ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು
ಬೆಂಗಳೂರು: ನೈಋತ್ಯ ರೈಲ್ವೆ ವ್ಯಾಪ್ತಿಯ ವ್ಯಾಪ್ತಿಯ ಆಲಮಟ್ಟಿ ಹಾಗೂ ಗದಗ ವಿಭಾಗದಲ್ಲಿ ತಾಂತ್ರಿಕ ನಿರ್ವಹಣಾ ಕಾಮಗಾರಿ (NI Work) ನಡೆಯುತ್ತಿದೆಲ ಈ ಹಿನ್ನೆಲೆಯಲ್ಲಿ, ಉತ್ತರ ಕರ್ನಾಟಕದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ವಿವಿದ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಕೆಲವು ರೈಲುಗಳ ಸಂಚಾರ ಭಾಗಶಃ ರದ್ದಾಗಿದೆ.
ಆಲಮಟ್ಟಿ ಮತ್ತು ಗದಗ ನಿಲ್ದಾಣಗಳ ಮಧ್ಯ ಹಳಿ ನಿರ್ವಹಣೆ ಹಾಗೂ ತಾಂತ್ರಿಕ ಕಾಮಗಾರಿ ಪ್ರಯುಕ್ತ ಮಾರ್ಚ್ 23 ರಿಂದ ಮಾರ್ಚ್ 25 ರವರೆಗೆ ಸಂಚರಿಸಬೇಕಿದ್ದ ಯಶವಂತಪುರ-ವಿಜಯಪುರ ಎಕ್ಸ್ಪ್ರೆಸ್ ಹಾಗೂ ಬಸವ ಎಕ್ಸ್ಪ್ರೆಸ್ ರೈಲುಗಳ ಸೇವೆಯನ್ನು ಬಾಗಲಕೋಟೆ ಮತ್ತು ವಿಜಯಪುರ ನಡುವೆ ರದ್ದು ಮಾಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಯಶವಂತಪುರ-ವಿಜಯಪುರ ಎಕ್ಸ್ಪ್ರೆಸ್ (16547) ರೈಲು ಮಾರ್ಚ್ 23 ಮತ್ತು 24 ರಂದು ಯಶವಂತಪುರದಿಂದ ಹೊರಡುತ್ತದೆ. ಈ ರೈಲು ಬಾಗಲಕೋಟೆಯಲ್ಲಿ ತನ್ನ ಪ್ರಯಾಣ ಮುಕ್ತಾಯಗೊಳಿಸಲಿದೆ. ಬಾಗಲಕೋಟೆ ಮತ್ತು ವಿಜಯಪುರ ನಡುವೆ ಈ ರೈಲು ಸಂಚರಿಸುವುದಿಲ್ಲ.
ವಿಜಯಪುರ-ಯಶವಂತಪುರ ಎಕ್ಸ್ಪ್ರೆಸ್ (16548) ರೈಲು ಮರಳಿ ಅದೇ ದಿಕ್ಕಿನಲ್ಲಿ ಮಾರ್ಚ್ 24 ಮತ್ತು 25 ರಂದು ಈ ರೈಲು ವಿಜಯಪುರದ ಬದಲಿಗೆ ಬಾಗಲಕೋಟೆಯಿಂದಲೇ ಸಂಚಾರ ಆರಂಭಿಸುತ್ತದೆ.
ಮೈಸೂರು-ಬಾಗಲಕೋಟೆ ಬಸವ ಎಕ್ಸ್ಪ್ರೆಸ್ (17307) ರೈಲು ಮೈಸೂರಿನಿಂದ ಮಾರ್ಚ್ 23 ಮತ್ತು 24 ರಂದು ಸಂಚಾರ ಆರಂಭಿಸುತ್ತದೆ. ಈ ರೈಲು ವಿಜಯಪುರದಲ್ಲೇ ತನ್ನ ಪ್ರಯಾಣ ಅಂತ್ಯಗೊಳಿಸುತ್ತದೆ. ವಿಜಯಪುರ ಮತ್ತು ಬಾಗಲಕೋಟೆ ನಡುವೆ ಈ ರಲಿನ ಸೇವೆ ಭಾಗಶಃ ರದ್ದಾಗಿದೆ.
ಬಾಗಲಕೋಟೆ-ಮೈಸೂರು ಬಸವ ಎಕ್ಸ್ಪ್ರೆಸ್ (17308) ಮಾರ್ಚ್ 24 ಮತ್ತು 25 ರಂದು ಈ ರೈಲು ಬಾಗಲಕೋಟೆ ಬದಲಿಗೆ ವಿಜಯಪುರ ನಿಲ್ದಾಣದಿಂದಲೇ ಮೈಸೂರಿನ ಕಡೆಗೆ ಪ್ರಯಾಣ ಬೆಳೆಸಲಿದೆ.
ಮಂಗಳೂರು-ವಿಜಯಪುರ ರೈಲ ಸಂಚಾರ ರದ್ದು
ಹುಬ್ಬಳ್ಳಿ ವಿಭಾಗದಲ್ಲಿ ಹಳಿ ನಿರ್ವಹಣಾ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಮಂಗಳೂರು ಸೆಂಟ್ರಲ್ - ವಿಜಯಪುರ ಎಕ್ಸ್ಪ್ರೆಸ್ (17378/17377) ರೈಲು ಮಾರ್ಚ್ 19 ರಿಂದ 24 ರವರೆಗೆ ಬಾಗಲಕೋಟೆಯಲ್ಲಿ ನಿಲುಗಡೆ ನೀಡಲಿದೆ. ಅಲ್ಲಿಂದ ಮುಂದೆ ಸಾಗುವುದಿಲ್ಲ. ಮರಳಿ ಅದೇ ದಿಕ್ಕಿನಲ್ಲಿ ಬಾಗಲಕೋಟೆಯಿಂದ ಸಂಚಾರ ಆರಂಭಿಸಿ ಮಂಗಳೂರು ನಿಲ್ದಾಣ ತಲುಪುತ್ತದೆ.
ರೈಲು ನಿಯಂತ್ರಣ
ವಿಜಯಪುರ-ಯಶವಂತಪುರ ಎಕ್ಸ್ಪ್ರೆಸ್ (16548) ರೈಲನ್ನು ಮಾರ್ಗಮಧ್ಯೆ 20 ನಿಮಿಷ ಹಾಗೂ ಮಾರ್ಚ್ 23 ರಂದು ಮಾರ್ಗಮಧ್ಯೆ 40 ನಿಮಿಷಗಳ ಕಾಲ ತಡೆಹಿಡಿಯಲಾಗುವುದು. ಪ್ರಯಾಣಿಕರಿಗೆ ಕೊಂಚ ಅಡಚಣೆ ಉಂಟಾಗಲಿದ್ದು, ಸಹಕರಿಸುವಂತೆ ಪ್ರಕಟಣೆಯಲ್ಲಿ ಕೋರಿದೆ.
ಕಾಮಗಾರಿ ಪರಿಶೀಲನೆ
ರೈಲ್ವೆ ಅಧಿಕಾರಿ ಬೆಲಾ ಮೀನಾ ಅವರು ಗದಗ-ಆಲಮಟ್ಟಿ ವಿಭಾಗದಲ್ಲಿ ವಿಂಡೋ ಟ್ರೇಲಿಂಗ್ ತಪಾಸಣೆ ನಡೆಸಿದರು, ಆಲಮಟ್ಟಿ-ವಂಡಾಲ ನಡುವಿನ ಡಬ್ಲಿಂಗ್ ಕಾಮಗಾರಿಗಳ ಪ್ರಗತಿ ಅವಲೋಕಿಸಿದರು. ಬಳಿಕ ಆಲಮಟ್ಟಿ ನಿಲ್ದಾಣದಲ್ಲಿ ಸವಿಸ್ತಾರ ಪರಿಶೀಲನೆ ನಡೆಸಿ, ಮೂಲಸೌಕರ್ಯ, ಪ್ರಯಾಣಿಕರ ಸೌಲಭ್ಯಗಳು ಹಾಗೂ ಸುರಕ್ಷತಾ ಕ್ರಮಗಳನ್ನು ವೀಕ್ಷಿಸಿದರು. ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ














Click it and Unblock the Notifications