ತೆಲಂಗಾಣ ಶಾಸಕರ ಖರೀದಿ ಪ್ರಕರಣ: ಬಿ.ಎಲ್. ಸಂತೋಷ್ಗೆ ಎರಡನೇ ನೋಟಿಸ್
ಬೆಂಗಳೂರು, ನವೆಂಬರ್ 25: ತೆಲಂಗಾಣ ರಾಷ್ಟ್ರೀಯ ಸಮಿತಿ ಶಾಸಕರನ್ನು ಖರೀದಿಸಲು ಯತ್ನಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ಗೆ ಎರಡನೇ ಬಾರಿ ನೋಟಿಸ್ ಜಾರಿಗೊಳಿಸಿದೆ.
ಗುರುವಾರ ನೀಡಿರುವ ಎರಡನೇ ನೋಟಿಸ್ ನಲ್ಲಿ ಬಿಎಲ್ ಸಂತೋಷ್ ಜೊತೆಗೆ ಇನ್ನೂ ಮೂವರು ಆರೋಪಿಗಳನ್ನು ಎಸ್ಐಟಿ ತಂಡವು ಉಲ್ಲೇಖಿಸಿದೆ. ಕೇರಳದ ಜಗ್ಗು ಸ್ವಾಮಿ, ತುಷಾರ್ ವೆಳ್ಳಾಪಳ್ಳಿ ಹಾಗೂ ಬಿ ಶ್ರೀನಿವಾಸ್ ಎಂಬುವವರನ್ನು ನೋಟಿಸ್ ನಲ್ಲಿ ಹೆಸರಿಸಲಾಗಿದೆ. ಇದುವರೆಗೂ ನಡೆಸಿರುವ ವಿಚಾರಣೆಗೆ ಸಂಬಂದಿಸಿದಂತೆ ತನಿಖಾ ವರದಿಯನ್ನು ಎಸ್ಐಟಿ ತಂಡವು ಎಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿದೆ.
ತೆಲಂಗಾಣ ಹೈಕೋರ್ಟ್ ಆದೇಶದ ಮೇಲೆ ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿರುವ ಎಸ್ಐಟಿ ತಂಡವು ಈ ಮೊದಲೇ ಬಿಎಲ್ ಸಂತೋಷ್ಗೆ ನೋಟಿಸ್ ನೀಡಿತ್ತು. ಆದರೆ ಇದುವರೆಗೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮತ್ತೊಮ್ಮೆ ನೋಟಿಸ್ ಜಾರಿಗೊಳಿಸುವಂತೆ ಬುಧವಾರ ಕೋರ್ಟ್ ಸೂಚನೆ ನೀಡಿತ್ತು. ಇದರ ಮಧ್ಯೆ ತನಿಖಾ ತಂಡದ ಎದುರು ಹಾಜರಾದ ಆರೋಪಿ ಬಿ ಶ್ರೀನಿವಾಸ್ ಅನ್ನು ಈಗಾಗಲೇ ವಿಚಾರಣೆ ನಡೆಸಲಾಗಿದೆ.

ನ.26 ಅಥವಾ ನ.28ರಂದು ವಿಚಾರಣೆಗೆ ಹಾಜರಾಗಲು ಸೂಚನೆ:
ಎಸ್ಐಟಿ ತಂಡವು ನೀಡಿರುವ ಎರಡನೇ ನೋಟಿಸ್ ನಲ್ಲಿ ನವೆಂಬರ್ 26 ಅಥವಾ ನವೆಂಬರ್ 28ರಂದು ತನಿಖಾ ತಂಡದ ಎದುರು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಈ ಹಿಂದೆ ನವೆಂಬರ್ 21ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಲ್ ಸಂತೋಷ್ ಹಾಗೂ ಕೇರಳದ ಮತ್ತಿಬ್ಬರು ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಈ ಇಬ್ಬರು ವಿಚಾರಣೆಗೆ ಹಾಜರಾಗಿರಲಿಲ್ಲ.
ನವೆಂಬರ್ 21 ರಂದು ಹೈದರಾಬಾದ್ನಲ್ಲಿ ತನ್ನ ಮುಂದೆ ಹಾಜರಾಗುವಂತೆ ಎಸ್ಐಟಿ ತನ್ನ ನೋಟಿಸ್ನಲ್ಲಿ ಬಿಎಲ್ ಸಂತೋಷ್ಗೆ ತಿಳಿಸಿದೆ. ಒಂದು ವೇಳೆ ಅವರು ಹಾಜರಾಗಲು ವಿಫಲವಾದರೆ ಅವರನ್ನು ಬಂಧಿಸಲಾಗುವುದು ಎಂದು ಅದು ಹೇಳಿದೆ. ಕಳೆದ ತಿಂಗಳು ಟಿಆರ್ಎಸ್ನ ನಾಲ್ವರು ಶಾಸಕರನ್ನು ಭಾರಿ ಹಣದ ಆಮಿಷವೊಡ್ಡಿ ಬಿಜೆಪಿಗೆ ಸೆಳೆಯಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದ ಮೂವರು ಬಿಜೆಪಿ ಏಜೆಂಟ್ಗಳ ನಡುವಿನ ಸಂಭಾಷಣೆಯಲ್ಲಿ ಬಿಎಲ್ ಸಂತೋಷ್ ಹೆಸರು ಕಾಣಿಸಿಕೊಂಡಿತ್ತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications