"ಯಾವ ಪೊಲೀಸ್ ಠಾಣೆ ಎಂಬುದಕ್ಕೂ ಮೊತ್ತ ನಿಗದಿ; ದುಡ್ಡು ಕೈ ಸೇರಿದರಷ್ಟೇ ವರ್ಗಾವಣೆ"
ಬೆಂಗಳೂರು, ನವೆಂಬರ್ 01: ಪೊಲೀಸರ ಟೊಪ್ಪಿ ಬದಲಿಸುವ ಕುರಿತು ಸರಕಾರ ಯೋಚಿಸಿದೆ. ಅವರ ಕೈಗಳನ್ನು ಶಕ್ತಿಯುತವಾಗಿ ಮಾಡುವ ಕಡೆ ಗಮನಿಸಿಲ್ಲ. ದುಡ್ಡು ಕೊಡದೆ ಟ್ರಾನ್ಸ್ಫರ್ ಆಗುವುದಿಲ್ಲ, ವರ್ಗಾವಣೆಗೆ ಯಾವ ಪೊಲೀಸ್ ಠಾಣೆ ಎಂಬುದಕ್ಕೆ ನಿಗದಿತ ಮೊತ್ತ ಇದೆ. ದುಡ್ಡು ಕೈ ಸೇರಿದರಷ್ಟೇ ವರ್ಗಾವಣೆ ಆಗುತ್ತದೆ ಎಂದು ಕೇಂದ್ರ ಸಚಿವರಾದ ಕು.ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ನನ್ನ ಕ್ಷೇತ್ರದ ಪೊಲೀಸ್ ಠಾಣೆಗಳಲ್ಲಿ ಆರು ತಿಂಗಳಿಗೊಮ್ಮೆ 10 ತಿಂಗಳಿಗೆ ಒಮ್ಮೆ ವರ್ಗಾವಣೆ ಮಾಡುತ್ತಾರೆ. ಪದೇಪದೇ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸುತ್ತಾರೆ. ಯಾಕೆ? ಒಂದು ಸಾರಿ ದುಡ್ಡು ಕೊಟ್ಟರೆ ಅದರ ಮೌಲ್ಯ 10 ತಿಂಗಳಿಗೆ ಮಾತ್ರ. ಆಮೇಲೆ ಉಳಿಯಲು ಹೊಸದಾಗಿ ದುಡ್ಡು ಕೊಡಬೇಕು. ಇಲ್ಲವಾದರೆ ಅವರಿಗೆ ವರ್ಗಾವಣೆ ಮಾಡಿ, ಹೆಚ್ಚು ದುಡ್ಡು ಕೊಡುವವರು ಬರುತ್ತಾರೆ ಎಂದು ಟೀಕಿಸಿದರು. ದುಡ್ಡು, ವರ್ಗಾವಣೆ ವ್ಯವಹಾರದಿಂದ ನಮ್ಮ ಅಧಿಕಾರಿಗಳು ಆತ್ಮವಿಶ್ವಾಸ ಕಳಕೊಂಡಿದ್ದಾರೆ ಎಂದರು.

ಕೆಲಸದ ಬದಲಾಗಿ ದುಡ್ಡು ಹೆಚ್ಚು ಮಹತ್ವದ್ದಾಗುತ್ತಿದೆ. ಕರ್ನಾಟಕದಲ್ಲಿ ಕಳೆದ 2 ವರ್ಷಗಳಲ್ಲಿ 1800ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ, ಸಾಮೂಹಿಕ ಅತ್ಯಾಚಾರ, ದೌರ್ಜನ್ಯ ಆಗಿದೆ. ಮುಖ್ಯಮಂತ್ರಿಗಳ ಜಿಲ್ಲೆಯಲ್ಲೇ ಬಲೂನ್ ಮಾರಾಟಕ್ಕೆ ಬಂದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಆಗಿದೆ. ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ನಡೆಯಿತು. ಸರಕಾರ ಬಂದೊಡನೆ, ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದಾಗ ಬೆಳಗಾವಿ ನಗರದಲ್ಲೇ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ನನ್ಯ ನಡೆದಿತ್ತು ಎಂದು ಗಮನ ಸೆಳೆದರು.
ಬೆಂಗಳೂರಿನಲ್ಲಿ ಉಪನ್ಯಾಸಕರು ಅತಿಥಿ ಉಪನ್ಯಾಸಕರ ಮೇಲೆ ಅತ್ಯಾಚಾರ ಮಾಡುತ್ತಾರೆ. ಮೂಡಬಿದಿರೆಯ ಉಪನ್ಯಾಸಕರು ಬೆಂಗಳೂರಿಗೆ ವಿದ್ಯಾರ್ಥಿನಿಯನ್ನು ಕರೆದುಕೊಂಡು ಬಂದು ಅತ್ಯಾಚಾರ ಮಾಡುತ್ತಾರೆ. ಮಲತಂದೆ ತನ್ನ ಮಗಳ ಮೇಲೆ ಮಾಡುತ್ತಾನೆ. ಕೆಲಸ ಹುಡುಕಿಕೊಂಡು ಬಂದ ಬಿಹಾರದ ಕುಟುಂಬ, ಒಡಿಶಾದ ಕುಟುಂಬದ ಮಕ್ಕಳು ಓಡಾಡುತ್ತಿದ್ದರೆ ಅವರನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ ಮಾಡುತ್ತಿದ್ದಾರೆ. ಕರ್ನಾಟಕ, ಬೆಂಗಳೂರಿನಲ್ಲಿ ಈ ಧೈರ್ಯ ಹೇಗೆ ಬಂತು? ಈ ಸರಕಾರ ಸತ್ತಿರುವುದೇ ಇದಕ್ಕೆ ಕಾರಣ ಎಂದು ಕಿಡಿಕಾರಿದರು.
ಅವರ ಕುರ್ಚಿಯ ಮೇಲಾಟ, ಮುಖ್ಯಮಂತ್ರಿ ಯಾರಾಗಬೇಕು? ಯಾರು ಸಚಿವರಾಗಬೇಕು? ಯಾರು ಉಪ ಮುಖ್ಯಮಂತ್ರಿ ಆಗಬೇಕು? ಯಾರು ಮಂತ್ರಿಗಿರಿ ಉಳಿಸಿಕೊಳ್ಳಬೇಕು? ಯಾರು ಮಂತ್ರಿಗಿರಿ ಗಳಿಸಿಕೊಳ್ಳಬೇಕು?- ಈ ಮೇಲಾಟದಲ್ಲಿ ಜನರು ಪ್ರಾಣ ಕಳಕೊಳ್ಳುತ್ತಿದ್ದಾರೆ. ಕಳೆದೆರಡು, ಎರಡೂವರೆ ವರ್ಷಗಳಲ್ಲಿ 20ಕ್ಕೂ ಹೆಚ್ಚು ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಾತಿ ಸಮೀಕ್ಷೆಗೆ ಒತ್ತಡಪೂರ್ವಕವಾಗಿ ಕಳಿಸಿದ್ದು, ಅಲ್ಲಿ ಆರಕ್ಕಿಂತ ಹೆಚ್ಚು ಜನ ಸತ್ತಿದ್ದಾರೆ. 15ಕ್ಕೂ ಹೆಚ್ಚು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡರು. ಮೊದಲ ಬಾರಿಗೆ ಗುತ್ತಿಗೆದಾರರು ಕರ್ನಾಟಕದಲ್ಲಿ ದಯಾಮರಣ ಕೊಡಿ ಎಂದು ಪತ್ರ ಬರೆದಿದ್ದಾರೆ. ಇವರು ಗ್ಯಾರಂಟಿ ಬಗ್ಗೆ ಮಾತನಾಡುತ್ತಾರೆ. ಮಹಿಳೆಯರ ಪ್ರಾಣಕ್ಕೆ ಗ್ಯಾರಂಟಿ ಕೊಡುವವರು ಯಾರು ಎಂದು ಕೇಳಿದರು.
ಸಿಎಂ ಯಾರಾಗುತ್ತಾರೆ? ಸಚಿವ ಸಂಪುಟ ಬದಲಿಸುವಿರಾ ಎಂಬುದು ನಮಗೆ ಸಂಬಂಧಿಸಿಲ್ಲ. ನಮ್ಮ ಜನರು, ಮಹಿಳೆಯರು, ಬಾಲಕಿಯರಿಗೆ ರಕ್ಷಣೆ ಕೊಡಿ ಎಂದು ಅವರು ಸರಕಾರವನ್ನು ಆಗ್ರಹಿಸಿದರು. ಸರಕಾರ ಸ್ಪರ್ಶಜ್ಞಾನ ಕಳಕೊಂಡಿದೆಯೇ? ಕಣ್ಣು ಕಾಣುತ್ತದೆಯೇ ಇಲ್ಲವೇ? ಕಿವಿ ಕೇಳಿಸುತ್ತದೆಯೇ ಇಲ್ಲವೇ ಎಂದು ತಿಳಿಯುತ್ತಿಲ್ಲ. ಕನಿಷ್ಠ ಪಕ್ಷ ಈಗಲಾದರೂ ಎಚ್ಚತ್ತುಕೊಳ್ಳಿ. ಈ ಆತ್ಮಹತ್ಯೆ, ಕೊಲೆಗಳನ್ನು ತಪ್ಪಿಸಿ ಎಂದು ಆಗ್ರಹಿಸಿದರು.
ನೀವು ಯಾರನ್ನಾದರೂ ಮುಖ್ಯಮಂತ್ರಿ ಮಾಡಿ. ಆದರೆ, ಮಹಿಳಾ ರಕ್ಷಣೆ ನಿಮ್ಮ ಆದ್ಯತೆಯಾಗಿರಲಿ. ಗೃಹ ಸಚಿವರು ಏನು ಕೆಲಸ ಮಾಡುತ್ತಿದ್ದಾರೆಂದು ಗೊತ್ತಿಲ್ಲ, ರಾಜ್ಯದ ಸಚಿವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಭೆ ನಡೆಸುತ್ತಾರೋ ಎಂಬುದೂ ಗೊತ್ತಿಲ್ಲ. ಗೃಹ ಸಚಿವರು ವಿವಿಧ ಜಿಲ್ಲೆಗಳಲ್ಲಿ ಎಸ್ಪಿ ಮತ್ತು ಪೊಲೀಸ್ ಅಧಿಕಾರಿಗಳ ಸಭೆ ನಡೆಸಬೇಕು. ಕಾನೂನು- ಸುವ್ಯವಸ್ಥೆಯ ಪರಿಶೀಲನೆ ಮಾಡಬೇಕು. ಆದರೆ, ಇವರು ಬೆಂಗಳೂರು ಬಿಟ್ಟು ಹೊರಟರೆ ತುಮಕೂರು ಎಂಬಂತಿದೆ ಎಂದು ಆಕ್ಷೇಪಿಸಿದರು.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು











Click it and Unblock the Notifications