ಸಿದ್ದರಾಮಯ್ಯ, ಸಚಿವರ ಪ್ರಯಾಣ ಭತ್ಯೆ 11 ಕೋಟಿ!
ಬೆಂಗಳೂರು, ಮಾರ್ಚ್ 30 : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟದ ಇತರ ಸಚಿವರ ಪ್ರಯಾಣ ಭತ್ಯೆ ಮಾಹಿತಿ ಬಹಿರಂಗವಾಗಿದೆ. 2013 ರಿಂದ 2016ರ ತನಕ 11.12 ಕೋಟಿ ಪ್ರಯಾಣ ಭತ್ಯೆಯನ್ನು ಮುಖ್ಯಮಂತ್ರಿಗಳು ಮತ್ತು ಇತರ 29 ಸಚಿವರು ಪಡೆದಿದ್ದಾರೆ.
ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ್ ಅವರು ಸಲ್ಲಿಸಿದ್ದ ಅರ್ಜಿಯ ಮೂಲಕ ಈ ವಿವರ ಬಹಿರಂಗಗೊಂಡಿದೆ. ಕೆಲವು ಸಚಿವರ ಪ್ರಯಾಣ ಭತ್ಯೆ ಕುರಿತು ತನಿಖೆ ನಡೆಯಬೇಕು ಎಂದು ಭೀಮಪ್ಪ ಅವರು ಒತ್ತಾಯಿಸಿದ್ದಾರೆ.[ಶಾಸಕರ ಸಂಬಳ, ಭತ್ಯೆ ವಿವರಗಳು]
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 40.3 ಲಕ್ಷ ಭತ್ಯೆ ಪಡೆದಿದ್ದಾರೆ. ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಮೂರು ವರ್ಷಗಳಲ್ಲಿ 75.89 ಲಕ್ಷ ಭತ್ಯೆ ಪಡೆಯುವ ಮೂಲಕ ಸಂಪುಟದ ಸಚಿವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಕ್ರೀಡಾ ಸಚಿವ ಅಭಯ್ ಚಂದ್ರ ಜೈನ್ ಅವರು ಕಳೆದ ಮೂರು ವರ್ಷಗಳಲ್ಲಿ 211 ಬಾರಿ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ ಎಂಬ ಮಾಹಿತಿಯೂ ಬಹಿರಂಗವಾಗಿದೆ. ಸಚಿವರ ಪ್ರಯಾಣ ಭತ್ಯೆಯ ವಿವರವನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಗಮನಕ್ಕೆ ತಂದು, ತನಿಖೆ ನಡೆಸಬೇಕು ಎಂದು ಭೀಮಪ್ಪ ಗಡಾದ್ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳ ವೆಚ್ಚ 40.3 ಲಕ್ಷ
ಮುಖ್ಯಮಂತ್ರಿ ಸಿದ್ದರಾಮಯ್ಯ (ವರುಣಾ ಕ್ಷೇತ್ರದ ಶಾಸಕ) ಅವರು 2013 ರಿಂದ 2016ರ ತನಕ 40.3 ಲಕ್ಷ ಪ್ರಯಾಣ ಭತ್ಯೆಯನ್ನು ಪಡೆದಿದ್ದಾರೆ.

ಸಚಿವರ ಪಟ್ಟಿಯಲ್ಲಿ ಸೊರಕೆ ಮೊದಲ ಸ್ತಾನ
ಪ್ರಯಾಣ ಭತ್ಯೆ ಪಡೆದ ಸಚಿವರ ಪಟ್ಟಿಯಲ್ಲಿ ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ (ಕಾಪು ಕ್ಷೇತ್ರದ ಶಾಸಕ ) ಅವರು ಮೊದಲ ಸ್ಥಾನ ಪಡೆದಿದ್ದಾರೆ. ಸಚಿವರು ಮೂರು ವರ್ಷಗಳಲ್ಲಿ 75.89 ಲಕ್ಷ ಭತ್ಯೆ ಪಡೆದಿದ್ದಾರೆ.

ಆರೋಗ್ಯ ಸಚಿವರು ಪಡೆದಿದ್ದು 70 ಲಕ್ಷ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ (ಮಂಗಳೂರು ಕ್ಷೇತ್ರದ ಶಾಸಕ) ಅವರು ಮೂರು ವರ್ಷಗಳಲ್ಲಿ 70.23 ಲಕ್ಷ ಭತ್ಯೆ ಪಡೆದಿದ್ದಾರೆ.

ಸಾರಿಗೆ ಸಚಿವರು ಪಡೆದಿದ್ದು 8 ಲಕ್ಷ
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (ಬೆಂಗಳೂರಿನ ಬಿಟಿಎಂ ಕ್ಷೇತ್ರದ ಶಾಸಕ) ಅವರು ಮೂರು ವರ್ಷಗಳಲ್ಲಿ 8.71 ಲಕ್ಷ ಪ್ರಯಾಣ ಭತ್ಯೆಯನ್ನು ಪಡೆದಿದ್ದಾರೆ.

ಅರಣ್ಯ ಸಚಿವರು ಪಡೆದಿದ್ದು 67 ಲಕ್ಷ
ಅರಣ್ಯ ಮತ್ತು ಪರಿಸರ ಸಚಿವ ರಮಾನಾಥ ರೈ (ಬಂಟ್ವಾಳ ಕ್ಷೇತ್ರದ ಶಾಸಕ) ಅವರು ಮೂರು ವರ್ಷಗಳಲ್ಲಿ 67.99 ಲಕ್ಷ ಭತ್ಯೆ ಪಡೆದಿದ್ದಾರೆ.

ಸಹಕಾರ ಸಚಿವರ ಭತ್ಯೆ 7 ಲಕ್ಷ
ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ (ಗುಂಡ್ಲುಪೇಟೆ ಕ್ಷೇತ್ರದ ಶಾಸಕ ) ಅವರು 7.98 ಲಕ್ಷ ಪ್ರಯಾಣ ಭತ್ಯೆ ಪಡೆದಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ












Click it and Unblock the Notifications