TV9 C-Voter Pre poll Survey 2018: ಅಂದು ಸಮೀಕ್ಷೆ ಹೇಳಿದ್ದೇನು?, ನಂತರ ಆಗಿದ್ದೇನು? ಇಲ್ಲಿ ತಿಳಿಯಿರಿ
ಬೆಂಗಳೂರು, ಏಪ್ರಿಲ್ 25: ಈ ಬಾರಿಯ ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ಮಧ್ಯೆ ಟಿವಿ9 ಕನ್ನಡ ವಾಹಿನಿಯು ಸಿ-ವೋಟರ್ ಸಮೀಕ್ಷೆ ಪ್ರಕಟಿಸಿದೆ. ಇದೇ ಸುದ್ದಿ ಸಂಸ್ಥೆ ಕಳೆದ 2018ರ ಚುನಾವಣಾ ಪೂರ್ವದಲ್ಲಿ ಸಮೀಕ್ಷೆ ನಡೆಸಿ ವರದಿ ಪ್ರಕಟಿಸಿತ್ತು. ಆ ವರದಿ- ಅಂಕಿ ಅಂಶಗಳು ಹೇಳಿದ್ದೇನು. ತದನಂತರ ಚುನಾವಣೆ ಮತ ಎಣಿಕೆ ಬಳಿಕ ಬಂದ ಫಲಿತಾಂಶ ಏನು? ಎಂಬ ಸಂಪೂರ್ಣ ಚಿತ್ರಣ ಇಲ್ಲಿದೆ.
ಟಿವಿ9 ಸಿ-ವೋಟರ್ ಸಮೀಕ್ಷೆ ಕಳೆದ ಬಾರಿ 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬಹುಮತ ಸಿಗಲಿದೆ. ಅದರ ನಂತರ ಸ್ಥಾನ ಬಿಜೆಪಿಗೆ ಹೋಗಲಿದೆ ಎಂದು ಚುನಾವಣಾ ಪೂರ್ವ ಸರ್ವೇಯಲ್ಲಿ ತಿಳಿಸಿತ್ತು. ಆದರೆ ಕಾಂಗ್ರೆಸ್ಗೆ ಕಡಿಮೆ ಸ್ಥಾನ ಬಂದು, ಬಿಜೆಪಿ ಬಹುಮತ ಪಡೆದಿತ್ತು. ಆದರೆ ಸ್ಪಷ್ಟ ಬಹುಮತ ಅಂದು ಯಾವ ಪಕ್ಷಕ್ಕೂ ಸಿಕ್ಕಿರಲಿಲ್ಲ.

ಕರ್ನಾಟಕದ ಒಟ್ಟು 224 ವಿಧಾನಸಭಾ ಕ್ಷೇತ್ರಗಳಲ್ಲಿ 2018ರಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ 102 ಸ್ಥಾನ ಲಭಿಸಲಿವೆ ಎಂದು ಹೇಳಲಾಗಿತ್ತು. ಅಂದಿನ ವಿಪಕ್ಷವಾದ ಬಿಜೆಪಿಗೆ ಕೇವಲ 96 ಸೀಟುಗಳು ಬರಲಿವೆ ಎನ್ನಲಾಗಿತ್ತು. ಇನ್ನೂ ಸ್ಥಳೀಯ ಪಕ್ಷ ಜೆಡಿಎಸ್ಗೆ 25 ಸ್ಥಾನಗಳು ಒಲಿಯಲಿವೆ ಎಂದು ಸಮೀಕ್ಷೆಯಿಂದ ಬಹಿರಂಗವಾಗಿತ್ತು.
ಆದರೆ 2018ರಲ್ಲಿ ಚುನಾವಣೆ ಪ್ರಕ್ರಿಯೆಯ ನಂತರದ ಮತ ಎಣಿಕೆಯ ಬಳಿಕ ಸ್ಪಷ್ಟವಾಗಿ ಸಿಕ್ಕ ಅಂಕಿ ಅಂಶಗಳಿಗೂ ಮತ್ತು ಚುನಾವಣಾ ಪೂರ್ವ ಸಿ ವೋಟರ್ ಸಮೀಕ್ಷೆಗೂ ವ್ಯತ್ಯಾಸ ಕಂಡು ಬಂದಿತ್ತು. 2018ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತು. ಒಟ್ಟು 104 ಕ್ಷೇತ್ರಗಳನ್ನು ಬಾಚಿಕೊಂಡಿತು. ಕಾಂಗ್ರೆಸ್ ಕೇವಲ 80 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
ಜೆಡಿಎಸ್ ನೀರ್ಣಾಯಕವಾಗಿತ್ತು
ಇನ್ನು ಜೆಡಿಎಸ್ 37 ಸ್ಥಾನ ಪಡೆಯುವ ಮೂಲಕ ಸರ್ಕಾರ ರಚನೆಯಲ್ಲಿ ನೀರ್ಣಾಯಕ ಪಾತ್ರ ವಹಿಸಿತು. ಮೆಜಾರಿಟಿ ಸಾಬೀತಿಗೂ ಮುನ್ನ ಬಿಜೆಪಿಯ ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನ ಅಲಂಕರಿಸಿದ ಎರಡ್ಮೂರು ದಿನಕ್ಕೆ ಸಿಎಂ ಸ್ಥಾನದಿಂದ ಅವರು ಕೆಳಕ್ಕೆ ಇಳಿದರು.

ನಂತರ ಜೆಡಿಎಸ್ ಜತೆಯಾಗಿ ಬಹುಮತ ಸಾಬೀತು ಮಾಡಿದ ಕಾಂಗ್ರೆಸ್ ಪಕ್ಷವು ಜೆಡಿಎಸ್ನ ಎಚ್ಡಿ ಕುಮಾರಸ್ವಾಮಿ ಅವರನ್ನು ಸಿಎಂ ಮಾಡುವ ಮೂಲಕ ಸಮ್ಮಿಶ್ರ ಸರ್ಕಾರವನ್ನು ರಚಿಸಿತು. ಅದು ಸಹ ಅಧಿಕಾರಕ್ಕೆ ಬಂದು 17 ತಿಂಗಳು ಬಳಿಕ ಆಪರೇಷನ್ ಕಮಲದಿಂದಾಗಿ ಪತನವಾಯಿತು.
ಇದೀಗ 2023ನೇ ಸಾಲಿನ ವಿಧಾನಸಭಾ ಚುನಾವಣೆಯ ಟಿವಿ9 ಸಿ ವೋಟರ್ ಸರ್ವೇ ಮತ್ತೆ ಎಲ್ಲರಲ್ಲೂ ಕುತೂಹಲ ಕೆರಳಿಸಿದೆ. ರಾಜ್ಯದ ಉದ್ದಗಲಕ್ಕು ತೆರಳಿ ಜನರಿಂದ ಅಭಿಪ್ರಾಯ ಸಂಗ್ರಹಿಸಿ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ ಪ್ರಕಟಿಸಿದೆ ಎಂದು ತಿಳಿದು ಬಂದಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications