ಸಾರಿಗೆ ಸಂಸ್ಥೆಗಳನ್ನು ಹಾಳು ಮಾಡಿದ್ದೇ ಬಿಜೆಪಿ: ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು!
ಕರ್ನಾಟಕ ಬಿಜೆಪಿ & ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ನಡುವೆ ಶುರುವಾಗಿರುವ ಟಾಕ್ ವಾರ್ ಬಿಸಿ ಮತ್ತಷ್ಟು ಹೆಚ್ಚಾಗಿದೆ. ಸಾರಿಗೆ ಸಚಿವರಿಗೆ ಸವಾಲನ್ನು ಎಸೆದಿದ್ದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಹೇಳಿಕೆಗೆ ಇದೀಗ ತಿರುಗೇಟು ಸಿಕ್ಕಿದೆ. ಈ ಮೂಲಕ, ಕರ್ನಾಟಕದ ಶಕ್ತಿ ಯೋಜನೆ ಮತ್ತು ಕರ್ನಾಟಕ ಸಾರಿಗೆ ಸಂಸ್ಥೆಗಳ ಅಭಿವೃದ್ಧಿ ವಿಚಾರದ ಬಗ್ಗೆ ಚರ್ಚೆಗೆ ಹೊಸ ಕಿಚ್ಚು ಹೊತ್ತಿಸಿದೆ.
ಮೊದಲಿಗೆ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಟ್ವೀಟ್ ಮಾಡಿ, 'ಮಾನ್ಯ ರಾಮಲಿಂಗಾ ರೆಡ್ಡಿ ಅವರೇ, ತಮ್ಮ ಸರ್ಕಾರ ಕಳೆದ ಡಿಸೆಂಬರ್ನಲ್ಲಿ 20 ಅಂಬಾರಿ ಉತ್ಸವ ಬಸ್ಗಳನ್ನ ಕೆಎಸ್ಆರ್ಟಿಸಿಗೆ ಸೇರ್ಪಡೆಗೊಳಿಸಿದಾಗ, ಒಂದೇ ಒಂದು ಬಸ್ಸನ್ನ ಕೂಡಾ ಉತ್ತರ ಕರ್ನಾಟಕಕ್ಕೆ ನೀಡಿರಲಿಲ್ಲ. ಆದರೆ, ಈಗಾಗಲೇ ಸಾರಿಗೆ ಸಂಸ್ಥೆ ದಿವಾಳಿ ಹಂತ ತಲುಪಿದ್ದರೂ 2000 ಹೊಸ ಬಸ್ಗಳನ್ನು ಖರೀದಿಸುವುದಾಗಿ ಘೋಷಿಸಿದ್ದೀರಿ. ಈ ಎಲ್ಲಾ 2000 ಬಸ್ಗಳು ಕೇವಲ ದಕ್ಷಿಣ ಕರ್ನಾಟಕಕ್ಕೇ ಮೀಸಲಾ? ಅಥವಾ ಇದರಲ್ಲಿ ಎಷ್ಟು ಬಸ್ಗಳನ್ನು ಉತ್ತರ ಕರ್ನಾಟಕದ ಸಾರಿಗೆ ಸಂಸ್ಥೆಗಳು ಪಡೆಯಲಿವೆ? ಎಂಬುದನ್ನು ಸ್ಪಷ್ಟಪಡಿಸಿ.' ಎಂದಿದ್ದರು. ಹೀಗೆ ಬೆಲ್ಲದ್ ಟ್ವೀಟ್ಗೆ ಇದೀಗ ಸಾರಿಗೆ ಸಚಿವರು ಉತ್ತರ ನೀಡಿದ್ದಾರೆ.

'ಸಾರಿಗೆ ಸಂಸ್ಥೆಗಳನ್ನು ಹಾಳು ಮಾಡಿದ್ದೇ ಬಿಜೆಪಿ'
ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರ ಟ್ವೀಟ್ ಪ್ರತಿಕ್ರಿಯೆಯನ್ನ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು 'ಅರವಿಂದ್ ಬೆಲ್ಲದ್ ಅವರೇ, ಉತ್ತರ ಕರ್ನಾಟಕದ ಬಗೆಗಿನ ತಮ್ಮ ಕಾಳಜಿಗೆ ಸ್ಪಂದಿಸುತ್ತಾ, ಈ ಕಾಳಜಿಯು ತಮ್ಮ ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ತೋರಿದ್ದರೆ, ಉತ್ತರ ಕರ್ನಾಟಕದ ಜನರಿಗೆ ಸಾಕಷ್ಟು ಸಾರಿಗೆ ಸೌಲಭ್ಯವನ್ನು ನೀಡಿ, ಸಮಗ್ರ ಅಭಿವೃದ್ಧಿ ಕಾರ್ಯವನ್ನು ಮಾಡಬಹುದಿತ್ತೇನೋ.' ಎಂದು ಬಿಜೆಪಿ ಆಡಳಿತದ ವೈಫಲ್ಯಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ.
'ಕೈ ತೋರಿಸಿ ಅವಲಕ್ಷಣ ಮಾಡಿಸಿಕೊಂಡಂತೆ'
ಹಾಗೇ, 'ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಂದು ನಷ್ಟಕ್ಕೆ ಸಿಲುಕಿಸಿ ಹೋಗಿರುವ ತಮ್ಮ ಪಕ್ಷದ ಬಗ್ಗೆ ಕೆಲವಷ್ಟು ಸರಿಯಾದ ಮಾಹಿತಿಯನ್ನ ಇಟ್ಟುಕೊಳ್ಳಿ, ಟ್ಟೀಟ್ ಮಾಡಲು ಇದು ಸಹಕಾರಿಯಾಗುತ್ತದೆ. ಇಲ್ಲವಾದರೆ ಕೈ ತೋರಿಸಿ ಅವಲಕ್ಷಣ ಮಾಡಿಸಿಕೊಂಡಂತೆ ಆಗುತ್ತದೆ.' ಎಂದು ಬಿಜೆಪಿ ಆಡಳಿತದ ಅವಧಿಯ ಅಂಕಿ ಅಂಶಗಳನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿದ್ದಾರೆ ಸಾರಿಗೆ ಸಚಿವರು.
@BelladArvind ಅವರೇ, ಉತ್ತರ ಕರ್ನಾಟಕದ ಬಗೆಗಿನ ತಮ್ಮ ಕಾಳಜಿಗೆ ಸ್ಪಂದಿಸುತ್ತಾ, ಈ ಕಾಳಜಿಯು ತಮ್ಮ @BJP4Karnataka ಸರ್ಕಾರದ ಆಡಳಿತದ ಅವಧಿಯಲ್ಲಿ ತೋರಿದ್ದರೆ, ಉತ್ತರ ಕರ್ನಾಟಕದ ಜನರಿಗೆ ಸಾಕಷ್ಟು ಸಾರಿಗೆ ಸೌಲಭ್ಯವನ್ನು ನೀಡಿ, ಸಮಗ್ರ ಅಭಿವೃದ್ಧಿ ಕಾರ್ಯವನ್ನು ಮಾಡಬಹುದಿತ್ತೇನೋ.
— Ramalinga Reddy (@RLR_BTM) March 26, 2025
ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಂದು ನಷ್ಟಕ್ಕೆ… https://t.co/LmYm7xBEsM
ಈ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಗ್ಯಾರಂಟಿ ಯೋಜನೆಗಳ ವಿಚಾರವಾಗಿ ಬಿಜೆಪಿ & ಕಾಂಗ್ರೆಸ್ ನಡುವೆ ಮತ್ತೊಂದು ಯುದ್ಧವೇ ಶುರುವಾಗಿದೆ. ಹಾಗೇ ಸಾರಿಗೆ ಸಂಸ್ಥೆ ಅವನತಿ ಹೊಂದುತ್ತಿದೆ ಎಂದು ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದರೆ, ಕಾಂಗ್ರೆಸ್ ನಾಯಕರು ಈ ಆರೋಪಕ್ಕೆ ಉತ್ತರ ನೀಡುತ್ತಿದ್ದು ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಗೆ ವೇದಿಕೆ ಒದಗಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications