ಕನ್ನಡ ನಾಡು-ನುಡಿ ಸುದ್ದಿಗೆ ಬಂದ್ರೆ ಸುಮ್ಮನೆ ಬಿಡ್ತಿವಾ?
ಬೆಂಗಳೂರು, ಫೆಬ್ರವರಿ, 11: ಕನ್ನಡ ನಾಡು, ನುಡಿಗೆ ಎಲ್ಲಿಯೇ ಸಂಕಷ್ಟ ಬಂದರೂ ಯಾರೂ ಸುಮ್ಮನಿರಬಾರದು. ಸಾಮಾಜಿಕ ತಾಣ ಫೇಸ್ ಬುಕ್ ನಲ್ಲಿ ಸದಾ ಕ್ರಿಯಾಶೀಲವಾಗಿರುವ "ಸಾಮಾನ್ಯ ಕನ್ನಡಿಗ" ಗುಂಪು ಇದೀಗ ಕನ್ನಡಕ್ಕೆ ಅವಮಾನ ಮಾಡಿದವರ ಬೆನ್ನು ಬಿದ್ದಿದೆ. ಅಲ್ಲದೇ ಅವಮಾನ ಮಾಡಿದವರಿಂದ ವಿಡಿಯೋ ಕ್ಷಮೆ ಯನ್ನು ಪಡೆದುಕೊಂಡಿದೆ.
ಮಹಾರಾಷ್ಟ್ರ ಮೂಲದ ಇಬ್ಬರು ಕನ್ನಡ ಭಾಷೆ ಮತ್ತು ಬೆಂಗಳೂರನ್ನು ಅವಹೇಳನ ಮಾಡುವಂತಹ ಪೋಸ್ಟ್ ಗಳನ್ನು ಫೇಸ್ ಬುಕ್ ನಲ್ಲಿ ಹಾಕಿದ್ದರು. ತಾಂಜಾನೀಯಾ ವಿದ್ಯಾರ್ಥಿನಿ ಪ್ರಕರಣವನ್ನು ಇಟ್ಟುಕೊಂಡು ಬೆಂಗಳೂರಿಗನ್ನು ನಿಂದಿಸಿದ್ದರು.[ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಹುದ್ದೆಗೆ 15 ಸ್ಪರ್ಧಿಗಳು]

ಕನ್ನಡಾಭಿಮಾನಿ ಪೇಜ್ ನ್ನು ಟಾಗ್ ಮಾಡಿ ಕೆಟ್ಟ ಪೋಸ್ಟ್ ಹಾಕಲಾಗಿತ್ತು. ಇದನ್ನು ಕಂಡ ಸಾಮಾನ್ಯ ಕನ್ನಡಿಗ ತಂಡದ ಸದಸ್ಯರು ಪೋಸ್ಟ್ ಮಾಡಿದವರಿಗೆ ತಿಳಿವಳಿಕೆ ಹೇಳಿ ಅದನ್ನು ತೆಗೆಸಿದ್ದಾರೆ.
ನಾವು ಏಕಾಏಕಿ ಅವರಿಗೆ ಬೆದರಿಕೆ ಹಾಕಲಿಲ್ಲ. ಕೆಟ್ಟ ಪೋಸ್ಟ್ ನ್ನು ತೆಗೆಯಿರಿ ಎಂದು ವಿನಂತಿ ಮಾಡಿಕೊಂಡರೆ ಕೇಳದೆ ಉಲ್ಟಾ ಮಾತನಾಡಿದರು. ಹಾಗಾಗಿ ನಾವು ಅವರ ಕಚೇರಿಗೆ ತೆರಳಿ ಒತ್ತಡ ಹೇರಬೇಕಾಗಿ ಬಂತು ಎಂದು ಸಾಮಾನ್ಯ ಕನ್ನಡಿಗ ಪೇಜ್ ಸಂಪಾದಕ ಸಿವಿಕ್ ಸೊಸೈಟಿ ಅಧ್ಯಕ್ಷ ಪವನ್ ತಿಳಿಸುತ್ತಾರೆ.[ಇಂಗ್ಲೀಷ್-ಎಲ್ಲರ ಕನ್ನಡ ನಿಘಂಟಿಗೆ ಮುನ್ನುಡಿ]
ಮಹಾರಾಷ್ಟ್ರದ ವ್ಯಕ್ತಿಯೊಬ್ಬ ತಾಂಜಾನೀಯಾ ವಿದ್ಯಾರ್ಥಿನಿ ಪ್ರಕರಣವನ್ನು ಆಧಾರವಾಗಿಟ್ಟುಕೊಂಡು ಬೆಂಗಳೂರಿಗರು ಮತ್ತು ಪೊಲೀಸರ ಮೇಲೆ ಕೆಂಡ ಕಾರಿದ್ದ. ಇದನ್ನು ಸಹಿಸದ ಸಾಮಾನ್ಯ ಕನ್ನಡಿಗ ತಂಡದವರು ಇಬ್ಬರಿಂದಲೂ ವಿಡಿಯೋ ಕ್ಷಮಾಪಣೆ ಪಡೆದುಕೊಂಡಿದ್ದಾರೆ.
ಇಂಥ ಕಾರ್ಯಗಳನ್ನು ಮಾಡುವವರು ಸ್ವಲ್ಪ ಎಚ್ಚರಿಕೆ ವಹಿಸಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ನಮ್ಮ ನೆಲ, ಜಲ, ಭಾಷೆಗೆ ಅವಹೇಳನ ಮಾಡಿದರೆ ಸುಮ್ಮನೆ ಬಿಡಲು ಸಾಧ್ಯವಿಲ್ಲ ಎಂದು ಸಮಾನ್ಯ ಕನ್ನಡಿಗ ತಂಡದ ಸಂದೀಪ್ ಹೇಳುತ್ತಾರೆ.
-
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ











Click it and Unblock the Notifications