ಚಿಕ್ಕಮಗಳೂರಿನಲ್ಲಿ ಇಬ್ಬರು ನಕ್ಸಲರ ಶರಣಾಗತಿ
ಚಿಕ್ಕಮಗಳೂರು, ಡಿ.8 : ಕರ್ನಾಟಕದ ಇಬ್ಬರು ನಕ್ಸಲ್ ನಾಯಕರು ಪೊಲೀಸರಿಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂರ್ ಜುಲ್ಫೀಕರ್ ಮತ್ತು ಸಿರಿಮನೆ ನಾಗರಾಜ್ ಶರಣಾಗಿದ್ದಾರೆ. ಜುಲ್ಫೀಕರ್ ವಿರುದ್ಧ 4 ಮತ್ತು ನಾಗರಾಜ್ ವಿರುದ್ಧ 2 ಪ್ರಕರಣಗಳು ದಾಖಲಾಗಿವೆ
ಶಾಂತಿಗಾಗಿ ನಾಗರಿಕ ವೇದಿಕೆಯ ಸದಸ್ಯರು ಕಳೆದ ಒಂದು ವರ್ಷದಿಂದ ನಡೆಸಿದ ನಿರಂತರ ಪ್ರಯತ್ನದ ಫಲವಾಗಿ ನಕ್ಸಲರು ಇಂದು ಶರಣಾಗಿದ್ದಾರೆ. ನೂರ್ ಜುಲ್ಫೀಕರ್ ಮತ್ತು ಸಿರಿಮನೆ ನಾಗರಾಜ್ ಅವರನ್ನು ಇಂದು ಬೆಳಗ್ಗೆ ಚಿಕ್ಕಮಗಳೂರು ಪ್ರವಾಸಿ ಮಂದಿರಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ, ಪತ್ರಕರ್ತೆ ಗೌರಿ ಲಂಕೇಶ್, ಶಿವಸುಂದರ್, ನಗರಿ ಬಾಬಯ್ಯ ಮುಂತಾದವರು ಬರಮಾಡಿಕೊಂಡರು.

ಮಧ್ಯಾಹ್ನ ಹೆಚ್.ಎಸ್.ದೊರೆಸ್ವಾಮಿ, ಪತ್ರಕರ್ತೆ ಗೌರಿ ಲಂಕೇಶ್ ಮುಂತಾದವರೊಂದಿಗೆ ಸಿರಿಮನೆ ನಾಗರಾಜ್ ಹಾಗೂ ನೂರ್ ಜುಲ್ಫೀಕರ್ ಜಿಲ್ಲಾಧಿಕಾರಿ ಬಿ.ಎಸ್.ಶೇಖರಪ್ಪ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಅವರನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೇಟಿ ಮಾಡಿದರು. [ಇಬ್ಬರು ನಕ್ಸಲರ ಶರಣಾಗತಿ]
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನೂರ್ ಜುಲ್ಫೀಕರ್ ಮತ್ತು ಸಿರಿಮನೆ ನಾಗರಾಜ್ ಐದು ವರ್ಷಗಳ ಹಿಂದೆಯೇ ಶರಣಾಗುವ ಆಲೋಚನೆ ಇತ್ತು. ಆದರೆ, ನಮ್ಮ ವಿರುದ್ಧ ಹಲವು ದೂರುಗಳು ದಾಖಲಾಗಿದ್ದರಿಂದ ಕಾನೂನು ತೊಡಕು ಉಂಟಾಗಿ ಅದು ಸಾಧ್ಯವಾಗಲಿಲ್ಲ ಎಂದರು.
ಸಿರಿಮನೆ ನಾಗರಾಜ್ : ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಸಿರಿಮನೆ ಗ್ರಾಮದಲ್ಲಿ 1952ರಲ್ಲಿ ಜನಿಸಿದ ನಾಗರಾಜ್ ಬಿಎಸ್ಸಿ ಪದವೀಧರರು. 1973ರಲ್ಲಿ ಮೈಸೂರಿನಲ್ಲಿ ಅಂಚೆ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದ ವೇಳೆ ಕಮ್ಯೂನಿಸ್ಟ್ ವಿಚಾರಧಾರೆಯತ್ತ ಪ್ರಭಾವಿತರಾಗುತ್ತಾರೆ.
1990ರಲ್ಲಿ ಸಾಕೇತ್ ರಾಜನ್ ಭೇಟಿಯಾಗಿ ಪೀಪಲ್ಸ್ ವಾರ್ ಪಕ್ಷದ ಸಂಪರ್ಕ ಪಡೆದು ಕರ್ನಾಟಕ ವಿಮೋಚನಾ ರಂಗಕ್ಕೆ ಸೇರ್ಪಡೆಯಾಗುತ್ತಾರೆ. 2000ದಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನ ವಿರೋಧಿಸಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಇವರು 2004ರಿಂದ ಭೂಗತರಾಗಿದ್ದರು.
ನೂರ್ ಜುಲ್ಫೀಕರ್ : ಚಿತ್ರದುರ್ಗದಲ್ಲಿ 1967ರಲ್ಲಿ ಜನಿಸಿಸಿದ ನೂರ್ ಜುಲ್ಫೀಕರ್ (ನೂರ್ ಶ್ರೀಧರ್) ಚಿತ್ರದರ್ಗುದ ಜೆಎಂಎಂಐಟಿ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ 5ನೇ ಸೆಮಿಸ್ಟರ್ ಓದಿದ್ದಾರೆ. ಇಂಜಿನಿಯರಿಂಗ್ ಓದುವ ವೇಳೆ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿಗಳಿಂದ ನಕ್ಸಲ್ ಚಳುವಳಿಯ ಪರಿಚಯವಾಗಿತ್ತು.
2001ರಿಂದ 2006ವರೆಗೆ ಮಾವೋವಾದಿ ಪಕ್ಷದಲ್ಲಿ ದೊಡ್ಡ ನಾಯಕರಾಗಿದ್ದ ನೂರ್ ಜುಲ್ಫೀಕರ್ 2004ರಲ್ಲಿ ಸಾಕೇತ್ ರಾಜನ್ ಎನ್ಕೌಂಟರ್ ಆದ ಬಳಿಕ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ನೇಮಕವಾಗಬೇಕೆಂಬ ಪ್ರಸ್ತಾಪವನ್ನು ಕೇಂದ್ರ ಸಮಿತಿ ಇವರ ಮುಂದೆ ಇಟ್ಟಿತ್ತು. ಆದರೆ ಇವರು ನಿರಾಕರಿಸಿದ್ದರು. 2006ರಿಂದ ಇವರು ಭೂಗತರಾಗಿದ್ದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications