ಹೆಲಿಕಾಪ್ಟರ್ ಘಟಕಕ್ಕೆ ಶಿಲಾನ್ಯಾಸ: ಕನ್ನಡದಲ್ಲಿ ಮೋದಿ ಮಾತು
ತುಮಕೂರು, ಜನವರಿ, 03: ಮೈಸೂರಿನಲ್ಲಿ ವಿಜ್ಞಾನ ಸಮಾವೇಶ ಉದ್ಘಾಟಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಆಗಮಿಸಿದರು. ಗುಬ್ಬಿ ತಾಲೂಕಿನ ಬಿದಿರೆಹಳ್ಳಿ ಕಾವಲ್ ನಲ್ಲಿ ನಿರ್ಮಾಣವಾಗಲಿರುವ ಹೆಚ್ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಭಾನುವಾರ ಮಧ್ಯಾಹ್ನ ಶಿಲಾನ್ಯಾಸ ನೆರವೇರಿಸಿದರು.
ನಂತರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಲ್ಲಿ ನಿರ್ಮಾಣವಾಗುತ್ತಿರುವ ಘಟಕ ವಿಶ್ವದ ಗಮನಸೆಳೆಯಲಿದೆ. ಇಂದು ಆಹಾರಧಾನ್ಯಗಳ ವಿಷಯದಲ್ಲಿ ಸ್ವಾವಲಂಬಿಗಳಾಗಿದ್ದೇವೆ. ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ನೆನಪಿಕೊಳ್ಳಬೇಕು. ಶಸ್ತ್ರಾಸ್ತ್ರಗಳ ವಿಷಯದಲ್ಲೂ ನಾವು ಸ್ವಾವಲಂಬಿಗಳಾಗಲಿದ್ದೇವೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು.[ನರೇಂದ್ರ ಮೋದಿ ಭಾಷಣ, ಸಿಎಂ ಸಿದ್ದುಗೆ ನಿದ್ದೆಯೇ ಭೂಷಣ!]

ಭಾರತದ ಸೇನೆಯ ಶಕ್ತಿಯನ್ನು ಹೆಚ್ಚಳ ಮಾಡಿಕೊಳ್ಳುವುದು ಇಂದಿ ಅನಿವಾರ್ಯ. ಘಟಕ ಕರ್ನಾಟಕದ ಜನರಿಗೆ ನೀಡುತ್ತಿರುವ ಕೊಡುಗೆ. ಸುಮಾರು ನಾಲ್ಕು ಸಾವಿರ ಜನರಿಗೆ ಇಲ್ಲಿ ಕೆಲಸ ದೊರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
2016 ರ ಶುಭಾರಂಭ ರಕ್ಷಣಾ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ, ಹೆಲಿಕಾಫ್ಟರ್ ತಯಾರಿಕಾ ಘಟಕ ಯೋಜನೆಗೆ 5000 ಕೋಟಿ ರೂಪಾಯಿ ಬಂಡವಾಳ ಹೂಡಲಾಗಿದ್ದು, 2018 ಕ್ಕೆ ಇಲ್ಲಿಂದ ತಯಾರಾದ ಹೆಲಿಕಾಫ್ಟರ್ ಗಳು ಹಾರಬೇಕು ಎಂದು ಮೋದಿ ಕರೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದ ಗೌಡ, ಗೃಹ ಸಚಿವ ಪರಮೇಶ್ವರ್, ಸಚಿವರಾದ ದೇಶಪಾಂಡೆ, ಜಯಚಂದ್ರ ಉಪಸ್ಥಿತರಿದ್ದರು.[ವಿಜ್ಞಾನ, ತಂತ್ರಜ್ಞಾನ ಬಡತನ ತೊಲಗಿಸಬೇಕು: ಮೋದಿ]
ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ:
ಮೋದಿ ಕನ್ನಡದಲ್ಲಿ ಭಾಷಣ ಆರಂಭ ಮಾಡಿದ್ದು ವಿಶೇಷ, 'ಬಂಧುಗಳೆ ನಮಸ್ಕಾರ' ಎಂದು ಹೇಳಿ ಭಾಷಣ ಆರಂಭಿಸಿದ ಮೋದಿ ನೂರಾರು ವಿಚಾರಗಳನ್ನು, ಸೈನ್ಯದ ಶಕ್ತಿ ವೃದ್ಧಿ ಅನಿವಾರ್ಯತೆಯನ್ನು, ಎಚ್ ಎ ಎಲ್ ನ ಮಹತ್ವವನ್ನು ವಿವರಿಸಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications