ರಸ್ತೆಗಿಳಿಯದ ಲಾರಿಗಳು, ಜನರಿಗೆ ಬೆಲೆ ಏರಿಕೆ ಬಿಸಿ?
ಬೆಂಗಳೂರು, ಜ.12 : ಮರಳು ಲಾರಿ ಮಾಲೀಕರು ನಡೆಸುತ್ತಿದ್ದ ಮುಷ್ಕರಕ್ಕೆ ಅಡುಗೆ ಅನಿಲ, ಡೀಸೆಲ್, ಪೆಟ್ರೋಲ್ ಹಾಗೂ ಇನ್ನಿತರೆ ಸರಕು ಸಾಗಣೆ ವಾಹನಗಳು ಬೆಂಬಲ ನೀಡಿದ್ದು, ಶನಿವಾರ ಮಧ್ಯರಾತ್ರಿಯಿಂದ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಿವೆ. ಭಾನುವಾರ ಸಂಜ ಲಾರಿ ಮಾಲೀಕರೊಂದಿಗೆ ಸರ್ಕಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸುವ ಸಾಧ್ಯತೆ ಇದೆ.
ಸರ್ಕಾರ ಲಾರಿ ಮಾಲೀಕರೊಂದಿಗೆ ಶುಕ್ರವಾರ ನಡೆಸಿದ ಸಂಧಾನ ಸಭೆ ವಿಫಲವಾಗಿತ್ತು. ಶನಿವಾರ ಸಂಜೆವರೆಗೆ ಸರ್ಕಾರ ಮಾತುಕತೆಗೆ ಆಹ್ವಾನಿಸದ ಹಿನ್ನೆಲೆಯಲ್ಲಿ ಕಟ್ಟಡ ಸಾಮಗ್ರಿ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಸಾಗಣೆ ವಾಹನಗಳು, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಮಾಲೀಕರು ಮುಷ್ಕರ ಆರಂಭಿಸಿದ್ದಾರೆ. [ಲಾರಿ ಮುಷ್ಕರ, ಮರಳು ಬೆಲೆ ಹೆಚ್ಚಳ]

ಆದರೆ, ಹಾಲು, ಔಷಧ, ತರಕಾರಿ, ಆ್ಯಂಬುಲೆನ್ಸ್ ಮತ್ತು ಪತ್ರಿಕೆ ಸಾಗಣೆ ವಾಹನಗಳು ಸಂಚರಿಸಲಿವೆ. ಒಪ್ಪಂದದ ಆಧಾರದ ಮೇಲೆ ಐಟಿ-ಬಿಟಿ ಕಂಪೆನಿಗಳಿಗೆ ಸಂಚರಿಸುತ್ತಿರುವ ವಾಹನಗಳು ಕೂಡ ಮುಷ್ಕರದಲ್ಲಿ ಭಾಗವಹಿಸುತ್ತಿದ್ದು, ಇದರ ಬಿಸಿ ಸೋಮವಾರ ಕಂಪನಿಗಳಿಗೆ ತಟ್ಟುವ ಸಾಧ್ಯತೆ ಇದೆ. ಹೊರರಾಜ್ಯಗಳ 40 ಸಾವಿರ ವಾಹನಗಳು ಶನಿವಾರ ಸಂಜೆಯೇ ಸಂಚಾರ ಸ್ಥಗಿತಗೊಳಿಸಿವೆ.
ಪ್ರವಾಸಿ ವಾಹನಗಳು ಬುಕ್ಕಿಂಗ್ ಆದ ಕಾರಣ ಅವುಗಳನ್ನು ಓಡಿಸಲು ನಿರ್ಧರಿಸಲಾಗಿದೆ. ಆದರೆ, ಡೀಸೆಲ್ ಮತ್ತು ಪೆಟ್ರೋಲ್ ಕೊರತೆ ಉಂಟಾಗುವುದರಿಂದ ಪ್ರವಾಸಿ ವಾಹನಗಳು ಸ್ಥಗಿತಗೊಳ್ಳುವ ಸಾದ್ಯತೆ ಇದೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಾಗುವ ಟ್ಯಾಕ್ಸಿಗಳು ಮುಷ್ಕರಕ್ಕೆ ಬೆಂಬಲ ನೀಡಿವೆ. ಮರಳು ಲಾರಿ ಮುಷ್ಕರ ಆರಂಭವಾಗಿ 22 ದಿನ ಕಳೆದಿದ್ದು, ಶನಿವಾರದಿಂದ ಉಳಿದ ಲಾರಿ ಮಾಲೀಕರು ಮುಷ್ಕರಕ್ಕೆ ಬೆಂಬಲ ನೀಡಿದೆ.
ಈಗಾಗಲೇ ಲಾರಿ ಮುಷ್ಕರದ ಬಿಸಿ ಜನರಿಗೆ ತಟ್ಟಿದೆ. ಒಂದು ಲಕ್ಷ ರೂ. ನೀಡಿದರೂ ಮರಳು ಸಿಗದ ಪರಿಸ್ಥಿತಿ ಬೆಂಗಳೂರಿನಲ್ಲಿ ನಿರ್ಮಾಣವಾಗಿದೆ. ಇದರಿಂದ ಕಟ್ಟಡ ಮಾಲೀಕರು ಕೆಲಸ ಸ್ಥಗಿತಗೊಳಿಸಿದ್ದಾರೆ. ಈಗ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಸಾಗಣೆ ಲಾರಿಗಳು ಮರಳು ಲಾರಿ ಮಾಲೀಕರಿಗೆ ಬೆಂಬಲ ನೀಡಿರುವುದರಿಂದ ಸಂಕ್ರಾತಿ ಹಬ್ಬಕ್ಕೆ ಜನರಿಗೆ ಬೆಲೆ ಏರಿಕೆ ಬಿಸಿ ತಟ್ಟುವ ಸಾಧ್ಯತೆ ಇದೆ.
ಭಾನುವಾರ ಲಾರಿ ಮಾಲೀಕರ ಜೊತೆ ಸರ್ಕಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸುವ ಸಾಧ್ಯತೆ ಇದ್ದು, ಸಂಧಾನ ಸಫಲವಾದರೆ ಲಾರಿ ಮಾಲೀಕರು ಮುಷ್ಕರ ಹಿಂಪಡೆಯುವ ಸಾಧ್ಯತೆ ಇದೆ. ಟ್ಯಾಕ್ಸಿಗಳು ಮುಷ್ಕರಕ್ಕೆ ಬೆಂಬಲ ನೀಡಿದ್ದು, ಇದರಿಂದ ಖಾಸಗಿ ಕಂಪನಿಗಳ ನೌಕರರಿಗೂ ಮುಷ್ಕರದ ಬಿಸಿ ತಟ್ಟಲಿದೆ.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications