ಇಬ್ಬರು ಕನ್ನಡಿಗರೀಗ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಕನ್ನಡಿಗರಾದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಮತ್ತು ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ನವದೆಹಲಿ, ಫೆಬ್ರವರಿ 17: ಸುಪ್ರಿಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಕನ್ನಡಿಗರಾದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಮತ್ತು ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆಗೆ ಸಂಬಂಧಿಸಿದ ಕೊಲಿಜಿಯಂ ಇತ್ತೀಚೆಗೆ ಇವರಿಬ್ಬರ ಹೆಸರನ್ನು ಸುಪ್ರಿಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಶಿಫಾರಸ್ಸು ಮಾಡಿತ್ತು. ಕೊಲಿಜಿಯಂ ಶಿಫಾರಸ್ಸನ್ನು ಕೇಂದ್ರ ಸರಕಾರ ಒಪ್ಪಿಕೊಂಡಿದ್ದು ಇಂದು ಇಬ್ಬರೂ ನ್ಯಾಯಮೂರ್ತಿ (ಫೆ. 17) ಪ್ರಮಾಣವಚನ ಸ್ವೀಕರಿಸಿದ್ದಾರೆ.[ನ್ಯಾಯಾಂಗ ವರ್ಗಾವಣೆ: ಕರ್ನಾಟಕ ಹೈಕೋರ್ಟಿನ ಇಬ್ಬರಿಗೆ ಪದೋನ್ನತಿ]

ನ್ಯಾಯಮೂರ್ತಿ ಅಬ್ದುಲ್ ನಜೀರ್:
ಕರ್ನಾಟಕ ಹೈಕೋರ್ಟಿನ ನ್ಯಾಯಮೂರ್ತಿಯಾಗಿ ಅಬ್ದುಲ್ ನಜೀರ್ ಸೇವೆ ಸಲ್ಲಿಸುತ್ತಿದ್ದರು. ಅವರೀಗ ನೇರ ಸುಪ್ರೀಂ ಕೊರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ್ದಾರೆ. 1958ರಲ್ಲಿ ಜನಿಸಿದ ಜಸ್ಟಿಸ್ ನಜೀರ್ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದವರು.
1983ರಲ್ಲಿ ಕರ್ನಾಟಕ ಹೈಕೋರ್ಟಿನಲ್ಲಿ ವಕೀಲಿ ಅಭ್ಯಾಸ ಆರಂಭಿಸಿದ ನಜೀರ್ 2003ರಲ್ಲಿ ಕರ್ನಾಟಕ ಹೈಕೋರ್ಟಿನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಆಯ್ಕೆಯಾದರು. ನಂತರ ಅವರನ್ನು ಖಾಯಂ ನ್ಯಾಯಮೂರ್ತಿಯಾಗಿ ನೆಮಕ ಮಾಡಲಾಯಿತು. ಕರ್ನಾಟಕ ಹೈಕೋರ್ಟಿನಲ್ಲಿ ಸುದೀರ್ಘ 14 ವರ್ಷ ಸೇವೆ ಸಲ್ಲಿಸಿದ ನಂತರ ಅಬ್ದುಲ್ ನಜೀರ್ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕವಾಗಿದ್ದಾರೆ.

ನ್ಯಾಯಮೂರ್ತಿ ಮೋಹನ್ ಎಮ್ ಶಾಂತನಗೌಡರ್:
ಮೋಹನ್ ಎಮ್ ಶಾಂತನಗೌಡರ್ ಈ ಹಿಂದೆ ಕೇರಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಕರ್ನಾಟಕದ ಹಾವೇರಿ ಜಿಲ್ಲೆಯ ಹಿರೇಕೆರೂರು ಇವರ ಹುಟ್ಟೂರು. ಧಾರವಾಡದಲ್ಲಿ ತಮ್ಮ ವಕೀಲಿ ವೃತ್ತಿ ಅಭ್ಯಾಸ ಆರಂಭಿಸಿದ ಶಾಂತನಗೌಡರ್ ನಂತರ ಬೆಂಗಳೂರಿಗೆ ಬಂದರು.
1991-93ರವರೆಗೆ ಕರ್ನಾಟಕ ಬಾರ್ ಕೌನ್ಸಿಲ್ ಉಪಾಧ್ಯಕ್ಷರಾಗಿ ಹಾಗೂ 1995-96ರವರೆಗೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. 2003ರಲ್ಲಿ ಇವರನ್ನು ಕರ್ನಾಟಕ ಹೈಕೋರ್ಟಿನ ಹೆಚ್ಚುವರಿ ನ್ಯಾಯಮೂರ್ತಿಯಾಗಿನೇಮಕ ಮಾಡಲಾಗಿತ್ತು. ಮುಂದೆ 2004ರಲ್ಲಿ ಶಾತನಗೌಡರ್ ರನ್ನು ಖಾಯಂ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಯಿತು.
2016ರಲ್ಲಿ ಮೋಹನ್ ಶಾಂತನಗೌಡರ್ ಅವರಿಗೆ ಕೇರಳ ಹೈಕೋರ್ಟಿಗೆ ಮೂಖ್ಯ ನ್ಯಾಯಮೂರ್ತಿಯಾಗಿ ಪದೋನ್ನತಿ ನೀಡಿ ವರ್ಗಾವಣೆ ಮಾಡಲಾಗಿತ್ತು.
ಕರ್ನಾಟಕ ಮೂಲದ ಇಬ್ಬರು ನ್ಯಾಯಮೂರ್ತಿಗಳು ಸೇರಿ ಒಟ್ಟು 5 ಜನ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications