ಎಸಿಬಿ ಪ್ರಕರಣಗಳು ಮತ್ತು ಸಿಬ್ಬಂದಿಯನ್ನು ಶೀಘ್ರ ವರ್ಗಾವಣೆ ಮಾಡಿ: ಕರ್ನಾಟಕ ಲೋಕಾಯುಕ್ತ
ಬೆಂಗಳೂರು ಆಗಸ್ಟ್ 25: ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಭ್ರಷ್ಟಾಚಾರ ನಿಗ್ರಹ ದಳದಿಂದ (ಎಸಿಬಿ) ಕರ್ನಾಟಕ ಲೋಕಾಯುಕ್ತಕ್ಕೆ ಪ್ರಕರಣಗಳು ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದ್ದು, ನ್ಯಾಯಾಲಯದ ಆದೇಶವನ್ನು ಅನುಷ್ಠಾನಕ್ಕೆ ಕ್ರಮಕೈಗೊಳ್ಳುವಂತೆ ಲೋಕಾಯುಕ್ತ ರಿಜಿಸ್ಟ್ರಾರ್ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಪತ್ರ ಬರೆದಿದ್ದಾರೆ. ಆಗಸ್ಟ್ 11, 2022 ರಂದು ಹೈಕೋರ್ಟ್ ಎಸಿಬಿಯನ್ನು ರದ್ದುಪಡಿಸಿತು ಮತ್ತು ಅದರ ಪ್ರಕರಣಗಳು ಮತ್ತು ಸಿಬ್ಬಂದಿಯನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲು ಆದೇಶಿಸಿತು. ಎಸಿಬಿಯಲ್ಲಿದ್ದ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಬೇಕೆಂದು ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.
ಹೀಗಾಗಿ ಎಸಿಬಿ ಮುಂದೆ ಈಗಾಗಲೇ ಬಾಕಿ ಇರುವ ಭ್ರಷ್ಟಾಚಾರ ಪ್ರಕರಣಗಳ ತನಿಖೆ, ವಿಚಾರಣೆ, ಶಿಸ್ತುಕ್ರಮ ಪ್ರಕ್ರಿಯೆಗಳು ಲೋಕಾಯುಕ್ತಕ್ಕೆ ವರ್ಗಾವಣೆಯಾಗಬೇಕಿದೆ. ಎಸಿಬಿ ಮುಂದಿರುವ ಎಲ್ಲಾ ಪ್ರಕರಣಗಳು ಲೋಕಾಯುಕ್ತಕ್ಕೆ ವರ್ಗವಣೆ ಆಗಿರುವುದರಿಂದ ಆರೋಪಿಗಳು ಕಾನೂನಿನಿಂದ ತಪ್ಪಿಸಿಕೊಳ್ಳಲಾಗದು ಎಂದು ಹೈಕೋರ್ಟ್ ತೀರ್ಪಿನಲ್ಲಿ ಪ್ರಸ್ಥಾಪಿಸಿದೆ. ಆದರೆ ಭ್ರಷ್ಟಾಚಾರ ನಿಗ್ರಹ ದಳದ ಪ್ರಕರಣಗಳು ಮತ್ತು ಸಿಬ್ಬಂದಿಯನ್ನು ಶೀಘ್ರ ವರ್ಗಾವಣೆ ಮಾಡುವಲ್ಲಿ ವಿಳಂಬ ಆಗುತ್ತಿರುವುದರಿಂದ ವಂದಿತಾ ಶರ್ಮಾ ಅವರಿಗೆ ಪತ್ರ ಬರೆಯಲಾಗಿದೆ.
''ಲೋಕಾಯುಕ್ತ ಕ್ಕೆ 1991ರ ಫೆಬ್ರವರಿ 6ರಂದು, 2002ರ ಫೆಬ್ರವರಿ 8, 2002ರ ಮೇ 8, 2002ರ ಡಿಸೆಂಬರ್ 5ರಂದು ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವ ಸಂಬಂಧ ಹೊರಡಿಸಿದ್ದ ಆದೇಶಗಳನ್ನು ಪುನರ್ ಸ್ಥಾಪಿಸಲಾಗಿದೆ" ಎಂದು ನ್ಯಾಯಾಲಯ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಲೋಕಾಯುಕ್ತಕ್ಕೆ ಪೊಲೀಸ್ ಠಾಣೆ ಸ್ಥಾನಮಾನವನ್ನು ನ್ಯಾಯಾಲಯ ಮರುಸ್ಥಾಪಿಸಿದ್ದು, ಎಸಿಬಿಯು ಲೋಕಾಯುಕ್ತ ಸಂಸ್ಥೆಯ ವ್ಯಾಪ್ತಿಯಲ್ಲಿಯೇ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದೆ.

ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರನ್ನು ಅರ್ಹತೆ ಮೇಲೆ ನೇಮಕ ಮಾಡಬೇಕು ಜಾತಿ ಆಧರಿಸಿ ನೇಮಕಕ್ಕೆ ಪರಿಗಣಿಸಬಾರದೆಂದೂ ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ. ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಕರ್ನಾಟಕ ಲೋಕಾಯುಕ್ತ ಕಾಯಿದೆಗೆ ಸೂಕ್ತ ತಿದ್ದುಪಡಿ ತರುವ ಅಗತ್ಯತೆ ಇದೆ. ಲೋಕಾಯುಕ್ತ ಕಾಯಿದೆ ಸೆಕ್ಷನ್ 12(4)ಕ್ಕೆ ತುರ್ತಾಗಿ ತಿದ್ದುಪಡಿ ಮಾಡಬೇಕಾಗಿದೆ. ಉತ್ತಮ ಹಿನ್ನೆಲೆ ಹೊಂದಿರುವ ಪೊಲೀಸ್ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸ್ ದಳಕ್ಕೆ ನೇಮಕ ಮಾಡುವ ಮೂಲಕ ಅದನ್ನು ಸದೃಢಗೊಳಿಸಬೇಕು ಎಂದು ಕೋರ್ಟ್ ಹೇಳಿದೆ.
ಹೀಗಾಗಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ನಿಯೋಜಿಸಿರುವ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸ್ ದಳಕ್ಕೆ ವರ್ಗಾಯಿಸಬೇಕು. ಎಸಿಬಿಯಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯು ಲೋಕಾಯುಕ್ತದ ಆಡಳಿತಕ್ಕೆ ಒಳಪಡಲಿದ್ದಾರೆ. ಲೋಕಾಯುಕ್ತ ಮತ್ತು ಉಪಲೋಕಾಯುಕ್ತರ ಅನುಮತಿ ಪಡೆಯದೇ ಕನಿಷ್ಠ ಮೂರು ವರ್ಷ ಸೇವಾವಧಿ ಪೂರ್ಣಗೊಳಿಸದ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಲೋಕಾಯುಕ್ತದಿಂದ ವರ್ಗಾವಣೆ ಮಾಡಬಾರದು ಎಂದು ಹೈಕೋರ್ಟ್ ತಿಳಿಸಿದೆ.

ಅಸ್ತಿತ್ವದಲ್ಲಿರುವ ಲೋಕಾಯುಕ್ತ ಪೊಲೀಸ್ ವಿಭಾಗವನ್ನು ಬಲಪಡಿಸಲು ಮತ್ತು ಪ್ರಕರಣಗಳನ್ನು ಪರಿಣಾಮಕಾರಿಯಾಗಿ ವಿಚಾರಣೆ ಮಾಡಲು ಮತ್ತು ತನಿಖೆ ಮಾಡಲು ಅನುವು ಮಾಡಿಕೊಡಲು ಎಸಿಬಿಯೊಂದಿಗೆ ಕೆಲಸ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು / ನಿಯೋಜಿಸಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಎಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು/ಅಧಿಕಾರಿಗಳು ತಕ್ಷಣದಿಂದ ಜಾರಿಗೆ ಬರುವಂತೆ ಲೋಕಾಯುಕ್ತದ ಆಡಳಿತಾತ್ಮಕ ಮತ್ತು ವಿಶೇಷ ಶಿಸ್ತಿನ ನಿಯಂತ್ರಣಕ್ಕೆ ಬರಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಆದರೆ ಈ ಆದೇಶ ಹೊರಡಿಸಿದ ಬಳಿಕವೂ ಭ್ರಷ್ಟಾಚಾರ ನಿಗ್ರಹ ದಳದಿಂದ (ಎಸಿಬಿ) ಕರ್ನಾಟಕ ಲೋಕಾಯುಕ್ತಕ್ಕೆ ಪ್ರಕರಣಗಳು ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಲೋಕಾಯುಕ್ತರ ಅಧಿಕಾರ ಮರುಸ್ಥಾಪಿಸುತ್ತಿದ್ದಂತೆ ಸಂಸ್ಥೆಗೆ ದೂರುಗಳ ಮಹಾಪೂರವೇ ಹರಿದುಬರುತ್ತಿದೆ. ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications