Get Updates
Get notified of breaking news, exclusive insights, and must-see stories!

Turkey earthquake: ಭೂಕಂಪ ಪೀಡಿತ ಟರ್ಕಿಯಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭ

ಭೂಕಂಪ ಪೀಡಿತ ಟರ್ಕಿಯಲ್ಲಿ ಸಿಲುಕಿರುವ ರಾಜ್ಯದ ಜನರಿಗಾಗಿ ಸಹಾಯವಾಣಿ ಆರಂಭಿಸಲಾಗಿದೆ. ಸೋಮವಾರ ಟರ್ಕಿ, ಸಿರಿಯಾದಲ್ಲಿ ಸಂಭವಿಸಿದ 7.8 ತೀವ್ರತೆಯ ಭೂಕಂಪದಲ್ಲಿ 5,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಬೆಂಗಳೂರು, ಫೆಬ್ರವರಿ. 07: ಭೂಕಂಪ ಪೀಡಿತ ಪ್ರದೇಶ ಟರ್ಕಿಯಲ್ಲಿ ಇರುವ ರಾಜ್ಯದ ಜನರಿಗಾಗಿ ಮಾಹಿತಿ ಮತ್ತು ಸಹಾಯಕ್ಕೆ ಅನುಕೂಲ ಮಾಡಲು ರಾಜ್ಯ ಸರ್ಕಾರ ಮಂಗಳವಾರ ಸಹಾಯವಾಣಿ ಆರಂಭಿಸಿದೆ.

ಟರ್ಕಿ ಮತ್ತು ಸಿರಿಯಾದ ಭೂಕಂಪನ ಪ್ರದೇಶಗಳಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸಂಜೆಯಷ್ಟೇ ಮಾಹಿತಿ ನೀಡಿದ್ದರು.

ರಾಜ್ಯ ತುರ್ತು ಕಾರ್ಯಾಚರಣೆಯ ಸಹಾಯವಾಣಿ ಸಂಖ್ಯೆಗಳು 080-1070, 080-22340676 ಆಗಿದ್ದು, ಕಂದಾಯ ಇಲಾಖೆ-ವಿಪತ್ತು ನಿರ್ವಹಣೆ ಇದನ್ನು ನಿರ್ವಹಿಸಲಿವೆ. ಟರ್ಕಿಯಲ್ಲಿ ಇರುವ ರಾಜ್ಯದ ಜನರಿಗೆ ಮಾಹಿತಿ ಮತ್ತು ಸಹಾಯವನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ನೀಡುವುದಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

Turkey Earthquake: Karnataka Launches Helplines for People stuck in Turkey

ಈ ಕುರಿತು ಮಾಹಿತಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದ ಕುರಿತು ರಾಜ್ಯಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆ ಸಂಪರ್ಕಲ್ಲಿದೆ. ಅಲ್ಲಿರುವ ಭಾರತೀಯರ ಹಾಗೂ ಕನ್ನಡಿಗರ ಕುರಿತು ಮಾಹಿತಿಗಾಗಿ ವಿಶೇಷ ಸಹಾಯ ವಾಣಿಯಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿದೆ. ಅಲ್ಲಿರುವ ಕನ್ನಡಿಗರಿಗೆ ನೆರವಾಗಲು, ಅವರ ಕುರಿತು ಮಾಹಿತಿಯನ್ನು ಸರ್ಕಾರದ ಜೊತೆ ಹಂಚಿಕೊಳ್ಳುವಂತೆ ಅವರ ಸಂಬಂಧಿಕರ ಬಳಿ ಮನವಿ ಮಾಡುತ್ತೇನೆ" ಎಂದಿದ್ದರು.

ಇನ್ನು, ಟರ್ಕಿಯ ಅಂಕಾರಾದಲ್ಲಿರುವ ಭಾರತದ ರಾಯಭಾರ ಕಚೇರಿಯ ಸಹಾಯವಾಣಿ ಸಂಖ್ಯೆಯನ್ನು ಸಹ ಹಂಚಿಕೊಂಡಿದೆ. ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿ ಸಮಂತ್ ರೋಹನ್ ರಾಜೇಂದ್ರ ಇಮೇಲ್: [email protected] ಮೊಬೈಲ್ ಸಂಖ್ಯೆ +90-530 314 2203 ಮತ್ತು ದೂರವಾಣಿ ಸಂಖ್ಯೆ +90-312 438 2195-98 ಆಗಿದೆ. ಇದರ ಜೊತೆಗೆ ಕಾನ್ಸುಲರ್ ಅಧಿಕಾರಿ ಬಾಬಿ ರಾವತ್ ಅವರ ಇಮೇಲ್ [email protected] ಮೊಬೈಲ್ ಸಂಖ್ಯೆ 90-535 490 4071 ಆಗಿದ್ದು, ಇವರನ್ನು ಸಂಪರ್ಕಿಸಬಹುದಾಗಿದೆ.

Turkey Earthquake: Karnataka Launches Helplines for People stuck in Turkey

ಸೋಮವಾರ 7.8 ರ ತೀವ್ರತೆಯ ಭೂಕಂಪವು 5,000 ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದೆ. ಟರ್ಕಿ ಮತ್ತು ನೆರೆಯ ಸಿರಿಯಾದಲ್ಲಿ ಸಾವಿರಾರು ಕಟ್ಟಡಗಳನ್ನು ನೆಲಸಮಗೊಂಡಿವೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಭಾರತ ಸೇರಿದಂತೆ ಅನೇಕ ದೇಶಗಳು ಸಹಾಯಹಸ್ತ ಚಾಚಿವೆ. ಭಾರತದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡ ಮಂಗಳವಾರ ಟರ್ಕಿಗೆ ತೆರಳಿ ಅಲ್ಲಿನ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+