ವಾರದಲ್ಲಿ ಎರಡು ಬಂದ್: BMTC, KSRTC ಹಾಗೂ ಮೆಟ್ರೋ, ಹೋಟೆಲ್, ಅಂಗಡಿಗಳಿಗೆ ಕೋಟಿ.. ಕೋಟಿ ನಷ್ಟ, ಇಲ್ಲಿದೆ ವಿವರ
ಕರ್ನಾಟಕ, ಅಕ್ಟೋಬರ್, 1: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಸೆಪ್ಟೆಂಬರ್ 26 ಬೆಂಗಳೂರು ಬಂದ್ ಹಾಗೂ ಸೆಪ್ಟೆಂಬರ್ 29 ಕರ್ನಾಟಕ ಬಂದ್ಗೆ ಕರೆ ನೀಡಲಾಗಿತ್ತು. ಹೀಗೆ ಒಂದೇ ವಾರದಲ್ಲಿ ಎರಡು ಬಾರಿ ಬಂದ್ಗೆ ಕರೆ ನೀಡಲಾಗಿದ್ದು, ಇದರಿಂದ ರಾಜ್ಯಕ್ಕೆ ಕೋಟಿ ಕೋಟಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಯಾವುದೇ ಸರ್ಕಾರ ಬಂದರೂ ಕೂಡ ಇಲ್ಲಿಯವರೆಗೂ ಕಾವೇರಿ ನೀರಿನ ವಿವಾದವನ್ನು ಬಗೆಹರಿಸುತ್ತಿಲ್ಲ. ಬದಲಾಗಿ ರೈತರು, ಜನಸಾಮಾನ್ಯರು ರಸ್ತೆಗೆ ಇಳಿದು ಹೋರಾಟ ಮಾಡುವಂತೆ ಆಗಿದೆ. ಇದರಿಂದ ನಮ್ಮ ರಾಜ್ಯಕ್ಕೆ ತುಂಬಾ ನಷ್ಟ ಆಗುತ್ತಿದೆ. ಆ ನಷ್ಟವಾಗುವ ಹಣ ಕೂಡ ನಮ್ಮ ಹಣವೇ ಆಗಿರುತ್ತದೆ. ಆದರೆ ಇದನ್ನೆಲ್ಲ ಗಮನಿಸದೇ ರಾಜ್ಯದ ಎಲ್ಲಾ ಪಕ್ಷಗಳ ರಾಜಕಾರಣಿಗಳು ಬರೀ ಅವರವರ ರಾಜಕೀಯ ಬೇಳೆ ಬೀಯಿಸಿಕೊಳ್ಳುತ್ತಿದ್ದಾರೆ ಎಂದು ಜನರು ಕಿಡಿಕಾರುತ್ತಿದ್ದಾರೆ.

ಪ್ರತಿ ಬಾರಿಯೂ ನಾವು ಹೋರಾಟ ಮಾಡುತ್ತಲೇ ಇರಬೇಕಾಗುತ್ತದೆ. ನಮ್ಮ ನೀರಿಗಾಗಿ ನಾವು ಹೋರಾಟ ಮಾಡುವ ಮಟ್ಟಕ್ಕೆ ಪರಿಸ್ಥಿತಿಯನ್ನು ನಮ್ಮ ರಾಜ್ಯದ ರಾಜಕಾರಣಿಗಳು ತಂದಿಟ್ಟಿದ್ದಾರೆ. ನೀವು ರಾಜಕೀಯ ಬೇಳೆ ಬೇಯಿಸಿಕೊಳ್ಳುವಿದನ್ನು ಮೊದಲು ನಿಲ್ಲಿಸಿ. ಎಲ್ಲರೂ ಒಗ್ಗಟ್ಟಾಗಿ ಇದನ್ನು ಎದುರಿಸಬೇಕಾಗಿದೆ ಎಂದು ಬುದ್ಧಿವಾದವನ್ನು ಜನರು ಹೇಳುತ್ತಿದ್ದಾರೆ.
ಒಂದೇ ವಾರದಲ್ಲಿ ರಾಜ್ಯದಲ್ಲಿ ಎರಡು ಬಂದ್ ಹಿನ್ನೆಲೆ ಸಾರಿಗೆ ನಿಗಮಗಳು, ಹೋಟೆಲ್, ಬಾರ್ ರೆಸ್ಟೋರೆಂಟ್ ಮತ್ತು ವೈನ್ ಸ್ಟೋರ್ಸ್ ನಷ್ಟಕ್ಕೆ ತುತ್ತಾಗಿವೆ. ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ಗೆ ಕರೆ ನೀಡಲಾಗಿತ್ತು. ಹಾಗೂ ಶುಕ್ರವಾರ (ಸೆಪ್ಟೆಂಬರ್ 29) ಕರ್ನಾಟಕ ಬಂದ್ ನಡೆಸಿದ ಹಿನ್ನೆಲೆ BMTC, KSRTC ಹಾಗೂ ಮೆಟ್ರೋ ನಿಗಮಕ್ಕೆ ಕೋಟ್ಯಾಂತರ ರೂಪಾಯಿ ನಷ್ಟ ಆಗಿದೆ. ಈ ಮೂರು ನಿಗಮಗಳಿಗೆ ಅಂದಾಜು 15 ಕೋಟಿ ರೂಪಾಯಿನಷ್ಟು ನಷ್ಟ ಉಂಟಾಗಿದೆ ಎನ್ನುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರು ನಗರದಲ್ಲಿ ಒಟ್ಟು 3850 ಮದ್ಯ ಮಾರಾಟ ಅಂಗಡಿಗಳಿದ್ದು, ಮಂಗಳವಾರ ಮತ್ತು ಶುಕ್ರವಾರದ ಬಂದ್ನಿಂದ ಅಂದಾಜು 180ರಿಂದ 200 ಕೋಟಿ ರೂಪಾಯಿ ನಷ್ಟ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications