ತೆಲಂಗಾಣ ಶಾಸಕರ ಖರೀದಿ ಪ್ರಕರಣ: ಬಿ.ಎಲ್. ಸಂತೋಷ್ಗೆ ಎರಡನೇ ನೋಟಿಸ್
ಬೆಂಗಳೂರು, ನವೆಂಬರ್ 25: ತೆಲಂಗಾಣ ರಾಷ್ಟ್ರೀಯ ಸಮಿತಿ ಶಾಸಕರನ್ನು ಖರೀದಿಸಲು ಯತ್ನಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ಗೆ ಎರಡನೇ ಬಾರಿ ನೋಟಿಸ್ ಜಾರಿಗೊಳಿಸಿದೆ.
ಗುರುವಾರ ನೀಡಿರುವ ಎರಡನೇ ನೋಟಿಸ್ ನಲ್ಲಿ ಬಿಎಲ್ ಸಂತೋಷ್ ಜೊತೆಗೆ ಇನ್ನೂ ಮೂವರು ಆರೋಪಿಗಳನ್ನು ಎಸ್ಐಟಿ ತಂಡವು ಉಲ್ಲೇಖಿಸಿದೆ. ಕೇರಳದ ಜಗ್ಗು ಸ್ವಾಮಿ, ತುಷಾರ್ ವೆಳ್ಳಾಪಳ್ಳಿ ಹಾಗೂ ಬಿ ಶ್ರೀನಿವಾಸ್ ಎಂಬುವವರನ್ನು ನೋಟಿಸ್ ನಲ್ಲಿ ಹೆಸರಿಸಲಾಗಿದೆ. ಇದುವರೆಗೂ ನಡೆಸಿರುವ ವಿಚಾರಣೆಗೆ ಸಂಬಂದಿಸಿದಂತೆ ತನಿಖಾ ವರದಿಯನ್ನು ಎಸ್ಐಟಿ ತಂಡವು ಎಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿದೆ.
ತೆಲಂಗಾಣ ಹೈಕೋರ್ಟ್ ಆದೇಶದ ಮೇಲೆ ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿರುವ ಎಸ್ಐಟಿ ತಂಡವು ಈ ಮೊದಲೇ ಬಿಎಲ್ ಸಂತೋಷ್ಗೆ ನೋಟಿಸ್ ನೀಡಿತ್ತು. ಆದರೆ ಇದುವರೆಗೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮತ್ತೊಮ್ಮೆ ನೋಟಿಸ್ ಜಾರಿಗೊಳಿಸುವಂತೆ ಬುಧವಾರ ಕೋರ್ಟ್ ಸೂಚನೆ ನೀಡಿತ್ತು. ಇದರ ಮಧ್ಯೆ ತನಿಖಾ ತಂಡದ ಎದುರು ಹಾಜರಾದ ಆರೋಪಿ ಬಿ ಶ್ರೀನಿವಾಸ್ ಅನ್ನು ಈಗಾಗಲೇ ವಿಚಾರಣೆ ನಡೆಸಲಾಗಿದೆ.

ನ.26 ಅಥವಾ ನ.28ರಂದು ವಿಚಾರಣೆಗೆ ಹಾಜರಾಗಲು ಸೂಚನೆ:
ಎಸ್ಐಟಿ ತಂಡವು ನೀಡಿರುವ ಎರಡನೇ ನೋಟಿಸ್ ನಲ್ಲಿ ನವೆಂಬರ್ 26 ಅಥವಾ ನವೆಂಬರ್ 28ರಂದು ತನಿಖಾ ತಂಡದ ಎದುರು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಈ ಹಿಂದೆ ನವೆಂಬರ್ 21ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಲ್ ಸಂತೋಷ್ ಹಾಗೂ ಕೇರಳದ ಮತ್ತಿಬ್ಬರು ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಈ ಇಬ್ಬರು ವಿಚಾರಣೆಗೆ ಹಾಜರಾಗಿರಲಿಲ್ಲ.
ನವೆಂಬರ್ 21 ರಂದು ಹೈದರಾಬಾದ್ನಲ್ಲಿ ತನ್ನ ಮುಂದೆ ಹಾಜರಾಗುವಂತೆ ಎಸ್ಐಟಿ ತನ್ನ ನೋಟಿಸ್ನಲ್ಲಿ ಬಿಎಲ್ ಸಂತೋಷ್ಗೆ ತಿಳಿಸಿದೆ. ಒಂದು ವೇಳೆ ಅವರು ಹಾಜರಾಗಲು ವಿಫಲವಾದರೆ ಅವರನ್ನು ಬಂಧಿಸಲಾಗುವುದು ಎಂದು ಅದು ಹೇಳಿದೆ. ಕಳೆದ ತಿಂಗಳು ಟಿಆರ್ಎಸ್ನ ನಾಲ್ವರು ಶಾಸಕರನ್ನು ಭಾರಿ ಹಣದ ಆಮಿಷವೊಡ್ಡಿ ಬಿಜೆಪಿಗೆ ಸೆಳೆಯಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದ ಮೂವರು ಬಿಜೆಪಿ ಏಜೆಂಟ್ಗಳ ನಡುವಿನ ಸಂಭಾಷಣೆಯಲ್ಲಿ ಬಿಎಲ್ ಸಂತೋಷ್ ಹೆಸರು ಕಾಣಿಸಿಕೊಂಡಿತ್ತು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications