ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡೆ, ತಿವಾರಿ ಸಾವಿಗೆ ಪ್ರತಾಪ್ ಕಂಬನಿ
ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರು ಲಕ್ನೋದಲ್ಲಿ ನಿಗೂಢ ಸಾವಿಗೀಡಾಗಿರುವ ಸುದ್ದಿ ಕಂಡು ಟ್ವೀಟ್ ಲೋಕ ಕಂಬನಿ ಮಿಡಿದಿದೆ.
ಬೆಂಗಳೂರು, ಮೇ 17: ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರು ಲಕ್ನೋದಲ್ಲಿ ನಿಗೂಢ ಸಾವಿಗೀಡಾಗಿರುವ ಸುದ್ದಿ ಕಂಡು ಟ್ವೀಟ್ ಲೋಕ ಕಂಬನಿ ಮಿಡಿದಿದೆ. ಹಲವಾರು ರಾಜಕಾರಣಿಗಳು, ಐಎಎಸ್ ಬ್ಯಾಚ್ ಮೇಟ್ ಗಳು, ಸಾರ್ವಜನಿಕರು ಸೇರಿದಂತೆ ಅನೇಕ ಮಂದಿ ಟ್ವೀಟ್ ಮಾಡಿ ತಮ್ಮ ಸಂತಾಪ ಸೂಚಿಸಿದ್ದಾರೆ.
ಬಿಜೆಪಿ ಮುಖಂಡ ಸುರೇಶ್ ಕುಮಾರ್, ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕರ ಸಂತಾಪ ಸಂದೇಶಗಳು ಇಲ್ಲಿವೆ. [ಆಹಾರ ಇಲಾಖೆ ಆಯುಕ್ತ ಅನುರಾಗ್ ತಿವಾರಿ ಶವವಾಗಿ ಪತ್ತೆ!]
'ಬೆಳಗ್ಗೆ ಎದ್ದ ಕೂಡಲೇ ಎಂಥಾ ಕೆಟ್ಟ ವಾರ್ತೆ ಕೇಳಿದೆ, ನನ್ನ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡೆ' ಎಂದು ಸಂಸದ ಪ್ರತಾಪ್ ಸಿಂಹ ಅವರು ತಮ್ಮ ಫೇಸ್ ಬುಕ್ ವಾಲ್ ಮೇಲೆ ಬರೆದುಕೊಂಡಿದ್ದಾರೆ.
ಕರ್ನಾಟಕ ಕೇಡರ್ ನ 2007ನೇ ಐಎಎಸ್ ಬ್ಯಾಚ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿ ಅವರು ಸದ್ಯ ಆಹಾರ ಮತ್ತು ನಾಗರಿಕ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. 4 ವಾರಗಳ ರಜೆ ಮೇಲೆ ಸ್ವಂತ ಊರಿಗೆ ತೆರಳಿದ್ದರು. ಲಕ್ನೋದಿಂದ 130 ಕಿ.ಮೀದ ತಮ್ಮ ಗ್ರಾಮಕ್ಕೆ ತೆರಳಿದ್ದ ತಿವಾರಿ ಅವರು ಹುಟ್ಟುಹಬ್ಬ ಆಚರಣೆಗಾಗಿ ಲಕ್ನೋದ ಹಜರತ್ ಗಂಜ್ ನ ಮೀರಾಭಾಯಿ ಗೆಸ್ಟ್ ಹೌಸ್ ನಲ್ಲಿ ತಂಗಿದ್ದರು.

36 ವರ್ಷ ವಯಸ್ಸಿನ ತಿವಾರಿ
2007 ಬ್ಯಾಚಿನ ಅಧಿಕಾರಿ ತಿವಾರಿ ಅವರು ಜೂನ್ 2015ರಲ್ಲಿ ಬೀದರ್ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಲಕ್ನೋ ವಿವಿಯ ಎಲೆಕ್ಟ್ರಿಕಲ್ ಇಂಜಿನಿಯರ್ ಆಗಿದ್ದ ತಿವಾರಿ ಅವರು, ಮಧುಗಿರಿ ಸಹಾಯಕ ಆಯುಕ್ತ, ಕೊಡಗು ಜಿಲ್ಲಾಧಿಕಾರಿ,ಆಹಾರ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
|
ಅಧಿಕಾರಿ ಸಾವಿನ ಅಘಾತ
ಐಎಎಸ್ ಅಧಿಕಾರಿ ಸಾವು ಆಘಾತ ತಂದಿದೆ. ಉತ್ತರಪ್ರದೇಶದಲ್ಲಿ ಯಾವ ಸರ್ಕಾರವಿದೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
|
ತಿವಾರಿ ಸಾವಿನ ಆಘಾತ
ಲಕ್ನೋ ವಿವಿಯ ಎಲೆಕ್ಟ್ರಿಕಲ್ ಇಂಜಿನಿಯರ್ ಆಗಿದ್ದ ತಿವಾರಿ ನನ್ನ ಬ್ಯಾಚ್ ಮೇಟ್, ಈ ರೀತಿ ಆತನ ಬದುಕು ಅಂತ್ಯಗೊಂಡಿರುವುದು ದುರಂತ ಎಂದು ಬ್ಯಾಚ್ ಮೇಟ್ ಟ್ವೀಟ್ ಮಾಡಿದ್ದಾರೆ.
|
ತಿವಾರಿ ಸಾವಿಗೆ ಸಂತಾಪ
ಅನುರಾಗ್ ತಿವಾರಿ ಸಾವು ಆಘಾತ ತಂದಿದೆ ಎಂದು ಸಂತಾಪ ಸೂಚಿಸಿದ ಮಾಜಿ ಸಚಿವ, ಬಿಜೆಪಿ ಮುಖಂಡ ಸುರೇಶ್ ಕುಮಾರ್.
|
ಹಲವು ಅನುಮಾನ
ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿ ಹೇಳುತ್ತಿದೆ. ಇನ್ನೂ ಅಟ್ಸಾಪಿ ವರದಿ ಬಂದಿಲ್ಲ. ಸಾವಿನ ಸುತ್ತಾ ಹಲವು ಅನುಮಾನಗಳು ಕಾಡುತ್ತಿವೆ.
{promotion-urls}
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications