ಜೀವಿತಾವಧಿಯ ತೆರಿಗೆಯಿಂದ ಹೊರಗಿಡಿ: ಟ್ರಾವೆಲ್ಸ್ ಮಾಲೀಕರ ಸಂಘ ಆಗ್ರಹ
ಕಳೆದ ಎರಡು ವರ್ಷಗಳಿಂದ ಆರ್ಥಿಕ ನಷ್ಟ ಅನುಭವಿಸಿದ ಖಾಸಗಿ ಸಾರಿಗೆ ಸೇವೆ ಕೊಡುವ ಉದ್ಯಮ ಟ್ಯಾಕ್ಸಿ ಉದ್ಯಮ ಕ್ಷೇತ್ರ, ಪ್ರಯಾಣಿಕರ ಬೇಡಿಕೆ ಈಡೇರಿಸಲು ಬೇಡಿಕೆಗೆ ತಕ್ಕ ವಾಹನಗಳಿಲ್ಲದೆ ಸೇವೆ ನೀಡಲು ಚಡಪಡಿಸುತ್ತಿದೆ.
ಆರ್ಥಿಕ ಸಂಕಷ್ಟದಿಂದ ವಾಹನಗಳ ಸಂಖ್ಯೆಯಲ್ಲಿ ಗಣನೀಯ ಖಡಿತವಾಗಿದೆ. ಬಹುಪಾಲು ಚಾಲಕರು ಬೇರೆ ಬೇರೆ ಉದ್ಯೋಗ ಅರಸಿ ಸ್ವಯಂ ವೃತ್ತಿಗಳಲ್ಲಿ ತೊಡಗಿದ್ದಾರೆ, ಇದಲ್ಲದೇ ವೃತ್ತಿಪರ ಚಾಲಕರ ಕೊರತೆಯನ್ನು ಎದುರಿಸುತ್ತಿದ್ದೇವೆ.
ಇದರ ಜೊತೆಗೆ, ಕಂತು ಪಾವತಿಸಲು ಹಣಕಾಸು ಸಂಸ್ಥೆಗಳ ಒತ್ತಡ ವಿಪರೀತ ವಾಗುತ್ತಿದ್ದರಿಂದ ವಾಹನಗಳನ್ನು ಮಾಲೀಕರು ಮಾರಾಟ ಮಾಡಿ ಸಾಲ ಮರುಪಾವತಿ ಮಾಡುತ್ತಿದ್ದಾರೆ. ನಗರದಲ್ಲಿ ಪ್ರಯಾಣಿಕರ ಹೊತ್ತೊಯ್ಯುವ ಟ್ಯಾಕ್ಸಿಗಳ ಬೇಡಿಕೆ ಅಧಿಕವಾಗಿದೆ.

ರಾಜ್ಯ ಸರ್ಕಾರ ಹಾಗೂ ಪ್ರವಾಸೋದ್ಯಮಕ್ಕೆ ತೊಡಕಾಗಿ ಸುದ್ದಿಯಾಗುವ ಮೊದಲೇ ಪರ್ಯಾಯ ವ್ಯವಸ್ಥೆಯಾಗಿ ಪ್ರಯಾಣಿಕರ ಸೇವೆಗಾಗಿ ವಾಹನ ತೆಗೆದುಕೊಳ್ಳುವವರಿಗೆ ಎರಡು ವರ್ಷಗಳ ಕಾಲ ವಾಹನ ಜೀವಿತಾವಧಿಯ ತೆರಿಗೆಯಲ್ಲಿ ಬದಲಾವಣೆ ಮಾಡಿ ವಾರ್ಷಿಕ ತೆರಿಗೆ ಪಾವತಿಸುವಂತೆ ವಾಹನಗಳನ್ನು ನೊಂದಾವಣಿ ಮಾಡಲು ಅವಕಾಶ ಮಾಡಬೇಕಿದೆ.
ನಗರದಲ್ಲಿರುವ ಬಹುರಾಷ್ಟ್ರೀಯ ಕಂಪೆನಿಗಳಿಗೆ, ಅಂತರಾಷ್ಟ್ರೀಯ ವಸ್ತು ಪ್ರದರ್ಶನಗಳು ನಡೆಯುವ ಸಂದರ್ಭದಲ್ಲಿ ವಾಹನಗಳ ಬೇಡಿಕೆ ಅತಿಯಾಗೂವುದು ಮತ್ತು ಗುಣಮಟ್ಟದ ಸೌಲಭ್ಯ ಕೊಡಲು ನಗರದ ಟ್ರಾವೆಲ್ಸ ಮಾಲೀಕರಿಗೆ ಸರ್ಕಾರದಿಂದ ಪ್ರೋತ್ಸಾಹ ದೊರಕಬೇಕಿದೆ.

ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಕರ್ನಾಟಕದವರ ಸಾರಿಗೆ ಉದ್ಯಮ ಕೈತಪ್ಪುವುದು ನಿಶ್ಚಿತ. ಎರಡು ವರ್ಷಗಳ ಕಾಲ ಪ್ರಯಾಣಿಕರ ಹೊತ್ತೊಯ್ಯುವ ಎಲ್ಲಾ ಟ್ಯಾಕ್ಸಿ ವಾಹನಗಳಿಗೆ ಜೀವಿತಾವದಿಯ ತೆರಿಗೆಯಿಂದ ಹೊರಗಿಟ್ಟು ಉದ್ಯಮ ನಡೆಸುವ ಮಾಲೀಕರಿಗೆ ಚಾಲಕರಿಗೆ ಹೊಸ ವಾಹನ ಖರೀದಿಸಲು ಅವಕಾಶ ಕೊಡಬೇಕಿದೆ. (ಕೆ.ರಾಧಾಕೃಷ್ಣ ಹೊಳ್ಳ, ಅಧ್ಯಕ್ಷರು, ಕರ್ನಾಟಕ ರಾಜ್ಯ ಟ್ರಾವೆಲ್ಸ್ ಮಾಲೀಕರ ಸಂಘ).
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications