ರಾಜ್ಯದ ಹಲವೆಡೆ ಟಿವಿ 9, ನ್ಯೂಸ್ 9 ಪ್ರಸಾರ ಇಲ್ಲ
ಬೆಂಗಳೂರು, ನ.25: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಜನಪ್ರಿಯ ಸುದ್ದಿವಾಹಿನಿ ಟಿವಿ 9 ಹಾಗೂ ನ್ಯೂಸ್ 9 ವಾಹಿನಿಗಳ ಪ್ರಸಾರವನ್ನು ಕೇಬಲ್ ಆಪರೇಟರ್ ಗಳು ಬಂದ್ ಮಾಡಿದ್ದಾರೆ. ಸೋಮವಾರ ಸಂಜೆಯಿಂದಲೇ ಟಿವಿ 9 ಕನ್ನಡ ವಾಹಿನಿ ಪ್ರಸಾರ ಸ್ಥಗಿತವಾಗಿದೆ.
ಇದೀಗ ಬಂದ ಸುದ್ದಿ: ನಮ್ಮ ಸರ್ಕಾರ ಮಾಧ್ಯಮಗಳ ವಿರೋಧಿಯಲ್ಲ. ಟಿವಿ 9 ಕನ್ನಡ ಪ್ರಸಾರ ಸ್ಥಗಿತವಾಗಿರುವುದರಲ್ಲಿ ನನ್ನದಾಗಲಿ, ನನ್ನ ಸಂಪುಟದ ಸಚಿವರ ಕೈವಾಡವಿಲ್ಲ. ಈ ಬಗ್ಗೆ ಕೇಬಲ್ ಆಪರೇಟರ್ಸ್, ಮಾಧ್ಯಮ ಸಂಸ್ಥೆ ಮುಖ್ಯಸ್ಥರ ಜೊತೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂಧನ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಕೇಬಲ್ ಆಪರೇಟರ್ಗಳ ನಡುವೆ ಸಭೆ ನಡೆದ ನಂತರ ಈ ಬೆಳವಣಿಗೆ ನಡೆದಿದೆ. ಸಭೆಯಲ್ಲಿ ಎರಡೂ ಸುದ್ದಿವಾಹಿನಿಗಳ ಕೇಬಲ್ ಮೂಲಕ ಪ್ರಸಾರವನ್ನು ಸ್ಧಗಿತಗೊಳಿಸುವಂತೆ ಡಿಕೆ ಶಿವಕುಮಾರ್ ಅವರು ಆದೇಶಿಸಿದ್ದರು ಎನ್ನಲಾಗಿದೆ. [ನನ್ನ ತೇಜೋವಧೆಗೆ ವ್ಯವಸ್ಥಿತ ಪಿತೂರಿ: ಡಿಕೆಶಿ ]

ಸರ್ಕಾರದ ವಿರುದ್ಧ ಅನಗತ್ಯ ಸುದ್ದಿ ಪ್ರಸಾರ ಮಾಡುತ್ತಿದ್ದು, ಇದು ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಇದರಿಂದ ಕೇಬಲ್ ಉದ್ಯಮಕ್ಕೂ ಧಕ್ಕೆಯಾಗಲಿದೆ., ಹೀಗಾಗಿ ಕೇಬಲ್ ಆಪರೇಟರ್ ಗಳು ಒಂದಾಗಿ ಈ ಎರಡೂ ವಾಹಿನಿಗಳ ಪ್ರಸಾರವನ್ನು ಸ್ಥಗಿತಗೊಳಿಸಬೇಕು ಎಂದು ಸಂದೇಶ ಕಳಿಸಲಾಗಿತ್ತು.
ಕೇಬಲ್ ಆಪರೇಟರ್ ಗಳ ಅಳಲು: ಈಗಾಗಲೇ ನಾವು ಸರಿಯಾದ ಮಾರ್ಗದಲ್ಲಿ ಆಪ್ಟಿಕ್ ಫೈಬರ್ ಕೇಬಲ್ಗಳನ್ನು ಹಾಕಿಕೊಳ್ಳಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಅಲ್ಲದೆ ತೆರಿಗೆ ಹೆಚ್ಚಳ ಮಾಡದಂತೆ ಕೋರಿದ್ದೆವು. ಇದಕ್ಕೆ ಸರ್ಕಾರವೂ ಸೂಕ್ತವಾಗಿ ಸ್ಪಂದಿಸುತ್ತಿತ್ತು. ಡಿಜಿಟಲೈಜೇಶನ್, ಡಿಟಿಎಚ್ ಸೆಟ್ ಅಪ್ ಬಾಕ್ಸ್ ನಿಂದಾಗಿ ಕೇಬಲ್ ಆಪರೇಟರ್ ಗಳು ಸಂಕಷ್ಟ ಪಡುತ್ತಿದ್ದಾರೆ. ಈ ಸಂದರ್ಭದಲ್ಲಿ ಹೆಚ್ಚುವರಿ ತೆರಿಗೆ ಭರಿಸುವ ಸ್ಥಿತಿಯಲ್ಲಿಲ್ಲ ಎಂದು ಕೇಬಲ್ ಸಂಘಟಕರು ಹೇಳಿದ್ದಾರೆ.
ಪತ್ರಕರ್ತ ಪ್ರಕಾಶ್ ಬೆಳವಾಡಿ ಅವರು ನೀಡಿರುವ ಪ್ರತಿಕ್ರಿಯೆ ಹೀಗಿದೆ:
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications