ಮೊದಲ ಬಾರಿಗೆ ಕರ್ನಾಟಕದಲ್ಲಿ ತೃತೀಯಲಿಂಗಿಗಳ ಸಮೀಕ್ಷೆ
ಈ ಸಮೀಕ್ಷೆಯು ಲಿಂಗತ್ವ ಅಲ್ಪಸಂಖ್ಯಾತ ಜನರಿಗೆ ವಿವಿಧ ಕಲ್ಯಾಣ ಯೋಜನೆಗಳಿಗೆ ನೀತಿಗಳನ್ನು ಮತ್ತು ಹಣವನ್ನು ಹಂಚಿಕೆ ಮಾಡಲು ಸರ್ಕಾರಕ್ಕೆ ಸಹಾಯ ಮಾಡುತ್ತದೆ.
ಬೆಂಗಳೂರು, ಮಾರ್ಚ್ 4: ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ರಾಜ್ಯದಲ್ಲಿನ ಇರುವ ತೃತೀಯಲಿಂಗಿಗಳ ಜನಗಣತಿ ಮಾಡಲು ನಿರ್ಧರಿಸಿದೆ. ಈ ಸಮೀಕ್ಷೆಯು ಲಿಂಗತ್ವ ಅಲ್ಪಸಂಖ್ಯಾತ ಜನರಿಗೆ ವಿವಿಧ ಕಲ್ಯಾಣ ಯೋಜನೆಗಳಿಗೆ ನೀತಿಗಳನ್ನು ಮತ್ತು ಹಣವನ್ನು ಹಂಚಿಕೆ ಮಾಡಲು ಸರ್ಕಾರಕ್ಕೆ ಸಹಾಯ ಮಾಡುತ್ತದೆ.
ಪ್ರಾಯೋಗಿಕವಾಗಿ ಈ ಸಮೀಕ್ಷಾ ಕಾರ್ಯವು ಮಾರ್ಚ್ 10 ರಿಂದ ಏಪ್ರಿಲ್ 24 ರವರೆಗೆ ವಿಜಯಪುರ ಮತ್ತು ಮೈಸೂರಿನಲ್ಲಿ ಸಮೀಕ್ಷೆ ಆರಂಭಗೊಳ್ಳಲಿದೆ. ಈ ಬಗ್ಗೆ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್, 2011ರ ಜನಗಣತಿಯಲ್ಲಿ ರಾಜ್ಯದಲ್ಲಿ ತೃತೀಯಲಿಂಗಿಗಳ ಸಂಖ್ಯೆಯನ್ನು ಸರ್ಕಾರ ದಾಖಲಿಸಿದ್ದು, ಆಗ 34,283 ಲೈಂಗಿಕ ಅಲ್ಪಸಂಖ್ಯಾತರು ದಾಖಲಾಗಿದ್ದಾರೆ ಎಂದರು.

ಈ ಜನಗಣತಿ ವರದಿಯು ನಿಖರವಾಗಿಲ್ಲ. ಏಕೆಂದರೆ ಹಲವಾರು ವ್ಯಕ್ತಿಗಳು ತಮ್ಮ ಹೆಸರುಗಳು ಪಟ್ಟಿಯಿಂದ ಕಾಣೆಯಾಗಿದೆ ಎಂದು ಹೇಳಿಕೊಂಡಿರುವುದರಿಂದ ಅವರಿಗೆ ಸರ್ಕಾರಿ ಪ್ರಯೋಜನಗಳನ್ನು ನಿರಾಕರಿಸಲಾಗಿದೆ. ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ಡೆಲಿವರಿ ನಿರ್ದೇಶನಾಲಯವು (ಇಡಿಸಿಎಸ್) ಸಮೀಕ್ಷೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದು, ಮಾಹಿತಿಯನ್ನು ನೋಂದಾಯಿಸಲು ವಿಶೇಷ ಅಪ್ಲಿಕೇಶನ್ - ಕರ್ಮಣಿ ವೆಬ್ ಅಪ್ಲಿಕೇಶನ್ - ಅನ್ನು ಪ್ರಾರಂಭಿಸಲಾಗಿದೆ. ದತ್ತಾಂಶ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಪುಷ್ಪಲತಾ ಎಚ್ ಮಾತನಾಡಿ, ಅಧಿಕೃತ ಮಾಹಿತಿಯ ಕೊರತೆಯಿಂದ ಸರ್ಕಾರವು ಯಾವುದೇ ನೀತಿಯನ್ನು ರೂಪಿಸಲು ಮತ್ತು ತುಳಿತಕ್ಕೊಳಗಾದ ಸಮುದಾಯಕ್ಕೆ ನೇರ ಪ್ರಯೋಜನಗಳನ್ನು ನೀಡಲು ಸಾಧ್ಯವಾಗುತ್ತಿಲ್ಲ. ಈ ಸಮೀಕ್ಷೆಯು ತೃತೀಯಲಿಂಗಿಗಳ ವೈಯಕ್ತಿಕ ವಿವರಗಳು, ಶಿಕ್ಷಣ, ವೃತ್ತಿ, ವಸತಿ, ಆರೋಗ್ಯ, ಸಾಮಾಜಿಕ ಭದ್ರತೆ ಮತ್ತು ಇತರ ಮಾಹಿತಿಯನ್ನು ದಾಖಲಿಸುತ್ತದೆ. ತೃತೀಯಲಿಂಗಿ ಸಮುದಾಯದ ಸದಸ್ಯರು ಸಮೀಕ್ಷೆಯನ್ನು ರೂಪಿಸಿದ್ದಾರೆ ಮತ್ತು ಪ್ರತಿ ಜಿಲ್ಲೆಯಲ್ಲೂ ಅವರು ಕಾರ್ಯಗತಗೊಳಿಸುತ್ತಾರೆ ಎಂದರು.

ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ರಾಜ್ಯ ಸಮನ್ವಯಾಧಿಕಾರಿ ಮಲ್ಲು ಕುಂಬಾರ್ ಮಾತನಾಡಿ, ಸುಪ್ರೀಂ ಕೋರ್ಟ್ ಆದೇಶದ ಆಧಾರದ ಮೇಲೆ ರಾಜ್ಯ ಸರ್ಕಾರ 2017ರಲ್ಲಿ ನೀತಿ ರೂಪಿಸಿದ್ದು, ಕಾರಣಾಂತರಗಳಿಂದ ಸಮೀಕ್ಷೆ ನಡೆದಿಲ್ಲ. ಸರ್ಕಾರದ ಕ್ರಮವನ್ನು ಸ್ವಾಗತಿಸಿದ ಮಲ್ಲು, ಈ ಸಮೀಕ್ಷೆಯು ಹಲವಾರು ಟ್ರಾನ್ಸ್-ಪರ್ಸನ್ಸ್ ಹೊರಬರಲು ಸಹಾಯ ಮಾಡುತ್ತದೆ ಎಂದು ಹೇಳಿದರು.
2014ರಲ್ಲಿ ಕೇರಳದಲ್ಲಿ ಇದೇ ರೀತಿಯ ಸಮೀಕ್ಷೆಯನ್ನು ನಡೆಸಲಾಯಿತು. ಈಗ ಆ ರಾಜ್ಯವು ಈಗ ಸುಮಾರು ಎರಡು ಲಕ್ಷ ತೃತೀಯ ಲಿಂಗಿಗಳು ಇರುವುದನ್ನು ಅಧಿಕೃತವಾಗಿ ಖಾತರಿಪಡಿಸಿದೆ. ಕರ್ನಾಟಕದಲ್ಲೂ ಅದೇ ಮಾದರಿಯನ್ನು ನಿರೀಕ್ಷಿಸಬಹುದು. ರಾಜ್ಯ ಸರ್ಕಾರ ಸಮೀಕ್ಷೆ ನಡೆಸಲು ಕೇವಲ 70 ಲಕ್ಷ ರೂ.ಗಳನ್ನು ಮೀಸಲಿಟ್ಟಿದ್ದು, ಅದು ಸಾಕಾಗುತ್ತಿಲ್ಲ. ಹೆಸರಿಗಾಗಿ ಸರ್ಕಾರ ಈ ಸಮೀಕ್ಷೆ ನಡೆಸಬಾರದು ಎಂದು ಮಲ್ಲು ಹೇಳಿದರು.
ಪುಷ್ಪಲತಾ ಮಾತನಾಡಿ, ಪ್ರಯೋಗಾತ್ಮಕ ಸಮೀಕ್ಷೆಯ ಸಾಧಕ-ಬಾಧಕಗಳ ಆಧಾರದ ಮೇಲೆ ಅಗತ್ಯವಿದ್ದಲ್ಲಿ ಸರ್ಕಾರ ಮತ್ತಷ್ಟು ಹಣ ಮಂಜೂರು ಮಾಡಲಿದೆ. ತೃತೀಯಲಿಂಗಿ ಸಮುದಾಯದ ಅಗತ್ಯತೆಗಳು, ಪ್ರತಿ ಜಿಲ್ಲೆಯಲ್ಲಿನ ತೃತೀಯಲಿಂಗಿಗಳ ಸಾಂದ್ರತೆ, ಅವರ ಸಾಮಾಜಿಕ, ಆರ್ಥಿಕ ಮತ್ತು ಆರೋಗ್ಯ ಸ್ಥಿತಿಗತಿಗಳು ಮತ್ತು ಅವರ ಜೀವನವನ್ನು ಹೇಗೆ ಸುಧಾರಿಸಬಹುದು ಎಂಬುದನ್ನು ಅರ್ಥಮಾಡಿಕೊಳ್ಳಲು ಈ ಸಮೀಕ್ಷೆಯು ಸರ್ಕಾರಕ್ಕೆ ಸಹಾಯ ಮಾಡುತ್ತದೆ ಎಂದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications