"ಟ್ರಂಪ್ ಅವರು ಹೇಳಿದ್ದೇ ಒಂದು ಮೋದಿಯವರು ಹೇಳಿದ್ದೇ ಒಂದು"
ಬೆಂಗಳೂರು, ನವೆಂವರ್ 01: ಯುದ್ದ ವಿರಾಮದ ಬಗ್ಗೆ ಅಮೆರಿಕಾ ಅಧ್ಯಕ್ಷ ಟ್ರಂಪ್ ಹೇಳಿದ್ದೇ ಒಂದು ಮೋದಿಯವರು ಹೇಳಿದ್ದೇ ಒಂದು. ಆದರೆ ಇಂದಿರಾಗಾಂಧಿ ಅವರು ನನ್ನನ್ನು ಹಾಗೂ ಈ ದೇಶವನ್ನೂ ಯಾರೂ ಸಹ ಹೆದರಿಸಲು ಸಾಧ್ಯವಿಲ್ಲ ಎಂದು ಗುಡುಗಿದ್ದರು. ನನ್ನ ಕೊನೆಯ ರಕ್ತದ ಹನಿ ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗೆ ಮೀಸಲು ಎಂದಿದ್ದರು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.
ಬೆಂಗಳೂರಿನ ಜೆ ಪಿ ನಗರದ ಸಾರಕ್ಕಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ಪ್ರಪಂಚದ ನೂರಾರು ದೇಶಗಳು ಇಂದಿರಾಗಾಂಧಿಯವರಿಗೆ ಗೌರವ ನೀಡುತ್ತಿದ್ದವು. ಉಕ್ಕಿನ ಮಹಿಳೆ ಎಂದು ಕರೆದವು. ಇವರು ಎಂದಿಗೂ ಸೋಲು ಗೆಲುವಿನ ಬಗ್ಗೆ ಚಿಂತೆ ಮಾಡಲಿಲ್ಲ. ಚಿಕ್ಕಮಗಳೂರಿನಲ್ಲಿ ಉಪಚುನಾವಣೆಯಗೆ ನಿಂತು ಗೆಲುವು ಸಾಧಿಸಿ ಮತ್ತೆ ದೇಶದಲ್ಲಿ ಪಕ್ಷ ಕಟ್ಟಿದರು. ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದ ಜನತಾದಳದವರಿಗೆ ದೇಶ ಮುನ್ನಡೆಸಲು ಆಗಲಿಲ್ಲ. ನಂತರ ಇಂದಿರಾಗಾಂಧಿ ಅವರು ಮತ್ತೆ ಚುನಾವಣೆ ಗೆದ್ದು ಈ ದೇಶದ ಚುಕ್ಕಾಣಿ ಹಿಡಿದರು ಎಂದರು.

ಕಾಂಗ್ರೆಸ್ ಪಕ್ಷಕ್ಕೆ ಇಂದಿರಾಗಾಂಧಿ ಅವರ ಹೆಸರೆಂದರೆ ಉಸಿರಿದ್ದಂತೆ. ಗ್ರಾಮೀಣ ಭಾಗದ ಹಲವಾರ ಮನೆಗಳಲ್ಲಿ ಈಗಲೂ ಇಂದಿರಾಗಾಂಧಿಯವರು ಭಾವಚಿತ್ರ ಇಟ್ಟುಕೊಂಡು ಪೂಜೆ ಮಾಡುತ್ತಿದ್ದಾರೆ. ನಾನು ಸಹ ನನ್ನ ಹುಟ್ಟೂರು ದೊಡ್ಡ ಆಲಹಳ್ಳಿಯಲ್ಲಿ ಇಂದಿರಾಗಾಂಧಿ ಚಿತ್ರಮಂದಿರ ಪ್ರಾರಂಭ ಮಾಡಿದ್ದೆ. ಇವರ ನಿಧನದ ನಂತರ ರಾಜೀವ್ ಗಾಂಧಿಯವರು ಅಂದು ನನ್ನನ್ನು ಸೇರಿದಂತೆ ವಿನಯ್ ಕುಮಾರ್ ಸೊರಕೆಯಾಗಿದಾಗಿ ಸುಮಾರು 50 ಕ್ಕೂ ಹೆಚ್ಚು ಯುವಕರಿಗೆ ಅವಕಾಶ ನೀಡಿ ಬೆಳೆಸಿದರು ಎಂದರು.
ಯುವ ಕಾಂಗ್ರೆಸ್ ಸಮಾವೇಶಕ್ಕೆ ನಾವು ರೈಲಿನಲ್ಲಿ ಹೊರಟಿದ್ದೆವು. ಬೆಂಗಳೂರು ಬಿಟ್ಟು ಹದಿನೈದು ಕಿಲೋಮೀಟರ್ ದೂರ ಹೋಗಿದ್ದೆವು. ಆ ಸಮಯದಲ್ಲಿ ಇಂದಿರಾಗಾಂಧಿ ಅವರ ಮೇಲೆ ಗುಂಡಿನ ದಾಳಿಯಾಗಿದೆ ಎನ್ನುವ ಸುದ್ದಿ ಬಂದಿತು. ಈ ಘಟನೆಯಿಂದ ಇಡೀ ದೇಶ, ಪ್ರಪಂಚವೇ ದಿಗ್ಬ್ರಮೆಗೆ ಒಳಗಾಯಿತು. ನಂಬಿದ ಆರಕ್ಷಕರೇ ಹತ್ಯೆ ಮಾಡಿದಾಗ ಯಾರನ್ನು ನಂಬುವುದು ಎನ್ನುವ ಪ್ರಶ್ನೆ ಎದುರಾಯಿತು ಎಂದರು.
ನೆಹರು ಅವರ ಕುಟುಂಬದ ಇಂದಿರಾಗಾಂಧಿ ಹಾಗೂ ರಾಜೀವ್ ಯವರ ಜೀವಗಳು ದೇಶಕ್ಕಾಗಿ ಹುತಾತ್ಮವಾಗಿವೆ. ದೇಶದಲ್ಲಿಯೇ ಕಾಂಗ್ರೆಸ್ ಪಕ್ಷ ಮುಳುಗಿ ಹೋಗುತ್ತಿದೆ ಎನ್ನುವ ಸಂದರ್ಭದಲ್ಲಿ ಪಕ್ಷದ ಚುಕ್ಕಾಣಿ ಹಿಡಿದ ಸೋನಿಯಾ ಗಾಂಧಿಯವರು ಪ್ರಧಾನಿ ಪಟ್ಟ ನಿರಾಕರಿಸಿ ಪಕ್ಷ ಕಟ್ಟಿದರು. ಇಂದಿರಾಗಾಂಧಿಯವರ ಹಾದಿಯಲ್ಲಿಯೇ ನಡೆದರು ಎಂದರು.
ಸೌಮ್ಯ ರೆಡ್ಡಿ ಅವರು ಈ ಭಾಗದಲ್ಲಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಆದರೆ ಮೋಸದಿಂದ ಅವರಿಗೆ ಸೋಲಾಗಿದೆ. ಮತ್ತೊಮ್ಮೆ ಗೆದ್ದು ವಿಧಾನಸಭೆಗೆ ಬರುತ್ತಾರೆ ಎನ್ನುವ ವಿಶ್ವಾಸವಿದೆ. ಮಾಲೂರಿನಲ್ಲಿ ಮರು ಎಣಿಕೆ ಮಾಡಬೇಕು ಎಂದು ತೀರ್ಪು ನೀಡಿದೆ. ಚಿಕ್ಕಮಗಳೂರಿನ ವಿಧಾನ ಪರಿಷತ್ ಕ್ಷೇತ್ರದ ಮರು ಎಣಿಕೆ ನಡೆದಿದೆ. ಆದರೆ ಅದನ್ನು ಘೋಷಣೆ ಮಾಡಲು ಬಿಡುತ್ತಿಲ್ಲ. ಬಿಜೆಪಿಯವರು ಸೋಲನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಪ್ರಜಾಪ್ರಭುತ್ವಕ್ಕೆ ನ್ಯಾಯಾಲಯಗಳು ಗೌರವ ನೀಡುತ್ತವೆ ಎನ್ನುವ ವಿಶ್ವಾಸವಿದೆ ಎಂದರು.
-
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications