ರಾಜ್ಯದಲ್ಲಿ ಟೊಯೋಟಾ ಕಂಪನಿಯ ಹೂಡಿಕೆ ಅಬಾಧಿತ: ಎಂ ಬಿ ಪಾಟೀಲ
ಬೆಂಗಳೂರು: ಮಹಾರಾಷ್ಟ್ರದಲ್ಲೂ ಹೂಡಿಕೆ ಮಾಡುತ್ತಿರುವುದನ್ನು ಬೇರೆ ದೃಷ್ಟಿಯಿಂದ ನೋಡುವ ಅಗತ್ಯವಿಲ್ಲ, ರಾಜ್ಯದಲ್ಲಿ ಆ ಕಂಪನಿಯ ಹೂಡಿಕೆ ಅಬಾಧಿತ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸ್ಪಷ್ಟಪಡಿಸಿದ್ದಾರೆ.
'ನಮ್ಮಲ್ಲಿ ಹೂಡಿಕೆ ಮಾಡಿದ ಮಾತ್ರಕ್ಕೆ ಅವರು ಇನ್ನೊಂದು ಕಡೆ ಬಂಡವಾಳ ಹೂಡಬಾರದು ಎಂದೇನಿಲ್ಲ. ಟೊಯೋಟಾ ಕಂಪನಿಯು ಮಹಾರಾಷ್ಟ್ರದಲ್ಲಿ ಹೆಚ್ಚುವರಿ ಹೂಡಿಕೆ ಮಾಡಬಹುದು. ಆದರೆ ರಾಜ್ಯದಲ್ಲಿ ಆ ಕಂಪನಿಯ ಹೂಡಿಕೆ ಎಂದಿನಂತೆಯೇ ಮುಂದುವರಿದುಕೊಂಡು ಹೋಗಲಿದೆ' ಎಂದು ಭರವಸೆ ನೀಡಿದ್ದಾರೆ.

ಕೈಗಾರಿಕ ಉದ್ಯಮಗಳು ತಮ್ಮ ವಿಸ್ತಾರವನ್ನು ಪಸರಿಸುವುದು ಸಾಮಾನ್ಯ ವಿದ್ಯಮಾನ. ಟೊಯೋಟಾ ಕೂಡ ಅದೇ ರೀತಿಯಲ್ಲಿ ನೆರೆ ರಾಜ್ಯದಲ್ಲಿ ಹೂಡಿಕೆ ಮಾಡುತ್ತಿದೆ. ಇದರಿಂದ ರಾಜ್ಯಕ್ಕೆ ನಷ್ಟವಾಗುತ್ತದೆ ಎಂದು ಭಾವಿಸಬಾರದು ಎಂದು ತಿಳಿಸಿದ್ದಾರೆ.
ಟೊಯೋಟಾ ಕಂಪನಿಯು 2023ರಲ್ಲಿ 3,300 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಬಿಡದಿಯಲ್ಲಿ ತನ್ನ ಮೂರನೇ ಕಾರು ತಯಾರಿಕೆ ಘಟಕ ತೆರೆಯಲು ರಾಜ್ಯ ಸರಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. 2022ರಲ್ಲಿ ಅದು ನಮ್ಮಲ್ಲಿ 4,100 ಕೋಟಿ ರೂಪಾಯಿ ಹೂಡಿದೆ. ಅದರ ಕೇಂದ್ರ ಕಚೇರಿ ಮತ್ತು ಸಂಶೋಧನಾ ಕೇಂದ್ರಗಳು ನಮ್ಮಲ್ಲೇ ಇವೆ ಎಂದು ಅವರು ಹೇಳಿದ್ದಾರೆ.
ಬಿಡದಿಯಲ್ಲಿ ಮೂರನೇ ಕಾರು ಉತ್ಪಾದನಾ ಘಟಕ ಆರಂಭಿಸಿ, ಎರಡು ಸಾವಿರ ಉದ್ಯೋಗ ಸೃಷ್ಟಿಸುವ ಭರವಸೆಯನ್ನು ಕಂಪನಿ ನೀಡಿದೆ. ಈ ಘಟಕ ಸಂಬಂಧ ಸರ್ಕಾರ ಹಾಗೂ ಕಂಪನಿ ನಡುವೆ ಒಪ್ಪಂದ ಆಗಿದೆ. ಈಗಾಗಲೇ ಟೊಯೋಟಾ ಕಂಪನಿಯ ಎರಡು ಘಟಕಗಳು ಬಿಡದಿಯಲ್ಲಿ ಕಾರ್ಯವನ್ನು ನಿರ್ವಹಿಸುತ್ತಿವೆ.
ಮೂರನೇ ಘಟಕವನ್ನು ಆರಂಭಿಸಿ ವರ್ಷಕ್ಕೆ ಹೆಚ್ಚುವರಿಯಾಗಿ ಒಂದು ಲಕ್ಷ ಕಾರುಗಳನ್ನು ಉತ್ಪಾದಿಸುವ ಗುರಿಯನ್ನು ಹೊಂದಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications