ಆರ್.ಡಿ ಪರೇಡ್ ನೋಡಲಿದ್ದಾರೆ ಪುಟ್ಟಮ್ಮ, ರುದ್ರಪ್ಪ
ಚಾಮರಾಜನಗರ, ಜ.21 : ದೇಶದ ಹೆಮ್ಮೆಯ ಗಣರಾಜ್ಯೋತ್ಸವದ ಪರೇಡ್ ವೀಕ್ಷಿಸಲು ರಾಜ್ಯದ ಇಬ್ಬರು ಬುಡಕಟ್ಟು ಜನರಿಗೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ. ಕಾಡು ಮಾತ್ರ ನಮ್ಮ ಬದುಕು ಎಂದು ಬದುಕುತ್ತಿರುವ ಬುಡಕಟ್ಟು ಪಂಗಡದ ಇಬ್ಬರು ಈ ಬಾರಿ ವಿಮಾನವೇರಿ ದೆಹಲಿಗೆ ತೆರಳಲಿದ್ದು, ಜ.26ರಂದು ನಡೆಯುವ ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಲಿದ್ದಾರೆ.
ಪ್ರತಿ ವರ್ಷ ಕರ್ನಾಟಕದಿಂದ ಗಣರಾಜ್ಯೋತ್ಸವದ ಕಾರ್ಯಕ್ರಮಗಳು, ಪರೇಡ್ ವೀಕ್ಷಣೆ ಮತ್ತು ವಿಶೇಷ ಔತಣಕೂಟಕ್ಕೆ ಪರಿಶಿಷ್ಟ ಪಂಗಡದ ಒಬ್ಬ ಪುರುಷ ಮತ್ತು ಮಹಿಳೆಯನ್ನು ಬುಡುಕಟ್ಟು ವ್ಯವಹಾರಗಳ ಮಂತ್ರಾಲಯ ಆಹ್ವಾನಿಸುತ್ತದೆ. ಮೈಸೂರಿನ ರಾಜ್ಯ ಗಿರಿಜನ ಸಂಶೋಧನಾ ಸಂಸ್ಧೆ ಇವರನ್ನು ಆಯ್ಕೆ ಮಾಡಿ ಕಳುಹಿಸುತ್ತದೆ.

ಅದರಂತೆ ಈ ಬಾರಿ ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಗ್ರಾಮದ ಶ್ರೀಶೈಲ ರುದ್ರಪ್ಪ ಅಂಟಿನ್ ಮತ್ತು ಚಾಮರಾಜನಗರ ಜಿಲ್ಲೆಯ ಸೋಲಿಗ ಮಹಿಳೆ ಪುಟ್ಟಮ್ಮ ಅವರನ್ನು ಆಯ್ಕೆ ಮಾಡಲಾಗಿದ್ದು, ಇಬ್ಬರನ್ನೂ ಕರೆದೊಯ್ಯುವ ಜವಾಬ್ದಾರಿಯನ್ನು ಚಾಮರಾಜನಗರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಜಿ.ಎಸ್. ಸೋಮಶೇಖರ ಅವರಿಗೆ ವಹಿಸಲಾಗಿದೆ.
ಗುಂಡ್ಲುಪೇಟೆ ತಾಲೂಕಿನ ಕಾರೇಮಾಳ ಗ್ರಾಮದ ಸೋಲಿಗ ಜನಾಂಗದ ಮಹಿಳೆ ಪುಟ್ಟಮ್ಮ ಗುಂಡ್ಲುಪೇಟೆ ತಾಲೂಕು ಆದಿವಾಸಿ ಬುಡಕಟ್ಟು ಸಂಘದ ಅಧ್ಯಕ್ಷೆ ಹಾಗೂ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗಿರಿಜನರ ಪುನರ್ ವಸತಿ, ಹಕ್ಕುಪತ್ರ ವಿತರಣೆ, ಪಡಿತರ ವ್ಯವಸ್ಥೆ, ಶಿಕ್ಷಣ ಸೇರಿದಂತೆ ಹಲವು ಹೋರಾಟದಲ್ಲಿ ಕಳೆದೆರಡು ದಶಕಗಳಿಂದ ಹೋರಾಡುತ್ತಿದ್ದಾರೆ.
ಆದ್ದರಿಂದ ಅವರನ್ನು ಈ ಬಾರಿ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಆಹ್ವಾನಿಸಲಾಗಿದೆ. ಗಣರಾಜ್ಯೋತ್ಸವದ ಕಾರ್ಯಕ್ರಮಗಳು, ಪರೇಡ್ ವೀಕ್ಷಣೆ ಜತೆಗೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಹಾಗೂ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರನ್ನು ಭೇಟಿಯಾಗುವ ಅವಕಾಶವೂ ಪುಟ್ಟಮ್ಮ ಮತ್ತು ರುದ್ರಪ್ಪ ಅವರಿಗೆ ದೊರೆಯಲಿದೆ. ಇಬ್ಬರು ಜ.26ರಂದು ಮಧ್ಯಾಹ್ನ ರಾಷ್ಟ್ರಪತಿಯೊಂದಿಗೆ ವಿಶೇಷ ಔತಣಕೂಟದಲ್ಲಿಯೂ ಭಾಗವಹಿಸಲಿದ್ದಾರೆ.
ಸೋಲಿಗರು ಕಾಡನ್ನು ಬಿಟ್ಟು ನಾಡಿಗೆ ಬರಲು ಭಯ ಪಡುತ್ತಾರೆ. ಹಲವು ಹೋರಾಟಗಳಲ್ಲಿ ಭಾಗವಹಿಸಿ ಸ್ವಲ್ಪ ಮಟ್ಟಿಗೆ ನಾಡಿನ ಪರಿಚಯವಿದ್ದ ಪುಟ್ಟಮ್ಮ ಮತ್ತು ರುದ್ರಪ್ಪ ಅಂಟಿನ್ ಅವರನ್ನು ಆಯ್ಕೆ ಮಾಡಲಾಗಿದೆ. ಇವರಿಬ್ಬರನ್ನು ಕರೆದುಕೊಂಡು ಹೋಗುವ ಜವಾಬ್ದಾರಿಯನ್ನು ಸರ್ಕಾರ ತಮನೆ ನೀಡಿದೆ ಎಂದು ಸೋಮಶೇಖರ್ ಹೇಳಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications