ಕನ್ನಡ ಭಾಷೆ ಕಲಿಸುವ ನಿಯಮ ತಿದ್ದುಪಡಿಗೆ ಟಿಎಸ್ ನಾಗಾಭರಣ ಆಕ್ಷೇಪ
ಬೆಂಗಳೂರು, ಜೂ.09: ರಾಜ್ಯದ ಶಾಲೆಗಳಲ್ಲಿ ಕನ್ನಡ ಕಲಿಸುವ ವಿಚಾರವಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕರ್ನಾಟಕ ಶಿಕ್ಷಣ ಸಂಸ್ಥೆಗಳ (ನಿರಾಕ್ಷೇಪಣ ಪತ್ರ ವಿತರಣೆ ಮತ್ತು ನಿಯಂತ್ರಣ) ನಿಯಮ 2022ರ ಕರಡು ಅಧಿಸೂಚನೆಗೆ ತಂದಿರುವ ತಿದ್ದುಪಡಿ ವಿರುದ್ಧ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್.ನಾಗಾಭರಣ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ.
ಈ ಕುರಿತು ಡಾ.ಟಿ.ಎಸ್.ನಾಗಾಭರಣ ಗುರುವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ರಾಜ್ಯ ಸರ್ಕಾರ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಕನ್ನಡ ಭಾಷೆಗೆ ಧಕ್ಕೆ ಉಂಟಾಗುವ ನಿಟ್ಟಿನಲ್ಲಿ ಕರಡು ಅಧಿಸೂಚನೆಗೆ ತಿದ್ದುಪಡಿ ತಂದಿರುವುದು ಸರಿಯಾದ ಕ್ರಮವಲ್ಲ. ಕೂಡಲೇ ತಿದ್ದುಪಡಿ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಆಗಿದ್ದೇನು?:
ರಾಜ್ಯದ ಎಲ್ಲ ಕೇಂದ್ರೀಯ ಪಠ್ಯಕ್ರಮದ ಸಿಬಿಎಸ್ಇ, ಐಸಿಎಸ್ಇ ಮತ್ತು ಅಂತಾರಾಷ್ಟ್ರೀಯ ಮಂಡಳಿ (ಐಬಿ) ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಬೇಕೆಂಬ ನಿಯಮ ಇತ್ತು. ಈಗ ರಾಜ್ಯ ಸರ್ಕಾರ ಆ ಕರಡು ಅಧಿಸೂಚನೆಗೆ ತಿದ್ದುಪಡಿ ತಂದಿದೆ. ಅದರ ಪ್ರಕಾರ, ಇನ್ನು ಮುಂದೆ ಕನ್ನಡವನ್ನು ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಕಲಿಸಲು ತಿದ್ದುಪಡಿ ಮೂಲಕ ಅವಕಾಶ ನೀಡಲಾಗಿದೆ. ಇದು ಕನ್ನಡ ವಿರೋಧಿ ಕ್ರಮವಾಗಿದೆ. ಸರ್ಕಾರದ ತಂದ ತಿದ್ದುಪಡಿಯಂತೆ ನಿಯಮಾವಳಿ ರೂಪಿಸಿದ್ದೆ ಆದಲ್ಲಿ ಕನ್ನಡಕ್ಕೆ ಕನ್ನಡ ನೆಲದಲ್ಲಿಯೇ ತೀವ್ರ ಹಿನ್ನಡೆಯಾಗಲಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ರೂಪಿಸಿರುವ ಕರ್ನಾಟಕ ಶಿಕ್ಷಣ ಸಂಸ್ಥೆಗಳ (ನಿರಾಕ್ಷೇಪಣ ಪತ್ರ ವಿತರಣೆ ಮತ್ತು ನಿಯಂತ್ರಣ) ನಿಯಮ 2022 ಕರಡು ಅಧಿಸೂಚನೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಟಿ.ಎಸ್.ನಾಗಾಭರಣ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ.
ಕರ್ನಾಟಕ ಶಿಕ್ಷಣ ಸಂಸ್ಥೆಗಳ (ನಿರಾಕ್ಷೇಪಣ ಪತ್ರ ವಿತರಣೆ ಮತ್ತು ನಿಯಂತ್ರಣ) ನಿಯಮ 2022 ಕರಡು ಅಧಿಸೂಚನೆಯಲ್ಲಿ ಕನ್ನಡ ಭಾಷಾ ಕಲಿಕಾ ಕಾಯ್ದೆ 2015ರ ಅನುಸಾರ ಕನ್ನಡ ಭಾಷೆಯನ್ನು ಸಿಬಿಎಸ್ಇ, ಐಸಿಎಸ್ಇ ಮತ್ತು ಐಬಿ ಶಾಲೆಗಳಲ್ಲಿ ದ್ವಿತೀಯ ಅಥವಾ ತೃತೀಯವಾಗಿ ಕಲಿಸುವ ಅವಕಾಶ ನೀಡಲಾಗಿದೆ ಎಂದು ತಿಳಿಸಲಾಗಿದೆ.
ರಾಜ್ಯದ ಎಲ್ಲ ಕೇಂದ್ರೀಯ ಪಠ್ಯಕ್ರಮದ ಸಿಬಿಎಸ್ಇ, ಐಸಿಎಸ್ಇ ಮತ್ತು ಅಂತಾರಾಷ್ಟ್ರೀಯ ಮಂಡಳಿ (ಐಬಿ) ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಬೇಕೆಂದು ಈವರೆಗೆ ಇದ್ದ ನಿಯಮಕ್ಕೆ ತಿದ್ದುಪಡಿ ತಂದು ಇನ್ನು ಮುಂದೆ ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಕನ್ನಡ ಕಲಿಯಬೇಕೆಂದು ಅಧಿಸೂಚನೆಯಲ್ಲಿ ತಿಳಿಸಿರುವುದು ಸರಿಯಾದ ಕ್ರಮವಲ್ಲ. ಕರಡು ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಾವಳಿ ರೂಪಿಸಿದರೆ ಕನ್ನಡಕ್ಕೆ ತೀವ್ರ ಹಿನ್ನಡೆಯಾಗಲಿದೆ. ಜೊತೆಗೆ ಸಿಬಿಎಸ್ಇ, ಐಸಿಎಸ್ಇ ಮತ್ತು ಐಬಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಯುತ್ತಿರುವ ಮಕ್ಕಳ ಭವಿಷ್ಯಕ್ಕೂ ಸಮಸ್ಯೆಯಾಗಲಿದೆ. ಅಲ್ಲದೆ, ಈ ಶಾಲೆಗಳ ಮೇಲಿನ ಸರ್ಕಾರದ ನಿಯಂತ್ರಣ ಇನ್ನಷ್ಟು ಕೈತಪ್ಪಲು ದಾರಿಯಾಗಲಿದೆ ಎಂಬುದನ್ನು ತಾವು ಮನಗಾಣಬೇಕು ಎಂದು ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕನ್ನಡ ಕಲಿಕೆಗೆ ವಿನಾಯಿತಿ
ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕನ್ನಡ ಕಲಿಕೆಗೆ ವಿನಾಯಿತಿ ನೀಡುವುದರಿಂದ ಶಿಕ್ಷಣದಲ್ಲಿ ಕನ್ನಡ ಕಲಿಕೆಗೆ ಹಿನ್ನಡೆಯುಂಟಾಗುತ್ತದೆ. ಕರ್ನಾಟಕದಲ್ಲಿ ಕನ್ನಡವನ್ನು ಕಲಿಸಿದಿದ್ದಲ್ಲಿ ಬೇರೆ ರಾಜ್ಯ-ದೇಶಗಳಲ್ಲಿ ಕಲಿಸಲಾದೀತೆ? ಹೀಗಾಗಿ ಪ್ರಾಧಿಕಾರ ಈ ಅಧಿಸೂಚನೆಯ "ನಿಯಮ 6 (2)ಕ್ಕೆ" ಆಕ್ಷೇಪಣೆ ಸಲ್ಲಿಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಲಾಗಿದೆ.
ಈ ಅಧಿಸೂಚನೆಯಲ್ಲಿರುವ ನಿಯಮ 6 (2)ರ ಅಡಿಯಲ್ಲಿ ಕನ್ನಡ ಭಾಷಾ ಕಲಿಕಾ ಅಧಿನಿಯಮ, 2015(ಕರ್ನಾಟಕ ಅಧಿನಿಯಮ 22, 2015)ರ ನಿಬಂಧನೆಗಳ ಪ್ರಕಾರ ಕನ್ನಡ ಭಾಷೆಯನ್ನು 2ನೇ ಅಥವಾ 3ನೇ ಭಾಷೆಯಾಗಿ ಕಲಿಸಲಾಗುತ್ತದೆ ಎಂದಿದೆ. ಇದಕ್ಕೆ ಪರ್ಯಾಯವಾಗಿ ಕನ್ನಡ ಭಾಷಾ ಕಲಿಕೆಯ ಅಧಿನಿಯಮ, 2015 (ಕರ್ನಾಟಕ ಅಧಿನಿಯಮ 22, 2015)ರ ನಿಬಂಧನೆಗಳ ಪ್ರಕಾರ ರಾಜ್ಯದ ಎಲ್ಲ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಎಲ್ಲ ತರಗತಿಗಳಲ್ಲಿ ಕಡ್ಡಾಯ ಭಾಷೆಯಾಗಿ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸತಕ್ಕದು ಎಂದು ಬದಲಾವಣೆ ಮಾಡುವಂತೆ ಪ್ರಾಧಿಕಾರ ತಿಳಿಸಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಕ್ಷೇಪಣೆಯನ್ನು ಪರಿಗಣಿಸಿ ಇಲಾಖೆ ನಿಯಮಾವಳಿಯನ್ನು ಬದಲಾವಣೆ ಮಾಡದಿದ್ದಲ್ಲಿ ಪ್ರಾಧಿಕಾರ ಕನ್ನಡ-ಕನ್ನಡಿಗರ ಹಿತರಕ್ಷಣೆಯ ಸಲುವಾಗಿ ಹೋರಾಟದ ದಾರಿ ತುಳಿಯುವುದು ಅನಿವಾರ್ಯವಾಗುತ್ತದೆ. ರಾಜ್ಯದ ಅಧಿಕೃತ ಭಾಷೆಯ ಸಾರ್ವಭೌಮತೆಯನ್ನು ಎತ್ತಿಹಿಡಿಯುವ ಸಲುವಾಗಿ ಸಿಬಿಎಸ್ಇ, ಐಸಿಎಸ್ಇ ಮತ್ತು ಐಬಿ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಕಲಿಯಬೇಕೆಂಬ ಹೊಸ ಕರಡು ನಿಯಮಾವಳಿಯನ್ನು ಹಿಂಪಡೆದು, ಮೊದಲಿನ ಕನ್ನಡ ಕಲಿಕಾ ಅಧಿನಿಯಮ-2015 (ಸರ್ಕಾರ ಅಧಿಸೂಚನೆ ಸಂಖ್ಯೆ: ಇಡಿ 274 ಪಿಜಿಸಿ 2017, ದಿನಾಂಕ:21-10-2017)ರಂತೆ, 1 ರಿಂದ 10ನೇ ತರಗತಿಯವರೆಗೆ ಹಂತ ಹಂತವಾಗಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಮಾತ್ರ ಕಡ್ಡಾಯವಾಗಿ ಕಲಿಯುವ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಪ್ರಾಧಿಕಾರದಿಂದ ಬರೆದಿರುವ ಪತ್ರದಲ್ಲಿ ತಿಳಿಸಲಾಗಿದೆ.
ಅಲ್ಲದೇ ಸಿಬಿಎಸ್ಇ, ಐಸಿಎಸ್ಇ ಮತ್ತು ಐಬಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಯುತ್ತಿರುವ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೂ ಸಮಸ್ಯೆಯಾಗಲಿದೆ. ಮುಖ್ಯವಾಗಿ ಶಾಲೆಗಳ ಮೇಲಿನ ಸರ್ಕಾರದ ನಿಯಂತ್ರಣ ಇನ್ನಷ್ಟು ಕೈತಪ್ಪಲು ದಾರಿಯಾಗಲಿದೆ. ಇವೆಲ್ಲ ಅಂಶಗಳನ್ನು ಸರ್ಕಾರ ಮನಗಾಣಬೇಕು ಎಂದು ಹೇಳಿದ್ದಾರೆ.
ಹೊರ ರಾಜ್ಯ, ವಿದೇಶಗಳಲ್ಲಿ ಕನ್ನಡ ಕಲಿಸಲಾದೀತೆ?
ಆಡಳಿತದಲ್ಲಿರುವ ಸರ್ಕಾರ ಈ ರೀತಿ ತಿದ್ದುಪಡಿ ತಂದು ಕನ್ನಡ ಭಾಷೆಗೆ ತೊಂದರೆ ಉಂಟು ಮಾಡಿದರೆ ಕನ್ನಡ ನೆಲದಲ್ಲಿ ಕನ್ನಡಕ್ಕೆ ಅಗೌರವ ತೋರಿದಂತಾಗುತ್ತದೆ. ಈ ನೆಲ್ಲದಲ್ಲೇ ಕನ್ನಡ ಭಾಷೆಗೆ ಅಗತ್ಯ ಸ್ಥಾನ ಸಿಗದಿದ್ದರೆ ಹೇಗೆ ಎಂಬ ಪ್ರಶ್ನೆ ಕಾಡುತ್ತಿದೆ. ಪ್ರಾದೇಶಿಕ ಭಾಷೆಯನ್ನು ಆಯಾ ನೆಲದಲ್ಲಿ ಕಲಿಸಲು ಆಗದಿದ್ದರೆ, ನೆರೆ ರಾಜ್ಯ ಇಲ್ಲವೇ ವಿದೇಶಗಳಲ್ಲಿ ಕನ್ನಡ ಕಲಿಸಲು ಸಾಧ್ಯವಾಗುತ್ತದೆಯೇ? ಎಂದು ಅವರು ಪತ್ರದಲ್ಲಿ ಖಾರವಾಗಿ ಪ್ರಶ್ನಿಸಿದ್ದಾರೆ.
ಹೋರಾಟದ ಎಚ್ಚರಿಕೆ:
ರಾಜ್ಯ ಸರ್ಕಾರ ಕೂಡಲೇ ಕರಡು ಅಧಿಸೂಚನೆಗೆ ತಂದ ತಿದ್ದುಪಡಿ ಹಿಂದಪಡೆಯಬೇಕು. ಈ ನೆಲದ ಎಲ್ಲ ಶಾಲೆಗಳಲ್ಲಿ ಕನ್ನಡವನ್ನು ಎಲ್ಲ ತರಗತಿಗಳಲ್ಲಿ ಕಡ್ಡಾಯವಾಗಿ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವಂತೆ ಬದಲಾವಣೆ ಮಾಡಬೇಕು. ಆ ಮೂಲಕ ಕನ್ನಡ ಅಸ್ಮಿತೆ ಕಾಪಾಡಬೇಕು. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಕನ್ನಡಿಗರ ಪರ ಮತ್ತು ನಾಡು -ನುಡಿ ಹಿತರಕ್ಷಣೆಗಾಗಿ ಹೋರಾಟ ಹಾದಿ ತುಳಿಯುವುದು ಅನಿವಾರ್ಯವಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
Recommended Video
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications