ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟೀಯೆಸ್ಸಾರ್ ಸ್ಮಾರಕ ಪ್ರಶಸ್ತಿ ಪ್ರಕಟ

|
Google Oneindia Kannada News

ಬೆಂಗಳೂರು, ಆ.8 : ಕರ್ನಾಟಕ ಸರ್ಕಾರ 2012 ಮತ್ತು 2013 ನೇ ಸಾಲಿನ ಟೀಯೆಸ್ಸಾರ್ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹನುಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಅಕ್ಟೋಬರ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

2012 ನೇ ಸಾಲಿನ ಟೀಯೆಸ್ಸಾರ್ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಎನ್. ಅರ್ಜುನ ದೇವ ಹಾಗೂ 2013 ನೇ ಸಾಲಿನ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಈಶ್ವರ ದೈತೋಟ ಅವರನ್ನು ಆಯ್ಕೆಮಾಡಲಾಗಿದೆ.

TSR

2012ನೇ ಸಾಲಿನ ಮೊಹರೆ ಹನುಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಾಗಿ ಬೆಳಗಾವಿಯ ನಾಡೋಜ ಪತ್ರಿಕೆಯ ಸಂಪಾದಕರಾದ ರಾಘವೇಂದ್ರ ಜೋಶಿ ಹಾಗೂ 2013 ನೇ ಸಾಲಿಗಾಗಿ ಮೈಸೂರಿನ ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಯ ಸಂಪಾದಕರಾದ ಕೆ.ಬಿ. ಗಣಪತಿ ಅವರನ್ನು ಆಯ್ಕೆ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯು ವಿಜೇತರನ್ನು ಆಯ್ಕೆಮಾಡಿದೆ. ಎಲ್ಲಾ ಪ್ರಶಸ್ತಿ ವಿಜೇತರಿಗೆ ಒಂದು ಲಕ್ಷ ರೂ. ನಗದು ಹಾಗೂ ಸ್ಮರಣಿಕೆಯನ್ನು ನೀಡಲಾಗುತ್ತದೆ. ಅಕ್ಟೋಬರ್ ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

English summary
The Karnataka government announced TSR Memorial and Mohare Hanumantharaya Journalism awards for the year for 2012 and 2013.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X