ರೈಲು ಅಪಘಾತಕ್ಕೆ ತಿಂಗಳಿಗೆ 130 ಜನ ಆಹುತಿ: ಸಿಗುತ್ತಿಲ್ಲ ದುರಂತಗಳಿಗೆ ಮುಕ್ತಿ
ಬೆಂಗಳೂರು, ಅಕ್ಟೋಬರ್ 26: ರಾಜ್ಯದಲ್ಲಿ ರೈಲ್ವೆ ಹಳಿಗಳ ಮೇಲೆ ಸಾವುಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ತಿಂಗಳಿಗೆ 130 ಮಂದಿ ಸಾವಿಗೀಡಾಗುತ್ತಿದ್ದಾರೆ ಎನ್ನುವ ಮಾಹಿತಿ ಆತಂಕ್ಕೀಡು ಮಾಡಿದೆ.
ಇತ್ತೀಚೆಗಷ್ಟೇ ಅಮೃತ ಅಮೃತಸರದ ರಾಮಲೀಲಾ ವೀಕ್ಷಿಸುತ್ತಿದ್ದ ವೇಳೆ ರೈಲು ಹರಿದು 60ಕ್ಕೂ ಹೆಚ್ಚು ಜನರು ಮೃತಪಟ್ಟ ಘಟನೆ ರೈಲ್ವೆ ಸುರಕ್ಷತೆ ಕುರಿತು ವ್ಯಾಪಕ ಚರ್ಚೆ ಹುಟ್ಟುಹಾಕುವಂತೆ ಮಾಡಿದೆ. ಬುಲೆಟ್ ರೈಲು, ಎಂಜಿನ್ ರಹಿತ ಅತ್ಯಾಧುನಿಕ ಹೈಸ್ಪೀಡ್ ರೈಲುಗಳನ್ನು ಅಭಿವೃದ್ಧಿ ಪಡಿಸಿದ್ದೇವೆ ಎನ್ನುವ ಹೆಗ್ಗಳಿಕೆ ದೇಶದಲ್ಲಿದ್ದರೆ ಇದರಿಂದ ಅನನುಕೂಲಗಳೂ ಹೆಚ್ಚಾಗಿವೆ.
ಕರ್ನಾಟಕದಲ್ಲಿ ಪ್ರತಿದಿನ ಸರಾಸರಿ 4 ಮಂದಿ ರೈಲ್ವೆ ಹಳಿಗಳ ಮೇಲೆ ಸಾವನ್ನಪ್ಪುತ್ತಿದ್ದಾರೆ. ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 4595 ಮಂದಿ ಮೃತಪಟ್ಟಿದ್ದಾರೆ. ತಿಂಗಳಿಗೆ 130 ಮಂದಿ ಮೃತಪಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಹಾಗಾದರೆ ಸಾವಿಗೆ ಕಾರಣಗಳು ಏನೆಂಬುದನ್ನು ನೋಡುವುದಾದರೆ ಹಳಿ ಮತ್ತು ಸಿಗ್ನಲ್ ದಾಟುವ ವೇಳೆ ಹಳಿಗೆ ಸಿಲುಕಿ 2016ರಲ್ಲಿ 743 ಮಂದಿ ಮೃತಪಟ್ಟಿದ್ದಾರೆ, 2017ರಲ್ಲಿ 654 ಮಂದಿ ಮೃತಪಟ್ಟಿದ್ದಾರೆ. ಹಾಗೆಯೇ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆಯೂ ಹೆಚ್ಚಳವಾಗಿದೆ.

ವಿದೇಶದಲ್ಲಿ ರೈಲ್ವೆ ವ್ಯವಸ್ಥೆ ಹೇಗಿದೆ?
ವಿದೇಶದಲ್ಲಿ ವಿದೇಶದಲ್ಲಿ ರೈಲು ಬಂದಾಗ ಸೆನ್ಸರ್ ಗೇಟುಗಳು ಕ್ಲೋಸ್ ಆಗಿ ನಂತರ ತೆರೆದುಕೊಳ್ಳುತ್ತದೆ, ಸ್ವಯಂ ಚಾಲಿತ ಸೆನ್ಸರ್ಗೇಟುಗಳಿರುತ್ತವೆ, ರೈಲಿನ ಮುಂಭಾಗ ಹಾಗೂ ಹಿಂಭಾಗದಲ್ಲಿ ಕ್ಯಾಮರಾ ಇರುತ್ತದೆ, ರೈಲು ಹಳಿಗಳ ಮೇಲೆ ಅತಿಕ್ರಮ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.

ವಿದೇಶಿ ರೈಲ್ವೆ ವ್ಯವಸ್ಥೆ ಅಧ್ಯಯನ ಬೇಕು
ಭಾರತದ ಹಾಗೆ ವಿದೇಶದಲ್ಲಿ ಜನರು ಆಕಸ್ಮಿಕವಾಗಿ ರೈಲಿಗೆಸಿಲುಕಿ ಮೃತಪಡುವವರ ಸಂಖ್ಯೆ ಕಡಿಮೆ ಇದೆ ಅದಕ್ಕೆ ಹಲವಾರು ಕಾರಣಗಳೂ ಇವೆ, ಅಲ್ಲಿನ ವ್ಯವಸ್ಥೆಯನ್ನು ಅಧ್ಯಯನ ಮಾಡಿ ರಾಜ್ಯದಲ್ಲೂ ಆ ಪದ್ಧತಿ ಜಾರಿಗೆ ತರುವಂತೆ ರೈಲ್ವೆ ಇಲಾಖೆಗೆ ಶಿಫಾರಸ್ಸು ಮಾಡಲು ರೈಲ್ವೆ ಪೊಲೀಸ್ ಇಲಾಖೆ ನಿರ್ಧಾರ ತೆಗೆದುಕೊಂಡಿದ್ದಾರೆ.

ಸಾವಿಗೆ ಕಾರಣ
ಹಳಿ ತಪಾಸಣೆ ವೇಳೆ ಸಿಬ್ಬಂದಿಗಳ ನಿರ್ಲಕ್ಷ್ಯ, ರೈಲ್ವೆ ಕ್ರಾಸಿಂಗ್ ಗೇಟ್ಗಳನ್ನು ಸಮಯಕ್ಕೆ ಸರಿಯಾಗಿ ಮುಚ್ಚದಿರುವುದು, ಬೇಗ ಹೋಗಬೇಕೆಂಬ ಆತುರದಲ್ಲಿ ಹಳಿ ದಾಟುವುದು ಪ್ರಮುಖ ಕಾರಣವಾಗಿದೆ.

ರೈಲ್ವೆ ಹಳಿ ಮೇಲೆ ಸಾವು ತಪ್ಪಿಸಲು ಏನು ಮಾಡಬೇಕು
ಮೊದಲು ಇಯರ್ ಫೋನ್ನ್ನು ಕಿವಿಯಲ್ಲಿ ಸಿಕ್ಕಿಸಿಕೊಂಡು ಹೋಗುವುದನ್ನು ಬಿಡಿ, ಹಿ ದಾಟುವ ವೇಳೆ ಯಾವುದಾಧರು ರೈಲು ಬರುತ್ತಿದೆಯೇ ಎನ್ನುವುದನ್ನು ಮೊದಲು ಗಮನಿಸಿ, ರೈಲಿನ ಬಾಗಿಲಿನಲ್ಲಿ ನಿಂತು ಪ್ರಯಾಣಿಸಬೇಡಿ.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ











Click it and Unblock the Notifications