ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾರಿಗೆ ಮುಷ್ಕರ; ಜನರ ತೊಂದರೆ ನಿವಾರಿಸಲು ಮೂರು ಕ್ರಮ

|
Google Oneindia Kannada News

ಬೆಂಗಳೂರು, ಏಪ್ರಿಲ್ 9; ಸಾರಿಗೆ ನೌಕರರ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ನೌಕರರು ಮುಷ್ಕರವನ್ನು ನಿಲ್ಲಿಸಿ ಕೆಲಸಕ್ಕೆ ಹಾಜರಾಗಬೇಕು ಎಂದು ಕರೆ ನೀಡಿದ್ದಾರೆ.

ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಲಾಗಿದೆ. 6ನೇ ವೇತನ ಆಯೋಗದ ಶಿಫಾರಸು ಪರಿಗಣಿಸುವಂತೆ ಕೋರಿರುವುದು 9ನೇ ಬೇಡಿಕೆಯಾಗಿದೆ. ಈ ಬಗ್ಗೆ ಸರ್ಕಾರ ಆರ್ಥಿಕ ಅಂಶವನ್ನು ಪರಿಗಣಿಸಿ ತೀರ್ಮಾನ ಕೈಗೊಳ್ಳಲಿದೆ.

ಮುಷ್ಕರ; 6ನೇ ವೇತನ ಆಯೋಗದ ಬಗ್ಗೆ ಸರ್ಕಾರದ ನಿಲುವೇನು? ಮುಷ್ಕರ; 6ನೇ ವೇತನ ಆಯೋಗದ ಬಗ್ಗೆ ಸರ್ಕಾರದ ನಿಲುವೇನು?

ಸಾರಿಗೆ ನೌಕರರ ಮುಷ್ಕರದಿಂದಾಗಿ ಜನರಿಗೆ ತೊಂದರೆ ಆಗಬಾರದೆಂದು ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೆರೆ ರಾಜ್ಯಗಳಿಗೆ ಸಹ ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುತ್ತಿದ್ದು, ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಖಾಸಗಿ ಬಸ್‌ಗಳ ಸಂಚಾರಕ್ಕೆ ಸರ್ಕಾರವೇ ದರವನ್ನು ನಿಗದಿ ಮಾಡಿದೆ.

ಸಾರಿಗೆ ಮುಷ್ಕರ; ವಿಶೇಷ ರೈಲುಗಳ ವೇಳಾಪಟ್ಟಿ ಸಾರಿಗೆ ಮುಷ್ಕರ; ವಿಶೇಷ ರೈಲುಗಳ ವೇಳಾಪಟ್ಟಿ

ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರದ ಹಿನ್ನಲೆಯಲ್ಲಿ ಜನರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಸರ್ಕಾರ ರೈಲ್ವೆ ಇಲಾಖೆಗೆ ಮನವಿ ಮಾಡಿತ್ತು. ವಿಶೇಷ ರೈಲುಗಳನ್ನು ಓಡಿಸುವಂತೆ ಪತ್ರದಲ್ಲಿ ಮನವಿ ಮಾಡಲಾಗಿತ್ತು. ಏಪ್ರಿಲ್ 9 ಮತ್ತು 10ರಂದು ವಿಶೇಷ ರೈಲುಗಳು ಸಂಚಾರವನ್ನು ನಡೆಸುತ್ತಿವೆ.

ಸಾರಿಗೆ ನೌಕರರ ಮುಷ್ಕರ; ಖಾಸಗಿ ಬಸ್‌ಗಳಿಗೆ ದರ ನಿಗದಿ ಮಾಡಿದ ಸರ್ಕಾರ ಸಾರಿಗೆ ನೌಕರರ ಮುಷ್ಕರ; ಖಾಸಗಿ ಬಸ್‌ಗಳಿಗೆ ದರ ನಿಗದಿ ಮಾಡಿದ ಸರ್ಕಾರ

ಹೊರ ರಾಜ್ಯಗಳಿಗೂ ಹೆಚ್ಚುವರಿ ಬಸ್

ಹೊರ ರಾಜ್ಯಗಳಿಗೂ ಹೆಚ್ಚುವರಿ ಬಸ್

ನೆರೆ ರಾಜ್ಯಗಳಾದ ತೆಲಂಗಾಣ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳಿಗೆ 7/4/2021ರಂದು ಪತ್ರ ಬರೆದು ಹೆಚ್ಚುವರಿ ಬಸ್‌ಗಳನ್ನು ಕರ್ನಾಟಕಕ್ಕೆ ಓಡಿಸುವಂತೆ ಕೋರಲಾಗಿದೆ. ಇದಕ್ಕೆ ರಾಜ್ಯ ಸರ್ಕಾರಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ.

ನೆರೆ ರಾಜ್ಯದ ಖಾಸಗಿ ಪ್ರವರ್ತಕರು ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಆಚರಣೆ ಮಾಡಲು ಸಿದ್ಧವಿದ್ದಲ್ಲಿ ಅಂತಹ ಖಾಸಗಿ ವಾಹನಗಳ ಸೇವೆಯನ್ನು ಪಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಹೆಚ್ಚುವರಿ ರೈಲುಗಳ ಸಂಚಾರ

ಹೆಚ್ಚುವರಿ ರೈಲುಗಳ ಸಂಚಾರ

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್‌ಗೆ ಪತ್ರವನ್ನು ಬರೆದು ವಿಶೇಷ ಹೆಚ್ಚುವರಿ ರೈಲುಗಳನ್ನು ಏ.9 ಮತ್ತು 10ರಂದು ಬೆಂಗಳೂರಿನಿಂದ ಬೆಳಗಾವಿ, ಕಲಬುರಗಿ, ಬೀದರ್, ಕಾರವಾರ, ವಿಜಯಪುರ, ಶಿವಮೊಗ್ಗ ಹಾಗೂ ಮೈಸೂರಿಗೆ ಓಡಿಸುವಂತೆ ಕೋರಿದ್ದಾರೆ. ಈಗಾಗಲೇ ಹೆಚ್ಚುವರಿ ರೈಲು ವ್ಯವಸ್ಥೆ ಮಾಡಲಾಗಿದೆ.

18 ವಿಶೇಷ ರೈಲುಗಳ ಸಂಚಾರ

18 ವಿಶೇಷ ರೈಲುಗಳ ಸಂಚಾರ

ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕೋರಿಕೆಯಂತೆ ರೈಲ್ವೆ ಮಂಡಳಿಯು ಏಪ್ರಿಲ್ 8 ರಿಂದ 14ರ ತನಕ ಒಟ್ಟು 18 ಹೆಚ್ಚುವರಿ ರೈಲುಗಳನ್ನು ರಾಜ್ಯದ ವಿವಿಧ ಮಾರ್ಗಗಳಲ್ಲಿ ಓಡಿಸಲು ಅನುಮೋದನೆ ನೀಡಿದೆ.

Recommended Video

#Covid19Update : ದೇಶದಲ್ಲಿ 24 ಗಂಟೆಗಳಲ್ಲಿ 1,31,968 ಜನರಿಗೆ ಕೊರೊನಾ ಪಾಸಿಟಿವ್ | Oneindia Kannada
ಹೆಚ್ಚುವರಿ ಮೆಟ್ರೋ ರೈಲುಗಳ ಸಂಚಾರ

ಹೆಚ್ಚುವರಿ ಮೆಟ್ರೋ ರೈಲುಗಳ ಸಂಚಾರ

ಬೆಂಗಳೂರು ನಗರದಲ್ಲಿ ಹೆಚ್ಚುವರಿ ಮೆಟ್ರೋ ರೈಲುಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಪೀಕ್ ಅವರ್‌ನಲ್ಲಿ ಪ್ರತಿ 10 ನಿಮಿಷದ ಬದಲಾಗಿ 4.50 ನಿಮಿಷಕ್ಕೊಂದು ಹಾಗೂ ನಾನ್ ಪೀಕ್ ಅವರ್‌ನಲ್ಲಿ 7 ನಿಮಿಷಕ್ಕೆ ಒಂದು ರೈಲುಗಳು ಸಂಚಾರ ನಡೆಸಲಿವೆ.

English summary
Transport employees strike entered 3rd day in Karnataka. Government plan to provide transportation for people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X