ಬಿಜೆಪಿ ನಾಯಕ, ವಿಧಾನ ಪರಿಷತ್ ಉಪ ಸಭಾಪತಿಗೆ ಸಂಕಷ್ಟ
ಬೆಂಗಳೂರು, ಜನವರಿ 30: ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ನಾಯಕ, ವಿಧಾನ ಪರಿಷತ್ ಉಪಸಭಾಪತಿ ಎಂ. ಕೆ. ಪ್ರಾಣೇಶ್ಗೆ ಸಂಕಷ್ಟ ಎದುರಾಗಿದೆ. ವಿಧಾನ ಪರಿಷತ್ ಚುನಾವಣೆಯ ಮರು ಮತಗಳ ಎಣಿಕೆಗೆ ಕರ್ನಾಟಕ ಹೈಕೋರ್ಟ್ ಆದೇಶವನ್ನು ನೀಡಿದೆ. 6 ಮತಗಳ ಅಂತರದಲ್ಲಿ ಎಂ. ಕೆ. ಪ್ರಾಣೇಶ್ ವಿರುದ್ಧ ಸೋಲು ಕಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಎ. ವಿ. ಗಾಯತ್ರಿ ಶಾಂತೇಗೌಡ ಮರು ಮತ ಎಣಿಕೆಗಾಗಿ ಹೈಕೋರ್ಟ್ ಮೊರೆ ಹೋಗಿದ್ದರು.
ಮೂರು ವರ್ಷಗಳ ಹಿಂದೆ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ ನಡೆದಿತ್ತು. ಬಿಜೆಪಿಯಿಂದ ಎಂ. ಕೆ. ಪ್ರಾಣೇಶ್ ಮತ್ತು ಕಾಂಗ್ರೆಸ್ನಿಂದ ಎ. ವಿ. ಗಾಯತ್ರಿ ಶಾಂತೇಗೌಡ ಅಭ್ಯರ್ಥಿಯಾಗಿದ್ದರು. ಚುನಾವಣೆಯಲ್ಲಿ ಎಂ. ಕೆ. ಪ್ರಾಣೇಶ್ 6 ಮತಗಳ ಅಂತರದಲ್ಲಿ ಜಯಗಳಿಸಿದ್ದರು.

ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದ ಪರಾಜಿತ ಅಭ್ಯರ್ಥಿ ಎ. ವಿ. ಗಾಯತ್ರಿ ಶಾಂತೇಗೌಡ ಚುನಾವಣೆಯ ಮರು ಮತ ಎಣಿಕೆಗೆ ಮನವಿ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರದ 12 ನಾಮ ನಿರ್ದೇಶಿತರ ಮತದಾನ ಬಿಟ್ಟು ಉಳಿದ ಮತಗಳ ಮರು ಎಣಿಕೆಯನ್ನು ಮಾರ್ಚ್ 7ರೊಳಗೆ ಮಾಡಿ, ವರದಿ ನೀಡುವಂತೆ ಸೂಚನೆ ನೀಡಿದೆ.
ಎಂ. ಕೆ. ಪ್ರಾಣೇಶ್ ಉಪ ಸಭಾಪತಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಗಳಿಸಿದ್ದ ಎಂ. ಕೆ. ಪ್ರಾಣೇಶ್ 2022ರಲ್ಲಿ ವಿಧಾನ ಪರಿಷತ್ ಉಪ ಸಭಾಪತಿಯಾಗಿಯೂ ಆಯ್ಕೆಯಾಗಿದ್ದಾರೆ. ಈಗ ಮರು ಮತ ಎಣಿಕೆಯಲ್ಲಿ ಎ. ವಿ. ಗಾಯತ್ರಿ ಶಾಂತೇಗೌಡ ಜಯಗಳಿಸಿದರೆ ಬಿಜೆಪಿ ನಾಯಕನ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ.
ಡಿಸೆಂಬರ್ 23, 2022ರಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆದಿತ್ತು. ಬಿಜೆಪಿಯಿಂದ ಎಂ. ಕೆ. ಪ್ರಾಣೇಶ್ ಅಭ್ಯರ್ಥಿಯಾಗಿದ್ದರು. 39 ಸದಸ್ಯರು ಎಂ.ಕೆ. ಪ್ರಾಣೇಶ್ ಪರವಾಗಿ, ಕಾಂಗ್ರೆಸ್ ಅಭ್ಯರ್ಥಿ ಅರವಿಂದ ಕುಮಾರ್ ಅರಳಿ ಪರವಾಗಿ 26 ಸದಸ್ಯರು ಮತ ಚಲಾಯಿಸಿದ್ದರು. ಎಂ. ಕೆ. ಪ್ರಾಣೇಶ್ ಜಯಗಳಿಸಿದ್ದರು.
ಆಗ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ವಿಧಾನ ಪರಿಷತ್ ಉಪ ಸಭಾಪತಿಯಾಗಿ ಆಯ್ಕೆಯಾಗಿದ್ದ ಎಂ. ಕೆ. ಪ್ರಾಣೇಶ್ ಅವರಿಗೆ ಅಭಿನಂದನೆ ಸಲ್ಲಿಸಿದ್ದರು. "ಎಂ. ಕೆ. ಪ್ರಾಣೇಶ್ ಕ್ರಿಯಾಶೀಲ ವ್ಯಕ್ತಿ, ಚಿಕ್ಕ ವಯಸ್ಸಿನಲ್ಲಿಯೇ ಸಾರ್ವಜನಿಕ ಜೀವನದಲ್ಲಿ ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡಿ ಎಲ್ಲರ ಮನಸ್ಸು ಗೆದ್ದಿದ್ದಾರೆ" ಎಂದು ಹೇಳಿದ್ದರು.
"ಸಮಸ್ಯೆಗಳ ಕುರಿತು ಹೋರಾಟ ನಡೆಸಿ ಪರಿಹಾರ ಕಂಡುಕೊಳ್ಳುವ ರಾಜಕಾರಣಿ ಅವರು. ನಡೆ ಮತ್ತು ನುಡಿ ಎರಡೂ ಒಂದೇ. ಸೌಮ್ಯ ಸ್ವಭಾವದ ವ್ಯಕ್ತಿ, ಪಕ್ಷವನ್ನು ಮೀರಿ ಅವರು ಎಲ್ಲರೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದಾರೆ" ಎಂದು ಬಸವರಾಜ ಬೊಮ್ಮಾಯಿ ಬಣ್ಣಿಸಿದ್ದರು.
ಸದ್ಯದ ಮಾಹಿತಿ ಪ್ರಕಾರ ಮರು ಮತ ಎಣಿಕೆಯಲ್ಲಿ ಎ. ವಿ. ಗಾಯತ್ರಿ ಶಾಂತೇಗೌಡ ಜಯಗಳಿಸಿದರೆ ಎಂ. ಕೆ. ಪ್ರಾಣೇಶ್ ಈ ಕುರಿತು ಕಾನೂನು ಹೋರಾಟವನ್ನು ಸುಪ್ರೀಂಕೋರ್ಟ್ನಲ್ಲಿ ಮುಂದುವರೆಸುವ ಆಯ್ಕೆ ಇದೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications