ವೈದ್ಯರ ಸಲಹೆ; ಡಿಸಿಎಂ ಲಕ್ಷ್ಮಣ ಸವದಿ ಕ್ವಾರಂಟೈನ್
ಬೆಂಗಳೂರು, ಏಪ್ರಿಲ್ 17; ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದಾರೆ. ಈ ಕುರಿತು ಅವರು ಫೇಸ್ ಬುಕ್ ಮೂಲಕ ಮಾಹಿತಿ ನೀಡಿದ್ದಾರೆ.
ಶನಿವಾರ ಫೇಸ್ ಬುಕ್ ಸ್ಟೇಟಸ್ ಹಾಕಿರುವ ಸಚಿವರು, "ಬಸವಕಲ್ಯಾಣ ಉಪಚುನಾವಣೆಯ ಪ್ರಚಾರದಲ್ಲಿ ನಾನು ಕೆಲವು ದಿನಗಳ ಕಾಲ ತೊಡಗಿದ್ದ ಸಂದರ್ಭದಲ್ಲಿ ನನ್ನೊಂದಿಗೆ ಭಾಗವಹಿಸಿದ್ದ ಕೆಲವರಿಗೆ ಕೋವಿಡ್ ಸೋಂಕು ತಗುಲಿದ್ದು ಕಂಡುಬಂದಿದೆ" ಎಂದು ಹೇಳಿದ್ದಾರೆ.
"ಅಷ್ಟೇಅಲ್ಲ, ನನ್ನ ಗನ್ಮ್ಯಾನ್ಗೂ ಕೂಡಾ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನಾನು ವೈದ್ಯರ ಸಲಹೆ ಪಡೆದಿದ್ದು, ಕೆಲವು ದಿನಗಳ ಕಾಲ ನನಗೆ ಕ್ವಾರಂಟೈನ್ ಆಗಲು ವೈದ್ಯರು ಸೂಚಿಸಿದ್ದಾರೆ" ಎಂದು ಸಚಿವರು ತಿಳಿಸಿದ್ದಾರೆ.

'ಆ ಪ್ರಕಾರ ನಾನು ಮುನ್ನೆಚ್ಚರಿಕೆ ವಹಿಸುತ್ತಿದ್ದೇನೆ. ಈಗಾಗಲೇ ನಾನು ಕೋವಿಡ್ ಲಸಿಕೆಯನ್ನೂ ಹಾಕಿಸಿಕೊಂಡಿದ್ದೇನೆ. ಈ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ" ಎಂದು ಸಚಿವರು ಸ್ಪಷ್ಟನೆಯನ್ನು ನೀಡಿದ್ದಾರೆ.
ಬಸವಕಲ್ಯಾಣ, ಬೆಳಗಾವಿ ಮತ್ತು ಮಸ್ಕಿ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತೊಡಗಿಸಿಕೊಂಡಿದ್ದರು. ಶನಿವಾರ ಮೂರು ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಹಲವು ನಾಯಕರಿಗೆ ಕೋವಿಡ್ ಸೋಂಕು ತಗುಲಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ.
-
Vastu Tips: ಮನೆಯಲ್ಲಿ ಎರಡು ಕನ್ನಡಿಗಳು ಎದುರುಬದರಿನಲ್ಲಿ ಇದೆಯಾ? ತಕ್ಷಣ ಬದಲಿಸಿ -
Mangoes: ಮಾವಿನಹಣ್ಣು ಖರೀದಿ ಮಾಡುವಾಗ 3 ತಪ್ಪು ಮಾಡ್ಬೇಡಿ! ಈ 6 ಟ್ರಿಕ್ಸ್ ತಿಳ್ಕೊಂಡಿರಿ -
Vastu vs Horoscope: ಮನೆ ವಾಸ್ತು ಪರ್ಫೆಕ್ಟ್ ಆದರೂ ಏಕೆ ಕಿರಿಕಿರಿ? ತಿಳಿಯಿರಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ












Click it and Unblock the Notifications