ವಾರದಲ್ಲಿ ಎರಡು ಬಂದ್‌: BMTC, KSRTC ಹಾಗೂ ಮೆಟ್ರೋ, ಹೋಟೆಲ್‌, ಅಂಗಡಿಗಳಿಗೆ ಕೋಟಿ.. ಕೋಟಿ ನಷ್ಟ, ಇಲ್ಲಿದೆ ವಿವರ

ಕರ್ನಾಟಕ, ಅಕ್ಟೋಬರ್‌, 1: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಸೆಪ್ಟೆಂಬರ್‌ 26 ಬೆಂಗಳೂರು ಬಂದ್‌ ಹಾಗೂ ಸೆಪ್ಟೆಂಬರ್‌ 29 ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಹೀಗೆ ಒಂದೇ ವಾರದಲ್ಲಿ ಎರಡು ಬಾರಿ ಬಂದ್‌ಗೆ ಕರೆ ನೀಡಲಾಗಿದ್ದು, ಇದರಿಂದ ರಾಜ್ಯಕ್ಕೆ ಕೋಟಿ ಕೋಟಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಯಾವುದೇ ಸರ್ಕಾರ ಬಂದರೂ ಕೂಡ ಇಲ್ಲಿಯವರೆಗೂ ಕಾವೇರಿ ನೀರಿನ ವಿವಾದವನ್ನು ಬಗೆಹರಿಸುತ್ತಿಲ್ಲ. ಬದಲಾಗಿ ರೈತರು, ಜನಸಾಮಾನ್ಯರು ರಸ್ತೆಗೆ ಇಳಿದು ಹೋರಾಟ ಮಾಡುವಂತೆ ಆಗಿದೆ. ಇದರಿಂದ ನಮ್ಮ ರಾಜ್ಯಕ್ಕೆ ತುಂಬಾ ನಷ್ಟ ಆಗುತ್ತಿದೆ. ಆ ನಷ್ಟವಾಗುವ ಹಣ ಕೂಡ ನಮ್ಮ ಹಣವೇ ಆಗಿರುತ್ತದೆ. ಆದರೆ ಇದನ್ನೆಲ್ಲ ಗಮನಿಸದೇ ರಾಜ್ಯದ ಎಲ್ಲಾ ಪಕ್ಷಗಳ ರಾಜಕಾರಣಿಗಳು ಬರೀ ಅವರವರ ರಾಜಕೀಯ ಬೇಳೆ ಬೀಯಿಸಿಕೊಳ್ಳುತ್ತಿದ್ದಾರೆ ಎಂದು ಜನರು ಕಿಡಿಕಾರುತ್ತಿದ್ದಾರೆ.

Two days Bandh in a week: loss to BMTC, KSRTC and Metro in Karnataka

ಪ್ರತಿ ಬಾರಿಯೂ ನಾವು ಹೋರಾಟ ಮಾಡುತ್ತಲೇ ಇರಬೇಕಾಗುತ್ತದೆ. ನಮ್ಮ ನೀರಿಗಾಗಿ ನಾವು ಹೋರಾಟ ಮಾಡುವ ಮಟ್ಟಕ್ಕೆ ಪರಿಸ್ಥಿತಿಯನ್ನು ನಮ್ಮ ರಾಜ್ಯದ ರಾಜಕಾರಣಿಗಳು ತಂದಿಟ್ಟಿದ್ದಾರೆ. ನೀವು ರಾಜಕೀಯ ಬೇಳೆ ಬೇಯಿಸಿಕೊಳ್ಳುವಿದನ್ನು ಮೊದಲು ನಿಲ್ಲಿಸಿ. ಎಲ್ಲರೂ ಒಗ್ಗಟ್ಟಾಗಿ ಇದನ್ನು ಎದುರಿಸಬೇಕಾಗಿದೆ ಎಂದು ಬುದ್ಧಿವಾದವನ್ನು ಜನರು ಹೇಳುತ್ತಿದ್ದಾರೆ.

ಒಂದೇ ವಾರದಲ್ಲಿ ರಾಜ್ಯದಲ್ಲಿ ಎರಡು ಬಂದ್ ಹಿನ್ನೆಲೆ ಸಾರಿಗೆ ನಿಗಮಗಳು, ಹೋಟೆಲ್, ಬಾರ್ ರೆಸ್ಟೋರೆಂಟ್ ಮತ್ತು ವೈನ್ ಸ್ಟೋರ್ಸ್ ನಷ್ಟಕ್ಕೆ ತುತ್ತಾಗಿವೆ. ಸೆಪ್ಟೆಂಬರ್‌ 26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿತ್ತು. ಹಾಗೂ ಶುಕ್ರವಾರ (ಸೆಪ್ಟೆಂಬರ್‌ 29) ಕರ್ನಾಟಕ ಬಂದ್ ನಡೆಸಿದ ಹಿನ್ನೆಲೆ BMTC, KSRTC ಹಾಗೂ ಮೆಟ್ರೋ ನಿಗಮಕ್ಕೆ ಕೋಟ್ಯಾಂತರ ರೂಪಾಯಿ ನಷ್ಟ ಆಗಿದೆ. ಈ ಮೂರು ನಿಗಮಗಳಿಗೆ ಅಂದಾಜು 15 ಕೋಟಿ ರೂಪಾಯಿನಷ್ಟು ನಷ್ಟ ಉಂಟಾಗಿದೆ ಎನ್ನುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು ನಗರದಲ್ಲಿ ಒಟ್ಟು 3850 ಮದ್ಯ ಮಾರಾಟ ಅಂಗಡಿಗಳಿದ್ದು, ಮಂಗಳವಾರ ಮತ್ತು ಶುಕ್ರವಾರದ ಬಂದ್‌ನಿಂದ ಅಂದಾಜು 180ರಿಂದ 200 ಕೋಟಿ ರೂಪಾಯಿ ನಷ್ಟ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+