ಬಿಜೆಪಿ ನಾಯಕ, ವಿಧಾನ ಪರಿಷತ್ ಉಪ ಸಭಾಪತಿಗೆ ಸಂಕಷ್ಟ
ಬೆಂಗಳೂರು, ಜನವರಿ 30: ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ನಾಯಕ, ವಿಧಾನ ಪರಿಷತ್ ಉಪಸಭಾಪತಿ ಎಂ. ಕೆ. ಪ್ರಾಣೇಶ್ಗೆ ಸಂಕಷ್ಟ ಎದುರಾಗಿದೆ. ವಿಧಾನ ಪರಿಷತ್ ಚುನಾವಣೆಯ ಮರು ಮತಗಳ ಎಣಿಕೆಗೆ ಕರ್ನಾಟಕ ಹೈಕೋರ್ಟ್ ಆದೇಶವನ್ನು ನೀಡಿದೆ. 6 ಮತಗಳ ಅಂತರದಲ್ಲಿ ಎಂ. ಕೆ. ಪ್ರಾಣೇಶ್ ವಿರುದ್ಧ ಸೋಲು ಕಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಎ. ವಿ. ಗಾಯತ್ರಿ ಶಾಂತೇಗೌಡ ಮರು ಮತ ಎಣಿಕೆಗಾಗಿ ಹೈಕೋರ್ಟ್ ಮೊರೆ ಹೋಗಿದ್ದರು.
ಮೂರು ವರ್ಷಗಳ ಹಿಂದೆ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ ನಡೆದಿತ್ತು. ಬಿಜೆಪಿಯಿಂದ ಎಂ. ಕೆ. ಪ್ರಾಣೇಶ್ ಮತ್ತು ಕಾಂಗ್ರೆಸ್ನಿಂದ ಎ. ವಿ. ಗಾಯತ್ರಿ ಶಾಂತೇಗೌಡ ಅಭ್ಯರ್ಥಿಯಾಗಿದ್ದರು. ಚುನಾವಣೆಯಲ್ಲಿ ಎಂ. ಕೆ. ಪ್ರಾಣೇಶ್ 6 ಮತಗಳ ಅಂತರದಲ್ಲಿ ಜಯಗಳಿಸಿದ್ದರು.

ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದ ಪರಾಜಿತ ಅಭ್ಯರ್ಥಿ ಎ. ವಿ. ಗಾಯತ್ರಿ ಶಾಂತೇಗೌಡ ಚುನಾವಣೆಯ ಮರು ಮತ ಎಣಿಕೆಗೆ ಮನವಿ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರದ 12 ನಾಮ ನಿರ್ದೇಶಿತರ ಮತದಾನ ಬಿಟ್ಟು ಉಳಿದ ಮತಗಳ ಮರು ಎಣಿಕೆಯನ್ನು ಮಾರ್ಚ್ 7ರೊಳಗೆ ಮಾಡಿ, ವರದಿ ನೀಡುವಂತೆ ಸೂಚನೆ ನೀಡಿದೆ.
ಎಂ. ಕೆ. ಪ್ರಾಣೇಶ್ ಉಪ ಸಭಾಪತಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಗಳಿಸಿದ್ದ ಎಂ. ಕೆ. ಪ್ರಾಣೇಶ್ 2022ರಲ್ಲಿ ವಿಧಾನ ಪರಿಷತ್ ಉಪ ಸಭಾಪತಿಯಾಗಿಯೂ ಆಯ್ಕೆಯಾಗಿದ್ದಾರೆ. ಈಗ ಮರು ಮತ ಎಣಿಕೆಯಲ್ಲಿ ಎ. ವಿ. ಗಾಯತ್ರಿ ಶಾಂತೇಗೌಡ ಜಯಗಳಿಸಿದರೆ ಬಿಜೆಪಿ ನಾಯಕನ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ.
ಡಿಸೆಂಬರ್ 23, 2022ರಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆದಿತ್ತು. ಬಿಜೆಪಿಯಿಂದ ಎಂ. ಕೆ. ಪ್ರಾಣೇಶ್ ಅಭ್ಯರ್ಥಿಯಾಗಿದ್ದರು. 39 ಸದಸ್ಯರು ಎಂ.ಕೆ. ಪ್ರಾಣೇಶ್ ಪರವಾಗಿ, ಕಾಂಗ್ರೆಸ್ ಅಭ್ಯರ್ಥಿ ಅರವಿಂದ ಕುಮಾರ್ ಅರಳಿ ಪರವಾಗಿ 26 ಸದಸ್ಯರು ಮತ ಚಲಾಯಿಸಿದ್ದರು. ಎಂ. ಕೆ. ಪ್ರಾಣೇಶ್ ಜಯಗಳಿಸಿದ್ದರು.
ಆಗ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ವಿಧಾನ ಪರಿಷತ್ ಉಪ ಸಭಾಪತಿಯಾಗಿ ಆಯ್ಕೆಯಾಗಿದ್ದ ಎಂ. ಕೆ. ಪ್ರಾಣೇಶ್ ಅವರಿಗೆ ಅಭಿನಂದನೆ ಸಲ್ಲಿಸಿದ್ದರು. "ಎಂ. ಕೆ. ಪ್ರಾಣೇಶ್ ಕ್ರಿಯಾಶೀಲ ವ್ಯಕ್ತಿ, ಚಿಕ್ಕ ವಯಸ್ಸಿನಲ್ಲಿಯೇ ಸಾರ್ವಜನಿಕ ಜೀವನದಲ್ಲಿ ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡಿ ಎಲ್ಲರ ಮನಸ್ಸು ಗೆದ್ದಿದ್ದಾರೆ" ಎಂದು ಹೇಳಿದ್ದರು.
"ಸಮಸ್ಯೆಗಳ ಕುರಿತು ಹೋರಾಟ ನಡೆಸಿ ಪರಿಹಾರ ಕಂಡುಕೊಳ್ಳುವ ರಾಜಕಾರಣಿ ಅವರು. ನಡೆ ಮತ್ತು ನುಡಿ ಎರಡೂ ಒಂದೇ. ಸೌಮ್ಯ ಸ್ವಭಾವದ ವ್ಯಕ್ತಿ, ಪಕ್ಷವನ್ನು ಮೀರಿ ಅವರು ಎಲ್ಲರೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದಾರೆ" ಎಂದು ಬಸವರಾಜ ಬೊಮ್ಮಾಯಿ ಬಣ್ಣಿಸಿದ್ದರು.
ಸದ್ಯದ ಮಾಹಿತಿ ಪ್ರಕಾರ ಮರು ಮತ ಎಣಿಕೆಯಲ್ಲಿ ಎ. ವಿ. ಗಾಯತ್ರಿ ಶಾಂತೇಗೌಡ ಜಯಗಳಿಸಿದರೆ ಎಂ. ಕೆ. ಪ್ರಾಣೇಶ್ ಈ ಕುರಿತು ಕಾನೂನು ಹೋರಾಟವನ್ನು ಸುಪ್ರೀಂಕೋರ್ಟ್ನಲ್ಲಿ ಮುಂದುವರೆಸುವ ಆಯ್ಕೆ ಇದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications