ಬಜೆಟ್ ಬಳಿಕ ವಾಹನ ಸವಾರರಿಗೆ ಶಾಕ್ ನೀಡಲಿದೆ ರಾಜ್ಯ ಸರ್ಕಾರ
ಬೆಂಗಳೂರು, ಫೆಬ್ರವರಿ 12: ರಾಜ್ಯ ಬಜೆಟ್ ಬಳಿಕ ವಾಹನ ಸವಾರರ ಮೇಲೆ ದಂಡದ ಹೊರೆ ಹೊರಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ.
Recommended Video
ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಾಡಿ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತವನ್ನು ಕೇಂದ್ರಸರ್ಕಾರವು ಹೆಚ್ಚಿಸಿತ್ತು. ಆದರೆ ಹಲವು ರಾಜ್ಯಗಳು ಕೇಂದ್ರ ವಿಧಿಸಿದ್ದ ದಂಡದ ಪ್ರಮಾಣವನ್ನು ಕಡಿತಗೊಳಿಸಿದ್ದವು. ಇದರಲ್ಲಿ ಕರ್ನಾಟಕವು ಸೇರಿತ್ತು.
ಆದರೆ ಈಗ ರಾಜ್ಯ ಸರ್ಕಾರವು ತನ್ನ ನಿರ್ಧಾರವನ್ನು ಬದಲಿಸಿದ್ದು, ಸಂಚಾರ ನಿಯಮ ಉಲ್ಲಂಘನೆ ದಂಡದ ಪ್ರಮಾಣವನ್ನು ಮತ್ತೆ ಏರಿಕೆ ಮಾಡಲು ಮುಂದಾಗಿದೆ. ಈ ಬಗ್ಗೆ ಲಕ್ಷ್ಮಣ ಸವದಿ ಮಾಹಿತಿ ನೀಡಿದ್ದಾರೆ.

ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ, 'ರಸ್ತೆ ಸುರಕ್ಷತಾ ಕಾಯ್ದೆಯಡಿ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರಿಗೆ ವಿಧಿಸುತ್ತಿರುವ ದಂಡ ಪ್ರಮಾಣವನ್ನು ಬಜೆಟ್ ಮಂಡನೆಯಾದ ಬಳಿಕ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆದಿದೆ' ಎಂದಿದ್ದಾರೆ.
'ಮೊದಲಿಗೆ ಜನರಲ್ಲಿ ಜಾಗೃತಿ ಮೂಡಿಸಿ ಆಮೇಲೆ ದಂಡದ ಪ್ರಮಾಣ ಹೆಚ್ಚಳ ಮಾಡಲಾಗುತ್ತದೆ. ನಮಗೆ ದಂಡಕ್ಕಿಂತಲೂ ಜನರ ಜೀವನ ಉಳಿಯುವುದು ಮುಖ್ಯ' ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.
ಮುಂದುವರೆದು ಮಾತನಾಡಿದ ಅವರು, 'ಹುಬ್ಬಳ್ಳಿ ಮತ್ತು ಗುಲ್ಬರ್ಗ ಕೆಆರ್ಟಿಸಿ , ಬಿಎಂಟಿಸಿ ವಿಭಾಗಕ್ಕೆ ಮಾರ್ಚ್ 31ರೊಳಗೆ 1200 ಬಸ್ಗಳನ್ನು ಖರೀದಿಸಲಿದ್ದೇವೆ. ಒಟ್ಟು ಮೂರು ಸಾವಿರ ಬಸ್ಸುಗಳನ್ನು ಖರೀದಿಸಲು ತೀರ್ಮಾನಿಸಲಾಗಿತ್ತು. ಏಕಕಾಲದಲ್ಲಿ ಇಷ್ಟೊಂದು ಬಸ್ಸುಗಳನ್ನು ನೀಡಲು ಕಷ್ಟಕರವಾಗುತ್ತದೆ ಎಂಬ ಕಾರಣಕ್ಕಾಗಿ ಮೊದಲ ಹಂತದಲ್ಲಿ 1200 ಬಸ್ಸುಗಳನ್ನು ನೀಡಲು ಕಂಪೆನಿಯವರು ಒಪ್ಪಿದ್ದಾರೆ. ಮಾ.31ರೊಳಗೆ ಬಸ್ಸುಗಳು ರಸ್ತೆಗಿಳಿಯಲಿವೆ ಎಂದರು.
'ಎಲೆಕ್ಟ್ರಿಕ್ ಬಸ್ಗಳನ್ನು ಸಹ ಖರೀದಿ ಮಾಡುವ ಇರಾದೆ ಇದ್ದು, ಹಲವು ಸಂಸ್ಥೆಗಳು ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಲು ಮುಂದೆ ಬಂದಿವೆ. ಸರ್ಕಾರವು ಈ ಬಗ್ಗೆ ಸಂಸ್ಥೆಗಳೊಂದಿಗೆ ಮಾತು-ಕತೆ ನಡೆಸುತ್ತಿದೆ' ಎಂದರು.
-
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ












Click it and Unblock the Notifications