Get Updates
Get notified of breaking news, exclusive insights, and must-see stories!

Irrigation: ಏತ ನೀರಾವರಿ ಯೋಜನೆಗೆ 3,048 ಎಕರೆ ಸ್ವಾಧೀನ, ಹಣ ಬಿಡುಗಡೆ ಶೀಘ್ರ

ಬೆಂಗಳೂರು, ಜನವರಿ 20: ವಿಜಯಪುರ ಜಿಲ್ಲೆಯ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಮುಗಿದು, ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ 3,048 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ಈ ಸಂಬಂಧ ಕೂಡಲೇ ಅಗತ್ಯ ಕ್ರಮವಹಿಸಕು. ಅಷ್ಟು ಮಾತ್ರವಲ್ಲದೇ, ಯೋಜನೆಗೆ ಅಗತ್ಯವಾಗಿರುವ ಹಣವನ್ನು ಬಿಡುಗಡೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಭೂಸ್ವಾಧೀನ ಪ್ರಕ್ರಿಯೆ ನೆನಗುದಿಗೆ ಬಿದ್ದಿರುವ ಬಗ್ಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಂಬಂದಪಟ್ಟ ಎಲ್ಲ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಭೂಸ್ವಾಧೀನಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಮಾತನಾಡಿದ ಅವರು, ಈ ಏತ ನೀರಾವರಿ ಯೋಜನೆಗೆ 457 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು. ಭೂಸ್ವಾಧಿನ ಪ್ರಕ್ರಿಯೆಗೆ ಚುರುಕಗೊಳಿಸುವಂತೆ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

Tubachi-Babaleshwar Lift Irrigation Project Needs 3048 Acres Acquisition Released Grant MB Patil

ಈ ಏತ ನೀರಾವರಿ ಯೋಜನೆಯ ಪ್ರಯೋಜನವೇನು?

ಈ ಯೋಜನೆಯಿಂದ 52,700 ಎಕರೆಗೆ ನೀರಾವರಿ ಸೌಲಭ್ಯ ಸಿಗಲಿದೆ. ಇದರಲ್ಲಿ 37,200 ಎಕರೆ ಜಮೀನು ನಾನು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲೇ ಇದೆ. ಈಗಾಗಲೇ ವಿತರಣಾ ಕಾಲುವೆ, ಉಪಕಾಲುವೆ, ಹೊಲಗಾಲುವೆ ಕಾಮಗಾರಿಗಳೆಲ್ಲ ಮುಗಿದು ನೀರು ಹರಿಯುತ್ತಿದೆ. ಇದರ ಪ್ರಯೋಜನ ರೈತರಿಗೂ ಆಗುತ್ತಿದೆ ಎಂದು ಹೇಳಿದರು.

ಈ ಯೋಜನೆಗೆ ಅಗತ್ಯ ಜಮೀನು ಬಿಟ್ಟುಕೊಡುವಂತೆ ರೈತರಿಗೆ ಮನವಿ ಮಾಡಿಕೊಂಡಿದ್ದೆ. ರೈತರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಅಂಥವರಿಗೆ ಈಗ ಪರಿಹಾರ ಹಣ ನೀಡಲು ಸಬೂಬು ಹೇಳುತ್ತಿರುವುದು ಸರಿಯಲ್ಲ. ಆದಷ್ಟು ಬೇಗ ಪ್ರಕ್ರಿಯೆ ಮುಗಿಯಬೇಕು ಎಂದು ಅವರು ಸೂಚಿಸಿದ್ದಾರೆ.

ಭೂಸ್ವಾಧೀನಾಧಿಕಾರಿ ಹಾಗೂ ನೀರಾವರಿ ನಿಗಮದ ಅಧಿಕಾರಿಗಳ ನಡುವೆ ಸಮನ್ವಯದ ಕೊರತೆ ಇದೆ. ಇದನ್ನು ನಾನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಾಂತ್ರಿಕ ವಿಷಯಗಳ ನೆಪವೊಡ್ಡಿ ರೈತರಿಗೆ ಅನ್ಯಾಯ ಮಾಡಲು ಬಿಡುವುದಿಲ್ಲ ಎಂದು ರೇಗಿದರು.

Tubachi-Babaleshwar Lift Irrigation Project Needs 3048 Acres Acquisition Released Grant MB Patil

ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್, ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮೀನ್‌ಬಾವಿ, ನಿಗಮದ ಮುಖ್ಯ ಆಡಳಿತಾಧಿಕಾರಿ ಔದರಂ, ವಿಶೇಷ ಜಿಲ್ಲಾಧಿಕಾರಿ ಹರ್ಷ ಶೆಟ್ಟಿ, ಸೂಪರಿಂಟೆಂಡೆಂಟ್‌ ಎಂಜಿನಿಯರ್‌ ಬಿ.ಎ.ನಾಗರಾಜ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕನ ಮೇಲೆ ಹಲ್ಲೆ: ಪ್ರತಿಕ್ರಿಯೆ

ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ವಿಜಯಪುರದ ಎಪಿಎಂಸಿ ವ್ಯಾಪ್ತಿಯಲ್ಲಿ ಇರುವ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಮೇಲೆ ನಡೆದಿರುವ ಹಲ್ಲೆ ಅಮಾನವೀಯವಾಗಿದೆ. ತಪ್ಪಿತಸ್ಥರನ್ನು ಬಂಧಿಸಿದ್ದು, ಕಠಿಣ ಕಾನೂನು ಕ್ರಮವನ್ನೂ ಜರುಗಿಸಲಾಗುವುದು ಎಂದು ಪ್ರತಿಕ್ರಿಯಿಸಿದರು.

ಇಟ್ಟಿಗೆ ಭಟ್ಟಿಯಲ್ಲಿ ನಡೆದಿರುವ ಘಟನೆ ಬಗ್ಗೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠರ ಜತೆ ಮಾತನಾಡಿದ್ದೇನೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ‌ ಜರುಗಿಸಲು ಸೂಚಿಸಿದ್ದೇನೆ. ಅಲ್ಲಿನ ಜಿಲ್ಲಾಧಿಕಾರಿಗಳು ಕರ್ತವ್ಯದ ಮೇಲೆ ಬೆಂಗಳೂರಿನಲ್ಲೇ ಇದ್ದಾರೆ. ಅವರೊಂದಿಗೂ ಈ ಬಗ್ಗೆ ಮಾತನಾಡಿರುವೆ. ತಪ್ಪಿತಸ್ಥರನ್ನು ಹಾಗೆಯೇ ಬಿಡುವ ಪ್ರಶ್ನೆ ಇಲ್ಲ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+