ಮಡಿಕೇರಿ ದಸರಾ ಉತ್ಸವಕ್ಕೆ ಚಾಲನೆ
ಮಡಿಕೇರಿ, ಅ.7 : ಅತ್ತ ಐತಿಹಾಸಿಕ ಮೈಸೂರು ದಸರಾ ಪ್ರಾರಂಭವಾಗುತ್ತಿದ್ದಂತೆ, ಇತ್ತ ಮಡಿಕೇರಿಯ ದಸರಾಕ್ಕೂ ಚಾಲನೆ ದೊರೆತಿದೆ. ನಗರದ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವ ಆರಂಭವಾಗುದರೊಂದಿಗೆ ಹತ್ತುದಿನಗಳ ಉತ್ಸವ ಪ್ರಾರಂಭವಾಯಿತು.
ಶನಿವಾರ ಪಂಪಿನಕೆರೆಯಲ್ಲಿ ಶ್ರೀ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ ಹಾಗೂ ಶ್ರೀ ಕಂಚಿ ಕಾಮಾಕ್ಷಿಯಮ್ಮ ಶಕ್ತಿ ದೇವತೆಗಳ ಕರಗ ಉತ್ಸವಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಹತ್ತು ದಿನಗಳ ಉತ್ಸವಕ್ಕೆ ಮಡಿಕೇರಿ ದಸರಾ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಅನುರಾಗ್ ತಿವಾರಿ, ಕಾರ್ಯಧ್ಯಕ್ಷರಾದ ಕೆ.ಎಂ.ಬಿ.ಗಣೇಶ್ ಅವರು ಚಾಲನೆ ನೀಡಿದರು. ಈ ಮೂಲಕ ಮಡಿಕೇರಿ ದಸರಾಕ್ಕೆ ಅಧಿಕೃತವಾಗಿ ಚಾಲನೆ ದೊರೆಯಿತು.
ಮೊಗೆರಾ ಸಮಾಜ, ದಲಿತ ಸಂಘ ಮತ್ತು ಆಟೋ ಚಾಲಕರ ಸಂಘದವರು ಬೃಹತ್ ದಸರಾ ಜಾಥಾದಲ್ಲಿ ಪಾಲ್ಗೊಂಡಿದ್ದರು. ಜಿಲ್ಲಾ ಎಸ್ಪಿ ಎಂ.ಎನ್.ಅನುಚೇತ್, ಪೌರಾಯುಕ್ತ ಎನ್.ಎಂ.ಶಶಿಕುಮಾರ್, ಕಸಾಪ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಜಿ.ಮಂಜುನಾಥ್, ಮುಂತಾದವರು ಉಪಸ್ಥಿತರಿದ್ದರು. (ಚಿತ್ರಗಳಲ್ಲಿ ಮಡಿಕೇರಿ ದಸರಾ)

ಕರಗದ ಮೂಲಕ ದಸರಾ ಉದ್ಘಾಟನೆ
ಶನಿವಾರ ಮಧ್ಯಾಹ್ನ ನಾಲ್ಕು ಶಕ್ತಿ ದೇವತೆಗಳ ಕರಗ ಹೊರುವ ಪಿ.ಪಿ. ರಮೇಶ್, ಉಮೇಶ್, ಕೋಟೆ ಮಾರಿಯಮ್ಮ ದೇವಾಲಯದ ಅನೀಶ್, ಹಾಗೂ ಕಂಚಿ ಕಾಮಾಕ್ಷಿ ದೇವಾಲಯದ ನವೀನ್ ಮಧುರಯ್ಯ ದೇವತೆಗಳ ಮುಖವಾಡದೊಂದಿಗೆ ಪಂಪಿನಕೆರೆಗೆ ಆಗಮಿಸಿದ್ದರು.

ಸಾಂಪ್ರದಾಯಿಕ ಪೂಜೆ
ಕರಗಗಳ ಅಲಂಕಾರ ಮುಗಿದ ಬಳಿಕ ಸಂಜೆ 5.30ರ ಸುಮಾರಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು. ಪಂಪು ಕೆರೆ ಆವರಣದಿಂದ ಹೊರ ಬಂದ ನಾಲ್ಕು ಕರಗಗಳಿಗೆ ದಸರಾ ಉತ್ಸವ ಸಮಿತಿಯ ಪದಾಧಿಕಾರಿಗಳು ಈಡುಗಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.

ನಗರ ಪ್ರದಕ್ಷಿಣೆ
ಪಂಪಿನಕೆರೆ ಬಳಿಯಿಂದ ಹೊರಟ ನಾಲ್ಕು ಕರಗಗಳು ಎ.ವಿ ಶಾಲೆ ಬಳಿಯ ಬನ್ನಿಮಂಟಪಕ್ಕೆ ತೆರಳಿ, ಅಲ್ಲಿಂದ ಮಹದೇವಪೇಟೆಯ ಚೌಡೇಶ್ವರಿ ದೇವಾಲಯದಲ್ಲಿ ಪೂಜೆ ಸ್ವೀಕರಿಸಿದ ಬಳಿಕ ಸಂಪ್ರದಾಯದಂತೆ ಪೇಟೆ ಶ್ರೀರಾಮಮಂದಿರ ತಲುಪಿದವು, ಕರಗಗಳಿಗೆ ಪೂಜೆ ಸಲ್ಲಿಸಿದ ಬಳಿಕ ತಮ್ಮ ತಮ್ಮ ದೇವಾಲಯಗಳಿಗೆ ಮರಳಿದವು.

ನಾಲ್ಕು ಶಕ್ತಿ ದೇವತೆಗಳು
ಶ್ರೀ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ ಹಾಗೂ ಶ್ರೀ ಕಂಚಿ ಕಾಮಾಕ್ಷಿಯಮ್ಮ ಶಕ್ತಿ ದೇವತೆಗಳ ಕರಗ ಮಹೋತ್ಸವದ ಮೂಲಕ ದಸರಾ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಜನರಿಂದ ಭಕ್ತಿಯ ನಮನ
ನಾಲ್ಕು ಶಕ್ತಿ ದೇವತೆಗಳ ಕರಗ ಸಾಗುವ ದಾರಿಯಲ್ಲಿ ಸಾರ್ವಜನಿಕರು ಭಕ್ತಿ ಪೂರ್ವಕವಾಗಿ ದೇವಿಗೆ ಪೂಜೆ ಸಲ್ಲಿಸಿದರು. ಈ ಮೂಲಕ ದಸರಾ ಉದ್ಘಾಟನೆಯಲ್ಲಿ ಪಾಲ್ಗೊಂಡರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications