ತಾಲಿಬಾನ್ ಅಲ್ಲ, ಕರ್ನಾಟಕ ಎನ್ನುವುದನ್ನ ಮರೆಯಬಾರದು: ಎಂಬಿಪಿ!
ಬೆಂಗಳೂರು: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮಾತನಾಡಿದ್ದ ಕಾರಣಕ್ಕೆ ಎಂ.ಬಿ. ಪಾಟೀಲ್ ವಿರುದ್ಧ ಬಿಜೆಪಿ ನಾಯಕರು ಹೊಸ ಅಸ್ತ್ರ ಹೂಡಿದ್ದಾರೆ. ಆದರೆ ಅದೇ ಅಸ್ತ್ರವನ್ನ ಈಗ ಎಂ.ಬಿ. ಪಾಟೀಲ್ ಪ್ರತ್ಯಸ್ತ್ರ ಮಾಡಿಕೊಂಡು ವಾಪಸ್ ಕಮಲ ಪಾಳಯದ ಮೇಲೆ ಪ್ರಯೋಗ ಮಾಡುತ್ತಿದ್ದಾರೆ. ಯತ್ನಾಳ್ ವಿಚಾರದಲ್ಲೂ ಇದೇ ರೀತಿ ಎಂಬಿಪಿ ಪ್ರತ್ಯಸ್ತ್ರ ಪ್ರಯೋಗಿಸಿದ್ದಾರೆ.
ಚಕ್ರವರ್ತಿ ಸೂಲಿಬೆಲೆ ಬಗ್ಗೆ ಎಂ.ಬಿ.ಪಾಟೀಲ್ ನೀಡಿದ್ದ ಹೇಳಿಕೆಗೆ ಎಚ್ಚರಿಕೆ ಕೊಡುವ ರೀತಿ BJP ತಿರುಗಿಬಿದ್ದಿದೆ. ಅದ್ರಲ್ಲೂ ಯತ್ನಾಳ್, ಎಂಬಿಪಿ ವಿರುದ್ಧ ತೀಕ್ಷ್ಣವಾಗಿ ಟ್ವೀಟ್ ಮಾಡಿದ್ರು. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ನಲ್ಲಿ ಪ್ರಜಾಪ್ರಭುತ್ವದ ಬಗ್ಗೆಯೂ ಉಲ್ಲೇಖ ಮಾಡಿದ್ರು. ಈಗ ಅದೇ ಟ್ವೀಟ್ಗೆ ತಕ್ಕ ತಿರುಗೇಟು ನೀಡಿರುವ ಎಂ.ಬಿ. ಪಾಟೀಲ್, ಕಳೆದ 4 ವರ್ಷ ಪ್ರಜಾಪ್ರಭುತ್ವ ಎಲ್ಲಿ ಹೋಗಿತ್ತು? ಎಂದು ಪ್ರಶ್ನೆ ಹಾಕಿ ಶಾಸಕ ಯತ್ನಾಳ್ಗೆ ಸವಾಲು ಎಸೆದಿದ್ದಾರೆ. ಇಬ್ಬರ ಟ್ವೀಟ್ ವಾರ್ ನಡುವೆ ತಾಲಿಬಾನ್ ಕೂಡ ಎಂಟ್ರಿಯಾಗಿದೆ!

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಇದು ನಡೆಯಲ್ಲ!
ಮೊದಲಿಗೆ ಎಂ.ಬಿ.ಪಾಟೀಲ್ ವಿರುದ್ಧ ಟ್ವೀಟ್ ಮಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್, 'ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಅಂತ ಹೇಳೋಕ್ಕೆ ಇದು ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು @MBPatil ಅವರು ಮರೆಯಬಾರದು. Fir ಮಾಡಿಸ್ತೀವಿ, ಜೈಲಿಗೆ ಕಳುಹಿಸ್ತೀವಿ ಪದೇ ಪದೇ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರ? ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಇದೆಲ್ಲ ಸಲ್ಲದು, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗು ಅವರ ಮಂತ್ರಿಗಳು intolerant ಆಗಬಾರದು!' ಎಂದಿದ್ದರು. ಈಗ ಅದೇ ಟ್ವೀಟ್ಗೆ ಎಂಬಿಪಿ ತಿರುಗೇಟು ನೀಡಿದ್ದಾರೆ.
()ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಅಂತ ಹೇಳೋಕ್ಕೆ ಇದು ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು @MBPatil ಅವರು ಮರೆಯಬಾರದು.
— Basanagouda R Patil (Yatnal) (@BasanagoudaBJP) June 6, 2023
Fir ಮಾಡಿಸ್ತೀವಿ, ಜೈಲಿಗೆ ಕಳುಹಿಸ್ತೀವಿ ಪದೇ ಪದೇ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರ?
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಇದೆಲ್ಲ ಸಲ್ಲದು, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗು ಅವರ…
ತಾಲಿಬಾನ್ ಆಡಳಿತ ಅಲ್ಲ ಕರ್ನಾಟಕ!
ತಮ್ಮ ಹೇಳಿಕೆಗೆ ವಿರುದ್ಧವಾಗಿ ತೀಕ್ಷ್ಣವಾಗಿ ಮಾತನಾಡಿದ್ದ ಯತ್ನಾಳ್ ಅವರಿಗೆ ಎಂಬಿಪಿ ಇದೀಗ ಹೊಸ ಸವಾಲು ಎಸೆದಿದ್ದಾರೆ. 'ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಮರೆಯಬಾರದು... ಜೈಲಿಗೆಕಳಿಸ್ತೀವಿ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರೇ... ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲಾ ಸಲ್ಲದು... ಎಂದಿರುವ @BasanagoudaBJP ಅವರೇ ಕಳೆದ 4 ವರ್ಷಗಳ ಕಾಲ ಯೋಗಿ ಮಾಡೆಲ್, ಬುಲ್ಡೋಜರ್ ಮಾಡೆಲ್, ಎನ್ಕೌಂಟರ್ ಮಾಡೆಲ್, ಎಂದೆಲ್ಲಾ ನೀವು ಅಣಿಮುತ್ತು ಉದುರಿಸುವಾಗ ಪ್ರಜಾಪ್ರಭುತ್ವ ಎಲ್ಲಿ ಹೋಗಿತ್ತು? ಸತತವಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ನಿಮ್ಮಿಂದ ಪಾಠ ಕಲಿಯಬೇಕಿಲ್ಲ.' ಎಂದಿದ್ದಾರೆ.
()ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಮರೆಯಬಾರದು...
— M B Patil (@MBPatil) June 6, 2023
ಜೈಲಿಗೆಕಳಿಸ್ತೀವಿ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರೇ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲಾ ಸಲ್ಲದು...
ಎಂದಿರುವ @BasanagoudaBJP ಅವರೇ ಕಳೆದ 4 ವರ್ಷಗಳ ಕಾಲ ಯೋಗಿ ಮಾಡೆಲ್, ಬುಲ್ಡೋಜರ್ ಮಾಡೆಲ್, ಎನ್ಕೌಂಟರ್ ಮಾಡೆಲ್, ಎಂದೆಲ್ಲಾ ನೀವು ಅಣಿಮುತ್ತು… https://t.co/pWSm3H9yuK

ಪ್ರಜಾಪ್ರಭುತ್ವದ ಹೇಳಿಕೆಗೆ ಎಂಬಿಪಿ ಉತ್ತರ!
ಹೀಗೆ ತಮ್ಮ ಹೇಳಿಕೆ ಬಗ್ಗೆ ಟ್ವೀಟ್ ಮಾಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಉತ್ತರ ಪ್ರದೇಶದ ಎನ್ಕೌಂಟರ್, ಯುಪಿ ಯೋಗಿ ಮಾಡೆಲ್, ಬುಲ್ಡೋಜರ್ ಮಾಡೆಲ್ ಎಲ್ಲವನ್ನೂ ಪ್ರಸ್ತಾಪ ಮಾಡಿ ಪ್ರಜಾಪ್ರಭುತ್ವದ ಪಾಠವನ್ನು ಮಾಡಿದ್ದಾರೆ. ಆದ್ರೆ ಬಿಜೆಪಿ ನಾಯಕರು ಈಗ ಇಷ್ಟಕ್ಕೆ ಸುಮ್ಮನಾಗುತ್ತಾರಾ? ಅಥವಾ ಇದೇ ವಿಚಾರ ಹಿಡಿದುಕೊಂಡು ಟ್ವೀಟ್ ಫೈಟ್ ಮುಂದುವರಿಯುತ್ತಾ ಗೊತ್ತಿಲ್ಲ. ಆದರೆ ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಈ ಚರ್ಚೆ ಬಗ್ಗೆ ಪರ ವಿರೋಧದ ಮಾತುಗಳು ಜೋರಾಗಿವೆ.

ಒಟ್ನಲ್ಲಿ ಗ್ಯಾರಂಟಿ ವಿಚಾರದಲ್ಲಿ ಹೊಸ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ ನಾಯಕರು ಈಗ ಶತಪ್ರಯತ್ನ ಪಡುತ್ತಿದ್ದಾರೆ. ಇದರ ಜೊತೆಗೆ ಎಂ.ಬಿ. ಪಾಟೀಲ್ ಹೇಳಿಕೆ ಕೂಡ ವರ ಆಗುತ್ತದೆ ಅನ್ನೋ ನಿರೀಕ್ಷೆ ಇತ್ತು. ಆದರೆ ಈಗ ಅದೆಲ್ಲಾ ಉಲ್ಟಾ ಹೊಡೆಯುತ್ತಿರುವ ಲಕ್ಷಣ ಗೋಚರ ಆಗುತ್ತಿದೆ. ಹೀಗಾಗಿಯೇ ಫುಲ್ ಅಲರ್ಟ್ ಆಗಿರುವ ಕಾಂಗ್ರೆಸ್ ನಾಯಕರು ಕೂಡ, ಈ ವಿಚಾರ ಬಂದಾಗ ಸೈಲೆಂಟ್ ಆಗುತ್ತಿದ್ದಾರೆ. ಅಥವಾ ಬಿಜೆಪಿ ನಾಯಕರು ನೀಡುವ ಹೇಳಿಕೆಗೆ ಮಾತ್ರ ರಿಯಾಕ್ಷನ್ ಕೊಡುತ್ತಿದ್ದಾರೆ. ಆ ಮೂಲಕ ಕೈ ಪಡೆ ಜಾಣ ನಡೆಯ ಮೊರೆ ಹೋಗಿದೆ. ಹೀಗಾಗಿ ಕಮಲ ಪಡೆ ಇನ್ಯಾಯ ತಂತ್ರ ಹುಡುಕೊತ್ತೋ ಕಾದು ನೋಡಬೇಕು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications