ಬಸವರಾಜುಗೆ ಎಂಪಿ ಆಗೋ ಯೋಗ್ಯತೆಯಿಲ್ಲ, ಅವನೊಬ್ಬ ಅನ್ ಫಿಟ್: ರೇವಣ್ಣ ಉವಾಚ
ಹಾಸನ, ಜೂನ್ 4: 'ರೀ.. ಆ ಬಸವರಾಜುಗೆ ಏನ್ರೀ ಗೊತ್ತು..ಅವನು ಸಂಸದನಾಗಲು ಅನ್ ಫಿಟ್, ಪ್ರಾಕ್ಟಿಕಲ್ ನಾಲ್ಡೆಜ್ ಆತನಿಗೆ ಏನಾದರೂ ಇದೆಯಾ', ಇದು, ತಮ್ಮ ತಂದೆಯನ್ನು ಸೋಲಿಸಿದ, ತುಮಕೂರು ಸಂಸದರ ವಿರುದ್ದ ರೇವಣ್ಣ ಏಕವಚನದಲ್ಲಿ ಹರಿಹಾಯ್ದ ಪರಿ..
ಈ ಬಾರಿಯ ತುಮಕೂರು ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರವಹಿಸಿದ್ದು ಮೋದಿ ಮತ್ತು ಹೇಮಾವತಿ ನದಿನೀರಿನ ವಿಚಾರ. ಹೇಮಾವತಿ ವಿಚಾರದ ಮೇಲೆ, ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಿದ್ದ ರೇವಣ್ಣ, ಈಗ ಅವನು ಎಂಪಿ ಆಗಿದ್ದಾನಲ್ಲಾ.. ಹೇಮಾವತಿ ನೀರು ಬಿಟ್ಟುಕೊಳ್ಳಲಿ ಎಂದು ಜಿ ಎಸ್ ಬಸವರಾಜು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕಳೆದ ಚುನಾವಣೆಯಲ್ಲಿ ಮುದ್ದಹನುಮೇಗೌಡರ ವಿರುದ್ದ ಸೋತಾಗ, ಕೆಳಮಟ್ಟದ ರಾಜಕೀಯ ಮಾಡಬಾರದು ಎಂದು ಹೇಳಿದ್ದ ಬಸವರಾಜು ಈ ಬಾರಿ ಮಾಡಿದ್ದೇನು, ಇವರಿಗೆಲ್ಲಾ ನಾಚಿಕೆಯಾಗುವುದಿಲ್ಲವೇ ಎಂದು ಲೋಕೋಪಯೋಗಿ ಸಚಿವ ರೇವಣ್ಣ, ಬಸವರಾಜು ವಿರುದ್ದ ಕಿಡಿಕಾರಿದ್ದಾರೆ.

ಆರೋಪ ಮಾಡುವ ಮೊದಲು ಆಲೋಚಿಸಿ ಮಾತನಾಡಬೇಕು. ಹಿಂದೆ ಟ್ವೆಂಟಿ : 20 ಸರಕಾರವಿದ್ದಾಗ, ತುಮಕೂರಿಗೆ ನೀರಾವರಿ ಯೋಜನೆ ಕಲ್ಪಿಸಿದವರು ಯಾರು? ಹೇಮಾವತಿ ಬ್ಯಾರೇಜ್ ಕೀ ಕೊಡುತ್ತೇನೆ, ನೀರು ಬಿಟ್ಟುಕೊಳ್ಳಲಿ ಎಂದು ರೇವಣ್ಣ, ಬಸವರಾಜುಗೆ ಸವಾಲೆಸೆದಿದ್ದಾರೆ.
ಟ್ರಿಬ್ಯುನಲ್ ಕಮಿಟಿಯಲ್ಲಿ ನಲ್ಲಿ 24.5 ಟಿಎಂಸಿ ನೀರು ಕೊಡಬೇಕೆನ್ನುವ ಆದೇಶ ಬಂದಿದೆ. ಆದೇಶವನ್ನು ಪಾಲಿಸಿಲ್ಲಾಂದರೆ, ಕಮಿಟಿಯವರು ಒದ್ದು ನೀರನ್ನು ತುಮಕೂರಿಗೆ ಬಿಡಿಸುತ್ತಾರೆ ಎನ್ನುವ ಹೇಳಿಕೆಯನ್ನು ತುಮಕೂರು ಸಂಸದ ಜಿ ಎಸ್ ಬಸವರಾಜು ನೀಡಿದ್ದರು.
ದೇವೇಗೌಡರ ಕುಟುಂಬದ ವಿರುದ್ದ ಪರೋಕ್ಷವಾಗಿ ಕಿಡಿಕಾರಿದ್ದ ಬಸವರಾಜು, ಕಮಿಟಿಯ ಆದೇಶವನ್ನು ಪಾಲಿಸದೇ ಇದ್ದಲ್ಲಿ, ನಾವು ಮತ್ತೆ ದೂರನ್ನು ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯ ಅಚ್ಚರಿಯ ಫಲಿತಾಂಶದಲ್ಲಿ, ತುಮಕೂರಿನಿಂದ ಸ್ಪರ್ಧಿಸಿದ್ದ, ಜೆಡಿಎಸ್ ವರಿಷ್ಠ ದೇವೇಗೌಡ್ರು, ಬಿಜೆಪಿಯ ಜಿ ಎಸ್ ಬಸವರಾಜು ವಿರುದ್ದ 13,339 ಮತಗಳ ಅಂತರದಿಂದ ಸೋಲುಂಡಿದ್ದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications