ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಡದಿ: ತೆಪ್ಪ ಮುಗುಚಿ ಇಬ್ಬರು ಯುವಕರ ದುರ್ಮರಣ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಅಕ್ಟೋಬರ್ 16: ಮೀನು ಹಿಡಿಯಲು ಹೋದ ಯುವಕರಿಬ್ಬರು ತೆಪ್ಪ ಮುಗುಚಿ ಸಾವನ್ನಪ್ಪಿರುವ ಘಟನೆ ರಾಮನಗರದ ಬಿಡದಿ ಸಮೀಪದ ನೆಲ್ಲಿಗುಡ್ಡೆ ಕೆರೆಯಲ್ಲಿ ನಡೆದಿದೆ.

ರಾಮನಗರ: ಅಂಗಡಿಯಲ್ಲಿ ಬೆಂಕಿ, ಲಕ್ಷಾಂತರ ಮೌಲ್ಯದ ವಸ್ತಗಳು ಭಸ್ಮರಾಮನಗರ: ಅಂಗಡಿಯಲ್ಲಿ ಬೆಂಕಿ, ಲಕ್ಷಾಂತರ ಮೌಲ್ಯದ ವಸ್ತಗಳು ಭಸ್ಮ

ಬಿಡದಿ ಸಮೀಪದ ಅವರೆಗೆರೆ ಗ್ರಾಮದ ರವಿ (20) ಹಾಗೂ ಉಮೇಶ್ (31) ಮೃತ ದುರ್ದೈವಿಗಳು. ಭಾನುವಾರ ಸಾಯಂಕಾಲ ಭಾರೀ ವೇಳೆ ಮಳೆಯಾಗಿದ್ದರಿಂದ ಕೆರೆಯಲ್ಲಿ ಏಕಾಏಕಿ ನೀರಿನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ತೆಪ್ಪ ಮುಗುಚಿ ಇಬ್ಬರು ಬಲೆಯ ಒಳಗೆ ಸಿಲುಕಿ ಕೆರೆಯಲ್ಲಿ ಸಾವನ್ನಪ್ಪಿದ್ದಾರೆ.

Two dead after boat capsizes on Nelligudde Kere near Bidadi

ಭಾನುವಾರ ಸಾಯಂಕಾಲ ನೆಲ್ಲಿಗುಡ್ಡೆ ಕೆರೆಯಲ್ಲಿ ಮೀನು ಹಿಡಿಯಲು ತೆಪ್ಪದಲ್ಲಿ ತೆರಳಿದ್ದರು. ರಾತ್ರಿಯಾದರೂ ಸಹ ಇಬ್ಬರೂ ಮನೆಗೆ ಬಂದಿರಲಿಲ್ಲ. ಅಲ್ಲದೇ ಗ್ರಾಮದಲ್ಲೂ ಅವರಿಬ್ಬರ ಸುಳಿವು ಇರಲಿಲ್ಲ. ಇದರಿಂದ ಆತಂಕಗೊಂಡ ಮೃತರ ಪೋಷಕರು ಸ್ಥಳೀಯರನ್ನು ವಿಚಾರಿಸಿದಾಗ ಮೀನು ಹಿಡಿಯಲು ಹೋಗಿದ್ದಾರೆಂದು ತಿಳಿಸಿದ್ದಾರೆ.

ನೀರಲ್ಲಿ ಮುಳುಗುತ್ತಿದ್ದರೂ ಸೆಲ್ಫಿಯಲ್ಲೇ ಬ್ಯುಸಿಯಾದ ಸ್ನೇಹಿತರು!ನೀರಲ್ಲಿ ಮುಳುಗುತ್ತಿದ್ದರೂ ಸೆಲ್ಫಿಯಲ್ಲೇ ಬ್ಯುಸಿಯಾದ ಸ್ನೇಹಿತರು!

ಕೂಡಲೇ ರವಿ ಹಾಗೂ ಉಮೇಶ್ ಕುಟುಂಬದವರು ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಅಗ್ನಿ ಶಾಮಕ ಸಿಬ್ಬಂದಿ ನೆಲ್ಲಿಗುಡ್ಡೆ ಕೆರೆಯಲ್ಲಿ ಶವಶೋಧ ನಡೆಸುವ ವೇಳೆ ಮೊದಲಿಗೆ ತೆಪ್ಪ ಸಿಕ್ಕಿದೆ.

ಬಳಿಕ ಇಬ್ಬರು ಸಾವನ್ನಪ್ಪಿರುವುದು ಖಾತ್ರಿಯಾಗಿ ಶೋಧ ನಡೆಸಿದಾಗ ಇಬ್ಬರ ಮೃತದೇಹಗಳು ಬಲೆಯಲ್ಲಿ ಸಿಲುಕಿದ್ದು ಹೊರತೆಗೆಯಲಾಗಿದೆ.

English summary
Two men are dead after a boat capsized Sunday evening in Nelligudde Kere near Bidadi, Ramanagara district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X