್ಪೃಶ್ಯ ದಲಿತರ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಎ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಾರಾಯಣಸ್ವಾಮಿ, 30 ವರ್ಷಗಳ ಹಿಂದೆಯೇ ಒಳಮೀಸಲಾತಿಗೆ ಆಗ್ರಹಿಸಿ ಹಲವು ದಲಿತ ಸಂಘಟನೆಗಳು ಆಂದೋಲನ ನಡೆಸಿದ್ದವು. ಕಾಂಗ್ರೆಸ್ ನೇತೃತ್ವದ ಹಿಂದಿನ ಸರ್ಕಾರ ಯಾವಾಗಲೂ ಕಮಿಷನ್‌ಗಳ ಮೇಲೆ ಕಮಿಷನ್‌ಗಳನ್ನು ರಚಿಸುವ ಮೂಲಕ ಈ ಸಮಸ್ಯೆಯನ್ನೇ ನೆಪವಾಗಿಟ್ಟುಕೊಂಡಿದ್ದಾಗ ಬೊಮ್ಮಾಯಿ ಸರ್ಕಾರ ಆ ಸಮುದಾಯಗಳ ಆಶಯಗಳನ್ನು ಈಡೇರಿಸುವ ಲೆಕ್ಕಾಚಾರದ ಯೋಚನೆ ಕೈಗೊಂಡಿದೆ ಅವರು ವಿವರಿಸಿದರು.

Touched Dalits like Banjaras, Bhovis not left out of SC list: A Narayanaswamy

ಬಂಜಾರರನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡುವುದಿಲ್ಲ ಎಂದು ಒತ್ತಿ ಹೇಳಿದ ಅವರು, ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಯು ಪಟ್ಟಿಯಲ್ಲಿರುವ ಜಾತಿಗಳು ಎಸ್‌ಸಿ ಮೀಸಲಾತಿಯ ಲಾಭವನ್ನು ಅನುಭವಿಸುತ್ತದೆ ಎಂದು ನಂಬುತ್ತದೆ. ಬಂಜಾರ, ಭೋವಿ ಮತ್ತು ಇತರ ಸ್ಪೃಶ್ಯ ದಲಿತರು ತಮ್ಮ ಜಾತಿಗಳನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡುತ್ತಾರೆ ಎಂಬ ಆತಂಕವು ಆಧಾರ ರಹಿತವಾಗಿದೆ. ರಾಜ್ಯ ಸರ್ಕಾರವು ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸುಗಳನ್ನು ಅಂಗೀಕರಿಸಿಲ್ಲ. ಅದು ಕೇವಲ ಒಳಮೀಸಲಾತಿ ನೀಡಲು ಉಲ್ಲೇಖದ ಅಂಶವಾಗಿ ತೆಗೆದುಕೊಂಡಿದೆ ಅಂದರು.

ಎಲ್ಲ ದಲಿತ ಸಮುದಾಯದವರು ಒಗ್ಗೂಡಿ ಇಂತಹ ದಿಟ್ಟ ಹೆಜ್ಜೆ ಇಟ್ಟ ಬೊಮ್ಮಾಯಿ ಅವರನ್ನು ಹುಬ್ಬಳ್ಳಿಯಲ್ಲಿ ಸನ್ಮಾನ ಸಮಾರಂಭ ಆಯೋಜಿಸುವ ಮೂಲಕ ಅಭಿನಂದಿಸಬೇಕು. ಎಸ್‌ಸಿ ಸಮುದಾಯಗಳ ಒಕ್ಕೂಟವು ಏಪ್ರಿಲ್ 6ರಂದು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ನನ್ನ ಬಂಜಾರ ಸಹೋದರರು ಮತ್ತು ನಮ್ಮ ಸಮುದಾಯಗಳ ಇತರ ಜಾತಿಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ತೊಡೆದುಹಾಕಲು ಮತ್ತು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ಮನವಿ ಮಾಡುತ್ತೇನೆ" ಎಂದು ಅವರು ಹೇಳಿದರು.

Touched Dalits like Banjaras, Bhovis not left out of SC list: A Narayanaswamy

ಕಾಂಗ್ರೆಸ್ ನಾಯಕರು ಇದು ಸರಿ ಇಲ್ಲ ನಾವು ಈ ಮೀಸಲಾತಿಯನ್ನು ವಾಪಸ್‌ ಪಡೆಯುತ್ತೇವೆ ಎಂದು ಹೇಳುತ್ತಿದ್ದಾರೆ. ನಮ್ಮ‌ ಮುಖ್ಯಮಂತ್ರಿಗಳು ಮೀಸಲಾತಿ ಹೆಚ್ಚಿಸಿ, ಒಳ ಮೀಸಲಾತಿಗೆ ಸೇರಿಸಿದ್ದಾರೆ. ಸಿದ್ದರಾಮಯ್ಯನವರಿಗೆ ರಾಜ್ಯದ ಜನರು ಉತ್ತರ ಕೊಡುತ್ತಾರೆ. ಕಾಂಗ್ರೆಸ್ ನಾಯಕರು ಇದು ಸರಿ ಇಲ್ಲ ನಾವು ಈ ಮೀಸಲಾತಿಯನ್ನು ವಾಪಸ್‌ ಪಡೆಯುತ್ತೇವೆ ಎಂದು ಹೇಳುತ್ತಿದ್ದಾರೆ. ನಮ್ಮ‌ ಮುಖ್ಯಮಂತ್ರಿಗಳು ಮೀಸಲಾತಿ ಹೆಚ್ಚಿಸಿ, ಒಳ ಮೀಸಲಾತಿಗೆ ಸೇರಿಸಿದ್ದಾರೆ. ಸಿದ್ದರಾಮಯ್ಯನವರಿಗೆ ರಾಜ್ಯದ ಜನರು ಉತ್ತರ ಕೊಡುತ್ತಾರೆ ಎಂದು ಅವರು ಹೇಳಿದ್ದಾರೆ.

ಮಂಗಳವಾರ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗೆ ಒಳಮೀಸಲಾತಿ ನೀಡಿರುವುದನ್ನು ವಿರೋಧಿಸಿ ಬಂಜಾರ ಸಮುದಾಯದ ಮಠಾಧೀಶರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾವೇರಿಯ ಶಿಗ್ಗಾಂವ್‌ ಪಟ್ಟಣದ ಬಿಆರ್‌ ಅಂಬೇಡ್ಕರ್‌ ಪ್ರತಿಮೆ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ಪರಿಶಿಷ್ಟ ಜಾತಿಗೆ ಒಳಮೀಸಲಾತಿ ನೀಡುವ ರಾಜ್ಯ ಸಚಿವ ಸಂಪುಟದ ನಿರ್ಧಾರದ ವಿರುದ್ಧ ಬಂಜಾರ ಸಮುದಾಯದ ಜನರು ಶಿವಮೊಗ್ಗ, ವಿಜಯನಗರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಊರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಗುಂಡೂರು ಗ್ರಾಮದ ತಿಪ್ಪೇಸ್ವಾಮಿ ಶ್ರೀಗಳ ನೇತೃತ್ವದಲ್ಲಿ ಬಂಜಾರ ಸಮುದಾಯದ ಪ್ರತಿಭಟನಾಕಾರರು ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ್ದರು. ಬಿಜೆಪಿ ಸರಜಾರ ಒಳಮೀಸಲಾತಿ ನೀಡಿ ತಮ್ಮ ಸಮುದಾಯಕ್ಕೆ ಅನ್ಯಾಯ ಎಸಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಬಂಜಾರ ಸಮುದಾಯದ ಅಪಾರ ಭಕ್ತರೊಂದಿಗೆ ಸ್ವಾಮೀಜಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+