ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನಂತ ಕುಮಾರ್ ಹೆಗಡೆ ಬೆಂಗಾವಲು ಕಾರು ಅಪಘಾತ: ಕೊಲೆ ಸಂಚಿನ ಆರೋಪ

|
Google Oneindia Kannada News

Recommended Video

ಅನಂತ್ ಕುಮಾರ್ ಹೆಗಡೆ ಕಾರಿಗೆ ಅಪಘಾತ | ಕೊಲೆ ಸಂಚಿನ ಆರೋಪ| Oneindia Kannada

ಹಲಗೇರಿ, ಏಪ್ರಿಲ್ 18: ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ ಕುಮಾರ್ ಹೆಗಡೆ ಅವರ ಬೆಂಗಾವಲಿನ ಕಾರು ಅಪಘಾತಕ್ಕೆ ತುತ್ತಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುಖ್ಯಮಂತ್ರಿಯಾಗಬೇಕೆಂದು ಕನಸು ಕಂಡಿಲ್ಲ- ಅನಂತಕುಮಾರ್ ಹೆಗ್ಡೆಮುಖ್ಯಮಂತ್ರಿಯಾಗಬೇಕೆಂದು ಕನಸು ಕಂಡಿಲ್ಲ- ಅನಂತಕುಮಾರ್ ಹೆಗ್ಡೆ

ನಿನ್ನೆ(ಏ.17) ರಾತ್ರಿ 11:30 ರ ಸಮಯದಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಲಗೇರಿ ಬಳಿ ಹೆಗಡೆ ಕಾರಿನಲ್ಲಿ ಚಲಿಸುತ್ತಿದ್ದ ವೇಳೆಯಲ್ಲಿ, ಟ್ರಕ್ ವೊಂದು ಬಂದು ಅವರ ಕಾರನ್ನು ಗುದ್ದಲು ಪ್ರಯತ್ನಿಸಿತ್ತು. ಆದರೆ ಅವರು ವೇಗವಾಗಿ ಚಲಿಸುತ್ತಿದ್ದರಿಂದ ಅವರಿಗೆ ಯಾವುದೇ ಅಪಾಯ ಸಂಭವಿಸಲಿಲ್ಲ. ಆದರೆ ಅವರ ಹಿಂದೆ ಚಲಿಸುತ್ತಿದ್ದ ಬೆಂಗಾವಲಿನ ಕಾರಿಗೆ ಟ್ರಕ್ಕು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಸಹಾಯಕ ಸಿಬ್ಬಂದಿಗೆ ಗಂಭೀರ ಗಾಯವಾಗಿದೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಹೆಗಡೆ, 'ಇದು ನನ್ನನ್ನು ಕೊಲೆ ಮಾಡಲು ಬೇಕೆಂದೇ ಮಾಡಿದ ಪಿತೂರಿ. ನಮ್ಮ ಸಹಾಯಕ ಸಿಬ್ಬಂದಿಯೊಬ್ಬರು ಈ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಗಂಭೀರ ತನಿಖೆ ಆಗಬೇಕು' ಎಂದಿದ್ದಾರೆ.

Truck hits Hegdes escort vehicle, he claims attempt on his life

ಘಟನೆಗೆ ಸಂಬಂಧಿಸಿದಂತೆ ಟ್ರಕ್ ಚಾಲಕನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಘಟನೆಗು ಮುನ್ನ ಆತ ಯಾವುದೇ ರೀತಿಯ ಮದ್ಯಸೇವನೆ ಮಾಡಿರಲಿಲ್ಲ ಎಂಬುದು ದೃಢವಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

English summary
Union Minister Anant Kumar Hegde's escort vehicle was hit by a truck in Karnataka's Haveri district late on Tuesday night. Hegde was traveling near Halageri in Ranebennur taluk of Haveri district around 11:30 p.m. when the incident took place. Police have arrested the truck driver.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X