SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ
ಬೆಂಗಳೂರು; ನೈಋತ್ಯ ರೈಲ್ವೆಯು ಗುಡ್ ಫ್ರೈಡೆ ಮತ್ತು ಈಸ್ಟರ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿವಾರಣೆ ಸಲುವಾಗಿ ಏಪ್ರಿಲ್ ಮೊದಲ ವಾರದ ಬೆಂಗಳೂರು ಎಸ್ಎಂವಿಟಿ ನಿಲ್ದಾಣದಿಂದ ಬೆಳಗಾವಿ ನಿಲ್ದಾಣ ಹಾಗೂ ಹುಬ್ಬಳ್ಳಿ-ಕೊಲ್ಲಂ ವರೆಗೆ ಒಂದು ಸುತ್ತಿನ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ ನಡೆಸಲು ನಿರ್ಧರಿಸಿದೆ.
ಈ ರೈಲುಗಳು ಏಪ್ರಿಲ್ 2 ರಿಂದ 5ರವರೆಗೆ ಸಂಚಾರ ನಡೆಸಲಿವೆ. ಬೆಂಗಳೂರು ಎಸ್ಎಂವಿಟಿ ರೈಲು- ಬೆಳಗಾವಿ ರೈಲು (06503) ಏಪ್ರಿಲ್ 2 ಗುರುವಾರ ಸಂಜೆ 7 ಗಂಟೆಗೆ ಬೆಂಗಳೂರಿನಿಂದ ಹೊರಡುತ್ತದೆ. ಮರುದಿನ ಬೆಳಗ್ಗೆ 7:35ಕ್ಕೆ ಬೆಳಗಾವಿ ತಲುಪಲಿದೆ. ಮರಳಿ ಅದೇ ದಿಕ್ಕಿನಲ್ಲಿ ಬೆಳಗಾವಿ-ಬೆಂಗಳೂರು ಎಸ್ಎಂವಿಟಿ ರೈಲು (06504) ಏಪ್ರಿಲ್ 5ರಂದು ಭಾನುವಾರ ಸಂಜೆ 5:30 ಗಂಟೆಗೆ ಪ್ರಯಾಣ ಆರಂಭಿಸಿ ಏಪ್ರಿಲ್ 6ರಂದು ಬೆಳಗ್ಗೆ 5 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ರೈಲು ನಿಲುಗಡೆ ನಿಲ್ದಾಣಗಳು
ಈ ವಿಶೇಷ ಎಕ್ಸ್ಪ್ರೆಸ್ ರೈಲು ಎಸಿ ತ್ರಿ ಟೈರ್, ಎಸಿ ಟು ಟೈರ್, ನಾನ್ ಎಸಿ ಸ್ಲೀಪರ್ ಹಾಗೂ ಜನರಲ್ ಸೇರಿ ಒಟ್ಟು 19 ಬೋಗಿಗಳನ್ನು ಹೊಂದಿರಲಿದೆ. ಎರಡು ಸಂಚಾರ ದಿಕ್ಕುಗಳಲ್ಲಿ ಈ ರೈಲು 'ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ನೀಡುತ್ತದೆ.
ಹುಬ್ಬಳ್ಳಿ-ಕೊಲ್ಲಂ ವಿಶೇಷ ರೈಲು ಸೇವೆ
ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಕೊಲ್ಲಂವರೆಗೆ ಒಂದು ಟ್ರಿಪ್ ವಿಶೇಷ ರೈಲು (07347) ಕಾರ್ಯಾಚರಣೆ ಮಾಡಲು ಪ್ಲ್ಯಾನ್ ಮಾಡಲಾಗಿದೆ. ಏಪ್ರಿಲ್ 2ರಂದು ಗುರುವಾರ ಸಂಜೆ 7;5ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮಾರನೇ ದಿನ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಕೊಲ್ಲಂ ನಿಲ್ದಾಣ ಸೇರುತ್ತದೆ.
ಮರಳಿ ಅದೇ ದಿನಕ್ಕಿನಲ್ಲಿ ಕೊಲ್ಲಂ-ಹುಬ್ಬಳ್ಳಿ ರೈಲು (07348) ಏಪ್ರಿಲ್ 3ರಂದು ಶುಕ್ರವಾರ ರಾತ್ರಿ 10.45ಗಂಟೆಗೆ ಹೊರಟು ಮಾರನೇ ದಿನ ಬೆಳಗ್ಗೆ 10.40ಕ್ಕೆ ಹುಬ್ಬಳ್ಳಿಗೆ ಬಂದು ಸೇರಲಿದೆ. ಈ ರೈಲಿನಲ್ಲಿ ಒಟ್ಟು 17 ಬೋಗಿಗಳು ಇರಲಿವೆ.
ಈ ರೈಲು ಎರಡು ದಿಕ್ಕಿನಲ್ಲಿ ಎಸ್ಎಂಎಂ ಹಾವೇರಿ, ರಾಣಿಬೆನ್ನೂರು, ಹರಿಹರ, ಬೀರೂರು, ಅರಸಿಕೆರೆ, ತುಮಕೂರು ಎಸ್ಎಂವಿಟಿ, ಕೆ.ಆರ್.ಪುರಂ, ಬಂಗಾರಪೇಟೆ, ಇರೋಡ್, ತಿರಪುರ, ಪಲ್ಲಕ್ಕಾಡ್, ಕೊಟ್ಟಾಯಂ, ಆಲುವಾ, ಚೆಂಗಾನೂರು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ರೈಲಿನ ಹೆಚ್ಚಿನ ಮಾಹಿತಿ, ವೇಳಾಪಟ್ಟಿಗಾಗಿ ಭಾರತೀಯ ರೈಲ್ವೆ ಇಲಾಖೆ ಅಧಿಕೃತ ವೆಬ್ಸೈಟ್ indianrail.gov.in ಗೆ ಅಥವಾ ಸಹಾಯವಾಣಿ ಸಂಖ್ಯೆ 139ಗೆ ಕರೆ ಮಾಡಬಹುದೆಂದು ತಿಳಿಸಲಾಗಿದೆ.
-
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು?












Click it and Unblock the Notifications