ಬಂಜಾರ, ಭೋವಿಗಳಂತಹ ಸ್ಪೃಶ್ಯ ದಲಿತರನ್ನು ಎಸ್ಸಿ ಪಟ್ಟಿಯಿಂದ ಕೈಬಿಡಲ್ಲ
ಬೆಂಗಳೂರು, ಏಪ್ರಿಲ್ 5: ಬಂಜಾರರು ಮತ್ತು ಭೋವಿಗಳಂತಹ ಸ್ಪೃಶ್ಯ ದಲಿತರ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಎ ನಾರಾಯಣಸ್ವಾಮಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಾರಾಯಣಸ್ವಾಮಿ, 30 ವರ್ಷಗಳ ಹಿಂದೆಯೇ ಒಳಮೀಸಲಾತಿಗೆ ಆಗ್ರಹಿಸಿ ಹಲವು ದಲಿತ ಸಂಘಟನೆಗಳು ಆಂದೋಲನ ನಡೆಸಿದ್ದವು. ಕಾಂಗ್ರೆಸ್ ನೇತೃತ್ವದ ಹಿಂದಿನ ಸರ್ಕಾರ ಯಾವಾಗಲೂ ಕಮಿಷನ್ಗಳ ಮೇಲೆ ಕಮಿಷನ್ಗಳನ್ನು ರಚಿಸುವ ಮೂಲಕ ಈ ಸಮಸ್ಯೆಯನ್ನೇ ನೆಪವಾಗಿಟ್ಟುಕೊಂಡಿದ್ದಾಗ ಬೊಮ್ಮಾಯಿ ಸರ್ಕಾರ ಆ ಸಮುದಾಯಗಳ ಆಶಯಗಳನ್ನು ಈಡೇರಿಸುವ ಲೆಕ್ಕಾಚಾರದ ಯೋಚನೆ ಕೈಗೊಂಡಿದೆ ಅವರು ವಿವರಿಸಿದರು.

ಬಂಜಾರರನ್ನು ಎಸ್ಸಿ ಪಟ್ಟಿಯಿಂದ ಕೈಬಿಡುವುದಿಲ್ಲ ಎಂದು ಒತ್ತಿ ಹೇಳಿದ ಅವರು, ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಯು ಪಟ್ಟಿಯಲ್ಲಿರುವ ಜಾತಿಗಳು ಎಸ್ಸಿ ಮೀಸಲಾತಿಯ ಲಾಭವನ್ನು ಅನುಭವಿಸುತ್ತದೆ ಎಂದು ನಂಬುತ್ತದೆ. ಬಂಜಾರ, ಭೋವಿ ಮತ್ತು ಇತರ ಸ್ಪೃಶ್ಯ ದಲಿತರು ತಮ್ಮ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ಕೈಬಿಡುತ್ತಾರೆ ಎಂಬ ಆತಂಕವು ಆಧಾರ ರಹಿತವಾಗಿದೆ. ರಾಜ್ಯ ಸರ್ಕಾರವು ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸುಗಳನ್ನು ಅಂಗೀಕರಿಸಿಲ್ಲ. ಅದು ಕೇವಲ ಒಳಮೀಸಲಾತಿ ನೀಡಲು ಉಲ್ಲೇಖದ ಅಂಶವಾಗಿ ತೆಗೆದುಕೊಂಡಿದೆ ಅಂದರು.
ಎಲ್ಲ ದಲಿತ ಸಮುದಾಯದವರು ಒಗ್ಗೂಡಿ ಇಂತಹ ದಿಟ್ಟ ಹೆಜ್ಜೆ ಇಟ್ಟ ಬೊಮ್ಮಾಯಿ ಅವರನ್ನು ಹುಬ್ಬಳ್ಳಿಯಲ್ಲಿ ಸನ್ಮಾನ ಸಮಾರಂಭ ಆಯೋಜಿಸುವ ಮೂಲಕ ಅಭಿನಂದಿಸಬೇಕು. ಎಸ್ಸಿ ಸಮುದಾಯಗಳ ಒಕ್ಕೂಟವು ಏಪ್ರಿಲ್ 6ರಂದು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ನನ್ನ ಬಂಜಾರ ಸಹೋದರರು ಮತ್ತು ನಮ್ಮ ಸಮುದಾಯಗಳ ಇತರ ಜಾತಿಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ತೊಡೆದುಹಾಕಲು ಮತ್ತು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ಮನವಿ ಮಾಡುತ್ತೇನೆ" ಎಂದು ಅವರು ಹೇಳಿದರು.

ಕಾಂಗ್ರೆಸ್ ನಾಯಕರು ಇದು ಸರಿ ಇಲ್ಲ ನಾವು ಈ ಮೀಸಲಾತಿಯನ್ನು ವಾಪಸ್ ಪಡೆಯುತ್ತೇವೆ ಎಂದು ಹೇಳುತ್ತಿದ್ದಾರೆ. ನಮ್ಮ ಮುಖ್ಯಮಂತ್ರಿಗಳು ಮೀಸಲಾತಿ ಹೆಚ್ಚಿಸಿ, ಒಳ ಮೀಸಲಾತಿಗೆ ಸೇರಿಸಿದ್ದಾರೆ. ಸಿದ್ದರಾಮಯ್ಯನವರಿಗೆ ರಾಜ್ಯದ ಜನರು ಉತ್ತರ ಕೊಡುತ್ತಾರೆ. ಕಾಂಗ್ರೆಸ್ ನಾಯಕರು ಇದು ಸರಿ ಇಲ್ಲ ನಾವು ಈ ಮೀಸಲಾತಿಯನ್ನು ವಾಪಸ್ ಪಡೆಯುತ್ತೇವೆ ಎಂದು ಹೇಳುತ್ತಿದ್ದಾರೆ. ನಮ್ಮ ಮುಖ್ಯಮಂತ್ರಿಗಳು ಮೀಸಲಾತಿ ಹೆಚ್ಚಿಸಿ, ಒಳ ಮೀಸಲಾತಿಗೆ ಸೇರಿಸಿದ್ದಾರೆ. ಸಿದ್ದರಾಮಯ್ಯನವರಿಗೆ ರಾಜ್ಯದ ಜನರು ಉತ್ತರ ಕೊಡುತ್ತಾರೆ ಎಂದು ಅವರು ಹೇಳಿದ್ದಾರೆ.
ಮಂಗಳವಾರ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗೆ ಒಳಮೀಸಲಾತಿ ನೀಡಿರುವುದನ್ನು ವಿರೋಧಿಸಿ ಬಂಜಾರ ಸಮುದಾಯದ ಮಠಾಧೀಶರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾವೇರಿಯ ಶಿಗ್ಗಾಂವ್ ಪಟ್ಟಣದ ಬಿಆರ್ ಅಂಬೇಡ್ಕರ್ ಪ್ರತಿಮೆ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.
ಪರಿಶಿಷ್ಟ ಜಾತಿಗೆ ಒಳಮೀಸಲಾತಿ ನೀಡುವ ರಾಜ್ಯ ಸಚಿವ ಸಂಪುಟದ ನಿರ್ಧಾರದ ವಿರುದ್ಧ ಬಂಜಾರ ಸಮುದಾಯದ ಜನರು ಶಿವಮೊಗ್ಗ, ವಿಜಯನಗರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಊರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಗುಂಡೂರು ಗ್ರಾಮದ ತಿಪ್ಪೇಸ್ವಾಮಿ ಶ್ರೀಗಳ ನೇತೃತ್ವದಲ್ಲಿ ಬಂಜಾರ ಸಮುದಾಯದ ಪ್ರತಿಭಟನಾಕಾರರು ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ್ದರು. ಬಿಜೆಪಿ ಸರಜಾರ ಒಳಮೀಸಲಾತಿ ನೀಡಿ ತಮ್ಮ ಸಮುದಾಯಕ್ಕೆ ಅನ್ಯಾಯ ಎಸಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಬಂಜಾರ ಸಮುದಾಯದ ಅಪಾರ ಭಕ್ತರೊಂದಿಗೆ ಸ್ವಾಮೀಜಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications